ಪೋಕ್ಸೊ ಬಾಲಾಪರಾಧಿ ಅನುಮಾನಾಸ್ಪದ ಸಾವು

ಇಬ್ಬರು ಗೃಹ ರಕ್ಷಕ ಸಿಬ್ಬಂದಿಗಳ ಬಂಧನ ; ಹೌಸ್ ಫಾದರ್ ನಾಪತ್ತೆ

Team Udayavani, Jun 15, 2020, 11:13 PM IST

ಪೋಕ್ಸೊ ಬಾಲಾಪರಾಧಿ ಅನುಮಾನಾಸ್ಪದ ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಳ್ಳಾರಿ: ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗಿ, ನಗರದ ಬಾಲಾಪರಾಧಿ ಮಂದಿರದಲ್ಲಿ ಇಡಲಾಗಿದ್ದ ಅಪ್ರಾಪ್ತ ಬಾಲಕ ಅನುಮಾನಾಸ್ಪದವಾಗಿ ಭಾನುವಾರ ಸಂಜೆ ಮೃತಪಟ್ಟಿದ್ದಾನೆ.

ನೆರೆಯ ಕೊಪ್ಪಳ ಜಿಲ್ಲೆಯವನಾಗಿದ್ದ 16 ವರ್ಷದ ಈ ಬಾಲಕನು ವಿರುದ್ಧ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಬೆಳಗಿನ ಜಾವ 1.30 ಗಂಟೆ ಸುಮಾರಿಗೆ ನಗರದ ಎಸ್‌ಪಿ ವೃತ್ತ ಬಳಿಯ ಬಾಲಾಪರಾಧ ಮಂದಿರಕ್ಕೆ ಕರೆತರಲಾಗಿತ್ತು.

ಆದರೆ, ಭಾನುವಾರ ಸಂಜೆ ಹೊತ್ತಿಗೆ ಬಾಲಕನು ಅನುಮಾಸ್ಪದವಾಗಿ ಮೃತಪಟ್ಟಿದ್ದಾನೆ. ಈ ಕುರಿತು ಕೌಲ್‌ ಬಜಾರ್ ಠಾಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.

ಸಾವಿಗೆ ಕಾರಣವೇನು ಎಂಬುದು ತನಿಖೆಯಿಂದ ಬಹಿರಂಗವಾಗಬೇಕಿದೆ. ಮಂದಿರಕ್ಕೆ ಭದ್ರತೆ ಒದಗಿಸುತ್ತಿದ್ದ ಇಬ್ಬರು ಗೃಹ ರಕ್ಷಕ ಸಿಬ್ಬಂದಿಗಳನ್ನು ಬಂಧಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯ 2ನೇ ಹೆಚ್ಚುವರಿ ನ್ಯಾಯಾಧೀಶ ರಘುನಾಥ್‌ಗೌಡ ಸಮಕ್ಷಮದಲ್ಲಿ ಮೃತ ಬಾಲಕನ ಮರಣೋತ್ತರ ಪರೀಕ್ಷೆ ಸೋಮವಾರ ಸಂಜೆ ನಡೆಯಿತು.

ಸಾವಿನ ಸುತ್ತ ಅನುಮಾನದ ಹುತ್ತ
ಬಾಲಾಪರಾಧ ಮಂದಿರಕ್ಕೆ ಭದ್ರತೆ ಒದಗಿಸುತ್ತಿದ್ದ ಗೃಹರಕ್ಷಕರಾದ ಮಾರುತಿ, ಓಬಳೇಶ್ ಎನ್ನುವವರು ಬಂಧನದಲ್ಲಿದ್ದಾರೆ. ಆದರೆ, ಮಾರುತಿ ಎನ್ನುವ ಗೃಹರಕ್ಷಕ ಸಿಬ್ಬಂದಿಯು ಕಳೆದ ಮೇ 30ರಂದೇ ಬಾಲಾಪರಾಧ ಮಂದಿರದಿಂದ ರಿಲೀವ್ ಆಗಿ ಅವನ ಸ್ಥಾನಕ್ಕೆ ಓಬಳೇಶ್ ಎನ್ನುವವರನ್ನು ನಿಯೋಜಿಸಲಾಗಿದೆ. ಆದರೂ, ಮಾರುತಿ ಎನ್ನುವವರು ಬಾಲಮಂದಿರಕ್ಕೇಕೆ ಬಂದಿದ್ದರು ಎಂಬುದು ಸ್ಪಷ್ಟವಾಗಬೇಕಿದೆ.

ಅಲ್ಲದೇ, ಮೃತ ಬಾಲಕನ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಮಂದಿರದ ಇನ್ನಿಬ್ಬರು ಬಾಲಕರಿಗೂ ತೀವ್ರವಾದ ಗಾಯಗಳಾಗಿವೆ. ಜತೆಗೆ ಮಂದಿರದ ಹೌಸ್ ಫಾದರ್ ನಾಪತ್ತೆಯಾಗಿದ್ದಾರೆ, ಅಧೀಕ್ಷಕರು ರಜೆಯಲ್ಲಿದ್ದಾರೆ ಎನ್ನಲಾಗುತ್ತಿದೆ.

ಪ್ರಕರಣ ದಾಖಲಿಸಿಕೊಂಡಿರುವ ಕೌಲ್‌ಬಜಾರ್ ಪೊಲೀಸರು ಬಾಲಾಪರಾಧ ಮಂದಿರದ ಸಿಸಿಟಿವಿ ಪುಟೇಜ್‌ಗಳನ್ನು ಪಡೆದು ತನಿಖೆ ಕೈಗೆತ್ತಿಕೊಂಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.