ವಿಪ್ ಉಲ್ಲಂಘಿಸಿ ಕೈ ಸೇರಿದ್ದ ಬಿಜೆಪಿ ಜಿ.ಪಂ.ಸದಸ್ಯರು ಅನರ್ಹ: ಚುನಾವಣಾ ಆಯೋಗ


Team Udayavani, Jun 15, 2020, 7:22 PM IST

ವಿಪ್ ಉಲ್ಲಂಘಿಸಿ ಕೈ ಸೇರಿದ್ದ ಬಿಜೆಪಿ ಜಿ.ಪಂ.ಸದಸ್ಯರು ಅನರ್ಹ: ಚುನಾವಣಾ ಆಯೋಗ

ಧಾರವಾಡ : ಬಿಜೆಪಿ ಪಕ್ಷದಿಂದ ಧಾರವಾಡ ಜಿ.ಪಂ.ಗೆ ಸದಸ್ಯರಾಗಿ ಆಯ್ಕೆಯಾಗಿ ಜಿ.ಪಂ.ಅಧ್ಯಕ್ಷರಾಗಿದ್ದ ಬಿಜೆಪಿಯ ಚೈತ್ರಾ ಶಿರೂರ ಅವರ ವಿರುದ್ದ ಕಾಂಗ್ರೆಸ್ ಸದಸ್ಯರು ಮಂಡಿಸಿದ ಅವಿಶ್ವಾಸ ಗೊತ್ತುವಳಿ ಮಂಡನೆ ಪರ ಮತ ಚಲಾವಣೆ ಮಾಡಿದ್ದ ನಾಲ್ವರು ಸದಸ್ಯರನ್ನು ಚುನಾವಣಾ ಆಯೋಗ ಅನರ್ಹಗೊಳಿಸಿ, ಆದೇಶ ನೀಡಿದೆ.

ಗರಗ ಜಿ.ಪಂ.ಕ್ಷೇತ್ರದ ರತ್ನಾ ದಯಾನಂದ ಪಾಟೀಲ, ಗಳಗಿ ಕ್ಷೇತ್ರದ ಅಣ್ಣಪ್ಪ ಫಕ್ಕೀರಪ್ಪ ದೇಸಾಯಿ, ತಬಕದಹೊನ್ನಿಹಳ್ಳಿ ಕ್ಷೇತ್ರದ ಮಂಜವ್ವ ಶೇಖಪ್ಪ ಹರಿಜನ, ಗುಡಕೇರಿ ಕ್ಷೇತ್ರದ ಜ್ಯೋತಿ ಬೆಂತೂರ ಅವರದ್ದೇ ಸದಸ್ಯತ್ವ ಅನರ್ಹಗೊಂಡಿದೆ.

2019 ಫೆ.5 ರಂದು ನಡೆದ ವಿಶೇಷ ಸಭೆಯಲ್ಲಿ ಜಿ.ಪಂ.ಅಧ್ಯಕ್ಷೆ ಚೈತ್ರಾ ಶಿರೂರ ಅವರ ವಿರುದ್ದ ಕಾಂಗ್ರೆಸ್ ಪಕ್ಷದ ಸದಸ್ಯರು ಮಂಡಿಸಲಾದ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಜಯವಾಗಿತ್ತು. ಒಟ್ಟು 22 ಸಂಖ್ಯಾ ಬಲದ ಜಿ.ಪಂ.ನಲ್ಲಿ 10 ಬಿಜೆಪಿ ಹಾಗೂ 11 ಕಾಂಗ್ರೆಸ್, ಓರ್ವ ಪಕ್ಷೇತರ ಸದಸ್ಯರಿದ್ದರು. ಈ ಪೈಕಿ ಅವಿಶ್ವಾಸ ಗೊತ್ತುವಳಿ ಪರ 15 ಮತಗಳು ಬೇಕಾಗಿತ್ತು. ಆದರೆ ಸಭೆಯಲ್ಲಿ ಕಾಂಗ್ರೆಸ್ 11, ಬಿಜೆಪಿ 4 ಹಾಗೂ ಪಕ್ಷೇತರ ಸದಸ್ಯರು ಸೇರಿ ಒಟ್ಟು 16 ಮತಗಳು ಬಿದ್ದರೆ ಗೊತ್ತುವಳಿ ವಿರುದ್ದ ಬಿಜೆಪಿಯ 6 ಸದಸ್ಯರ ಮತಗಳು ಬಿದ್ದಿದ್ದವು. ಈ ಮೂಲಕ ಅವಿಶ್ವಾಸ ಗೊತ್ತುವಳಿ ಮಂಡನೆ ಪರ ಹೆಚ್ಚು ಮತಗಳು ಬಿದ್ದು, ಅದು ಅಂಗೀಕಾರಗೊಳ್ಳುವ ಮೂಲಕ ಚೈತ್ರಾ ಶಿರೂರ ಅಧ್ಯಕ್ಷ ಸ್ಥಾನದಿಂದ ಕೆಳಗಡೆ ಇಳಿಯಬೇಕಾಗಿತ್ತು. ಇನ್ನೂ ಕಾಂಗ್ರೆಸ್ ಪರ ಮತ ಚಲಾಯಿಸಿದ ಆ ನಾಲ್ವರು ಬಿಜೆಪಿ ಸದಸ್ಯರು, ಪಕ್ಷದ ಜಿಲ್ಲಾಧ್ಯಕ್ಷರ ಕೈಗೆ ಸಿಕ್ಕಿರಲಿಲ್ಲ. ಅದರಲ್ಲೂ ಮಂಜವ್ವ ಹರಿಜನ ಅವರ ಅಪಹರಣ ಮಾಡಲಾಗಿದೆ ಎಂಬುದಾಗಿ ಕಲಘಟಗಿ ಠಾಣೆಯಲ್ಲಿ ದೂರ ಸಹ ದಾಖಲಿಸಲಾಗಿತ್ತು. ಜಿಲ್ಲಾಧ್ಯಕ್ಷರ ಕೈಗೆ ಸಿಗದೇ ತಿರುಗಾಡಿದ್ದ ಈ ನಾಲ್ವರು ಸದಸ್ಯರು, ವಿಶೇಷ ಸಭೆಯಲ್ಲಿ ಪ್ರತ್ಯಕ್ಷರಾಗಿದ್ದರು. 45 ವಿಷಯದಲ್ಲಿ ಮುಕ್ತಾಯಗೊಂಡ ಸಭೆಯ ಬಳಿಕ ಅವರನ್ನು ಪೊಲೀಸರ ಭದ್ರತೆಯಲ್ಲಿ ವಾಹನದ ಮೂಲಕವೇ ಸುರಕ್ಷಿತವಾಗಿ ಹೊರಗಡೆ ಕಳುಹಿಸಲಾಗಿತ್ತು. ಇದಾದ ಬಳಿಕ ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್‌ನ ವಿಜಯಲಕ್ಷ್ಮೀ ಪಾಟೀಲ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಆಗ ಅಸ್ತಿತ್ವದಲ್ಲಿದ್ದ ಸಮ್ಮಿಶ್ರ ಸರಕಾರಕ್ಕೆ ಆಪರೇಷನ್ ಕಮಲದ ಭೀತಿ ನೀಡುತ್ತಿರುವ ಬಿಜೆಪಿ ಪಕ್ಷಕ್ಕೆ ಧಾರವಾಡ ಜಿ.ಪಂ.ನಲ್ಲಿ ಕಾಂಗ್ರೆಸ್ ಪಕ್ಷವೇ ಯಶಸ್ವಿಯಾಗಿ ಆಪರೇಷನ್ ಮಾಡಿ, ಜಿ.ಪಂ.ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳುವಂತೆ ಮಾಡಿತ್ತು. ಮಾಜಿ ಸಿಎಂ, ಬಿಜೆಪಿ ರಾಜ್ಯ

ನಾಯಕರಾಗಿರುವ ಜಗದೀಶ ಶೆಟ್ಟರ್, ಸಂಸದ ಪ್ರಹ್ಲಾದ ಜೋಶಿ ಅವರಂತಹ ಘಟಾನುಘಟಿ ನಾಯಕರ ಜಿಲ್ಲೆಯಲ್ಲೇ ಆಪರೇಷನ್ ಕೈ ಆಗಿ ಜಿ.ಪಂ.ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳುವಲ್ಲಿ ಬಿಜೆಪಿ ವಿಫಲಗೊಂಡಿತ್ತು. ಹೀಗಾಗಿ ಬಿಜೆಪಿ ಚಿಹ್ನೆಯಡಿ ಆಯ್ಕೆಯಾಗಿದ್ದ ನಾಲ್ವರು ಸದಸ್ಯರು ಪಕ್ಷದ ವಿಪ್ ಉಲ್ಲಂಘನೆ ಮಾಡಿದ್ದು, ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವಂತೆ ಅಂದಿನ ಬಿಜೆಪಿ ಜಿಲ್ಲಾ ಅಧ್ಯಕ್ಷ ಈರಣ್ಣ ಜಡಿ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಇದೀಗ ಚುನಾವಣಾ ಆಯೋಗ ಅನರ್ಹಗೊಳಿಸಿದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.