ಕೈವಾರ: ಅನ್ನದಾನ ಭವನ ಉದ್ಘಾಟನೆ
Team Udayavani, Jun 15, 2020, 7:06 AM IST
ಚಿಂತಾಮಣಿ: ಶ್ರೀ ಕ್ಷೇತ್ರ ಕೈವಾರದ ಯೋಗಿನಾರೇಯಣ ಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಅನ್ನದಾನ ದಾಸೋಹ ಭವನದ ಉದ್ಘಾಟನೆಯನ್ನು ಕ್ಷೇತ್ರದ ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಮ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರಕ್ಕೆ ಬರುವ ಭಕ್ತರಿಗೆ ದಾಸೋಹ ಭವನದ ಅಗತ್ಯತೆ ಇತ್ತು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತರು ಭಾಗವಹಿಸುತ್ತಾರೆ.
ತಾತಯ್ಯನವರ ಪ್ರೇರಣೆಯಂತೆ ಟ್ರಸ್ಟ್ ಸಮಿತಿಯು ನಿರ್ಣಯ ತೆಗೆದುಕೊಂಡು ಅನ್ನದಾನ ಭವನ ವನ್ನು ಭಕ್ತರಿಗೆ ಸಮರ್ಪಣೆ ಮಾಡಲಾಗುತ್ತಿದೆ. ನೂತನ ತಂತ್ರಜ್ಞಾನವಾದ ಪ್ರಿಕ್ಯಾಸ್ಟ್ ವಿಧಾನದಲ್ಲಿ ಈ ಕಟ್ಟಡ ನಿರ್ಮಿಸಲಾಗಿ ದೆ. ಸುಮಾರು 2000 ಭಕ್ತರು ಒಟ್ಟಿಗೆ ಕುಳಿತು ಪ್ರಸಾದ ಸ್ವೀಕರಿಸಬಹುದು. ಮುಂದಿನ ದಿನಗಳಲ್ಲಿ ಭಕ್ತರಿ ಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ ಎಂದರು.
ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಾತಃಕಾಲ ಘಂಟನಾದ, ಸುಪ್ರಭಾತ, ಗೋಪೂಜೆಯೊಂದಿಗೆ ಭವನದ ಉದ್ಘಾಟನಾ ಕಾರ್ಯಕ್ರಮವು ಆರಂಭವಾ ಯಿತು. ನಂತರ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಯನ್ನು ಅಲಂಕೃತ ಪಲ್ಲಕ್ಕಿಯಲ್ಲಿ ಅನ್ನದಾನ ಭವನಕ್ಕೆ ಕರೆತರಲಾಯಿತು. ನಂತರ ಗಂಗಪೂಜೆ, ಗಣಪತಿ ಪೂಜೆ, ಕಲಶಾರಾಧನೆ, ವಾಸ್ತುಹೋಮ, ಬಲಿಹರಣ, ಗಣಹೋಮ ಇನ್ನಿತರ ಪೂಜೆ ಸಮರ್ಪಿಸಲಾಯಿತು.
ತಾತಯ್ಯನವರ ಉತ್ಸವ ಮೂರ್ತಿಗೆ ಪಂಚಾಮೃತ ಅಭಿಷೇಕ ಸಮರ್ಪಿಸಿ, ಷೋಡಶೋಪಚಾರ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಬೆಳಗಲಾಯಿತು. ಯೋಗಿನಾರೇಯಣ ಸಂಕೀರ್ತನಾ ಯೋಜನೆ ಸಂಚಾಲಕ ವಾನರಾಶಿ ಬಾಲಕೃಷ್ಣ ಭಾಗವತರ್ ಅವರಿಂದ ಸಾಮೂಹಿಕ ನಾಮಸಂಕೀರ್ತನೆ ಹಮ್ಮಿಕೊಳ್ಳ ಲಾಗಿತ್ತು. ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಾ.ಎಂ. ಆರ್.ಜಯರಾಮ್ ದಂಪತಿ, ಟ್ರಸ್ಟ್ನ ಉಪಾಧ್ಯಕ್ಷ ಜೆ. ವಿಭಾಕರರೆಡ್ಡಿ, ಖಜಾಂಚಿ ಆರ್.ಪಿ.ಎಂ.ಸತ್ಯನಾರಾಯಣ್, ಸದಸ್ಯರಾದ ವೇಣುಗೋಪಾಲ್, ಕೆ.ನರಸಿಂಹಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ
Tollywood: ಜೂ.ಎನ್ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ
Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ
Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ