ಜನಪರ ಯೋಜನೆ ಜಾರಿಗೆ ತಂದ ಪ್ರಧಾನಿ
Team Udayavani, Jun 15, 2020, 5:32 PM IST
ಕುಂದಗೋಳ: ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮುಟ್ಟಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಎಂ.ಆರ್. ಪಾಟೀಲ ಹೇಳಿದರು.
ಪಟ್ಟಣದಲ್ಲಿ ರವಿವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕೋವಿಡ್ನಿಂದ ಇಡೀ ವಿಶ್ವವೇ ತತ್ತರಿಸಿರುವಾಗ ಪ್ರಧಾನಿಗಳು ಜನರಿಗೆ ಆರ್ಥಿಕ ನೆರವು ಸಮರ್ಪಕವಾಗಿ ನೀಡುವುದರ ಮೂಲಕ ಸಹಕಾರಿಯಾಗಿದ್ದಾರೆ.30ಕ್ಕೂ ಹೆಚ್ಚು ದೇಶಗಳಲ್ಲಿನ ಭಾರತೀಯ ನಿವಾಸಿಗಳನ್ನು ವಂದೇ ಮಾತರಂ ಹಾಗೂ ಸಮುದ್ರ ಸೇತು ಯೋಜನೆ ಮೂಲಕ ತಾಯ್ನಾಡಿಗೆ ಕರೆ ತಂದಿದ್ದಾರೆ.
ಕೋವಿಡ್ ಸಿಬ್ಬಂದಿಗೆ ಆರೋಗ್ಯ ಭದ್ರತೆಗೆ ಆದ್ಯತೆ ನೀಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಪ್ರಧಾನ ಮಂತ್ರಿಯವರು ರಾಮಮಂದಿರ ನಿರ್ಮಾಣ, ತ್ರಿವಳಿ ತಲಾಕ್ ಹೀಗೆ ಜನಪರ ನಿರ್ಣಯಗಳನ್ನು ಸಮರ್ಥವಾಗಿ ಮಂಡಿಸಿ ಐತಿಹಾಸಿಕ ನಿರ್ಣಯಗಳನ್ನು ಕೈಗೊಂಡಿದ್ದಾರೆ. ಈ ಭಾಗದ ಸಂಸದ ಹಾಗೂ ಕೇಂದ್ರ ಮಂತ್ರಿ ಪ್ರಹ್ಲಾದ ಜೋಶಿಯವರು ಕೋವಿಡ್ ನಿಯಂತ್ರಣ, ಹೊರರಾಜ್ಯದಲ್ಲಿರುವ ನಮ್ಮ ಕ್ಷೇತ್ರದ ಜನರನ್ನು ಕರೆ ತರಲು ಹಾಗೂ ಕೋವಿಡ್ ವಾರಿಯರ್ಸ್ ಅವರಿಗೆ ಆತ್ಮ ಬಲ ತುಂಬಲು ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆಂದರು.ದರು.
ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ಪ್ರಧಾನ ಕಾರ್ಯದರ್ಶಿ ಮಾಲತೇಶ ಶ್ಯಾಗೋಟಿ, ತಾಲೂಕು ಅಧ್ಯಕ್ಷ ರವಿ ಪಾಟೀಲ, ಮುಖಂಡರಾದ ಪೃಥ್ವಿರಾಜ ಕಾಳೆ, ಟಿ.ಜಿ. ಬಾಲಣ್ಣವರ, ಪಂಕಜಾ ಕೋರಿ,ಭರಮಗೌಡ ದ್ಯಾವನಗೌಡ್ರ, ಡಿ.ವೈ.ಲಕ್ಕನಗೌಡ್ರ,ಸಿ. ಎಂ. ಕಾಳೆ, ಪ್ರಕಾಶ ಕುಬಿಹಾಳ, ವಾಗೇಶ ಮಣಕಟ್ಟಿಮಠ, ಬಿಟಿ ಗಂಗಾಯಿ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ