ಜನೌಷಧಿ ಕೇಂದ್ರ ಸ್ಥಗಿತ; ರೋಗಿಗಳ ಪರದಾಟ
Team Udayavani, Jun 14, 2020, 11:55 AM IST
ಕುಂದಗೋಳ: ಕೋವಿಡ್-19ನಿಂದ ಉದ್ಯೋಗ ದೊರೆಯದೆ ಆರ್ಥಿಕ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಈಗ ಗಾಯದ ಮೇಲೆ ಬರೆ ಎಳೆದಿರುವಾಗಲೇ ಪಟ್ಟಣದಲ್ಲಿರುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವು ಮುಚ್ಚಿದ್ದರಿಂದ ಬಡ ರೋಗಿಗಳು ಪರದಾಡುವಂತಾಗಿದೆ.
ಈ ಕೇಂದ್ರವು ಬಡ ರೋಗಿಗಳಿಗೆ ಕಲ್ಪವೃಕ್ಷವಾಗಿತ್ತು. ಮಾರುಕಟ್ಟೆಯಲ್ಲಿರುವ ಔಷಧಿ ಅಂಗಡಿಗಳಲ್ಲಿ ದುಬಾರಿ ಬೆಲೆ ತೆತ್ತು ಔಷಧಿ ಖರೀದಿಸಲಾಗದ ಬಹುತೇಕರು ಈ ಕೇಂದ್ರವನ್ನೇ ಅವಲಂಬಿಸಿದ್ದರು. ಶುಗರ್, ಬಿಪಿ ಇರುವ ರೋಗಿಗಳು ನಿತ್ಯ ಔಷಧಿ ಸೇವಿಸಬೇಕಿರುವುದರಿಂದ ಇದೇ ಕೇಂದ್ರದಲ್ಲಿ ಕಡಿಮೆ ದರದಲ್ಲಿ ಔಷಧಿ ಖರೀದಿಸುತ್ತಿದ್ದರು. ಇದೀಗ ಕಳೆದ ಮೂರು ದಿನಗಳಿಂದ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ರಾಜೀನಾಮೆ ನೀಡಿದ್ದರಿಂದ ಈ ಕೇಂದ್ರ ಸ್ಥಗಿತಗೊಂಡಿದೆ. ಜನೌಷಧಿ ಕೇಂದ್ರ ತೆರೆಯದೇ ಇರುವುದರಿಂದ ಬಹುತೇಕ ಜನರು ಹುಬ್ಬಳ್ಳಿ ಮತ್ತಿತರ ಕಡೆಗೆ ಈ ಕೇಂದ್ರಕ್ಕೆ ತೆರಳಿ ಔಷಧಿ ಪಡೆಯಲಾಗದೇ ಪರದಾಡುವಂತಾಗಿದೆ. ಮಾರುಕಟ್ಟೆಯಲ್ಲಿರುವ ಅಂಗಡಿಗಳಿಗೆ ತೆರಳಿ ಹೆಚ್ಚು ಹಣ ನೀಡಿ ಔಷಧ ಖರೀದಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸುತ್ತಾರೆ ಬಸಾಪೂರದ ಶಿವಪ್ಪ ಹರಿಜನ. ಬಡ ರೋಗಿಗಳಿಗೆ ಈ ಜನೌಷಧಿ ಕೇಂದ್ರ ಉಪಯುಕ್ತವಾಗಿದೆ. ಈ ಭಾಗದ ಶಾಸಕರು, ಸಂಸದರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ಕೇಂದ್ರ ತೆರೆಯಲು ಪ್ರಯತ್ನಿಸಬೇಕಿದೆ.
ಇಲ್ಲಿರುವ ಸಿಬ್ಬಂದಿ ರಾಜೀನಾಮೆ ನೀಡಿದ್ದರಿಂದ ಭಾರತೀಯ ಜನೌಷಧಿ ಕೇಂದ್ರವು ಸ್ಥಗಿತವಾಗಿದೆ. ಈ ಕೇಂದ್ರವನ್ನು ಎಂಎಸ್ಐಎಲ್ನವರು ನಿರ್ವಹಿಸುತ್ತಿದ್ದು ಅವರಿಗೆ ಈಗಾಗಲೇ ಈ ಕುರಿತು ಮಾತನಾಡಿದ್ದೇನೆ. ಸಿಬ್ಬಂದಿಯನ್ನು ನೇಮಿಸುತ್ತೇವೆಂದು ಹೇಳಿದ್ದಾರೆ. ಡಾ|ಭಾಗೀರಥಿ, ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ.
–ಶೀತಲ್ ಎಸ್ ಮುರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
MUST WATCH
ಹೊಸ ಸೇರ್ಪಡೆ
CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Brahmavara-ಉಡುಪಿ ಟ್ರಾಫಿಕ್ ಜಾಮ್ ಸಮಸ್ಯೆ: ಸವಾರರು ಸುಸ್ತೋ ಸುಸ್ತು
Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ