ಶಾಸಕ ಪರಮೇಶ್ವರನಾಯ್ಕ ಮಗನ ಮದುವೆಯಲ್ಲಿ ಏನು ನಡೆದಿದೆ ಎಂದು ನಾನು ನೋಡಿಲ್ಲ: ಬೊಮ್ಮಾಯಿ
Team Udayavani, Jun 15, 2020, 4:23 PM IST
ದಾವಣಗೆರೆ: ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಅವರ ಮಗನ ಮದುವೆಯಲ್ಲಿ ಏನು ನಡೆದಿದೆ ಎಂಬುದನ್ನು ನಾನು ನೋಡಿಲ್ಲ. ಬಳ್ಳಾರಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಗಮನಿಸಿರುತ್ತಾರೆ. ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ. ಕಾನೂನು ಎಲ್ಲರಿಗೂ ಒಂದೇ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಮದುವೆ ಮಾಡುವ ಬಗ್ಗೆ ಕಾನೂನು, ಮಾರ್ಗಸೂಚಿ ಮಾಡಲಾಗಿದೆ ಎಂದರು.
ಬಿಜೆಪಿ ಸರ್ಕಾರ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಬದ್ದ. ಭೂ ಸುಧಾರಣಾ ಕಾಯ್ದೆಯಡಿ ಭೂ ಖರೀದಿಗೆ ಅವಕಾಶ ಇದೆ. 79 ಎ ಮತ್ತು ಬಿ ಅನ್ವಯ ಭೂ ಖರೀದಿಗೆ ಅವಕಾಶ ಇದ್ದಾಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿತ್ತು. ನಮ್ಮ ಸರ್ಕಾರ ರೈತರ ಹಿತ ಕಾಯಲು ಬದ್ದ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ರಾಘವೇಂದ್ರ ಔರಾದ್ಕರ್ ವರದಿ ಜಾರಿಯಾಗಿದೆ. ಪೊಲೀಸರ ಮೂಲ ವೇತನ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಪಿ.ಟಿ.ಪರಮೇಶ್ವರನಾಯಕ್ ಮೇಲೆ ಪ್ರಕರಣ ದಾಖಲು: ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರದಲ್ಲಿ ಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯಕ್ ಅವರ ಪುತ್ರನ ಮದುವೆಯಲ್ಲಿ ಕೋವಿಡ್ ಎಸ್ಒಪಿ ನಿಯಮಗಳ ಉಲ್ಲಂಘನೆ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. 50ಕ್ಕಿಂತ ಹೆಚ್ಚು ಜನರು ಮದುವೆಯಲ್ಲಿ ಪಾಲ್ಗೊಳ್ಳಬಾರದು ಎಂಬ ಎಸ್ಒಪಿ ನಿಯಮಾವಳಿಯನ್ನು ಈ ಆರತಕ್ಷತಾ ಕಾರ್ಯಕ್ರಮದಲ್ಲಿ ಉಲ್ಲಂಘಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್