ಬಂಟ್ವಾಳ: ಮಳೆಯಿಂದ ವಿವಿಧೆಡೆ ಹಾನಿ
Team Udayavani, Jun 16, 2020, 5:52 AM IST
ಬಂಟ್ವಾಳ: ತಾಲೂಕಿನಲ್ಲಿ ಜೂ. 14ರಂದು ದಿನವಿಡೀ ಉತ್ತಮ ಮಳೆಯಾಗಿದ್ದು, ಹಲವು ಕಡೆ ಮನೆಗಳಿಗೆ ಹಾನಿಯಾಗಿರುವ ಜತೆಗೆ ಇತರ ಸಣ್ಣಪುಟ್ಟ ಹಾನಿ ಸಂಭವಿಸಿದೆ.
ಇರಾ ಗ್ರಾಮದ ಮೋಂತಿಮಾರು ಪಡು³ನಲ್ಲಿ ರವಿವಾರ ಹಮೀದ್ ಅವರ ಮನೆ ಬಳಿಯ ತಡೆಗೋಡೆ ರಫೀಕ್ ಅವರ ಮನೆಗೆ ಬಿದ್ದು, ಮನೆಗೆ ಕೊಂಚ ಹಾನಿಯಾಗಿದೆ. ಮೇಲ್ಭಾಗದಲ್ಲಿರುವ ಹಮೀದ್ ಅವರ ಮನೆಯೂ ಅಪಾಯದ ಸ್ಥಿತಿಯಲ್ಲಿದೆ.
ಪುದು ಗ್ರಾಮದ ಕುಂಜರ್ಕಳದಲ್ಲಿ ರವಿವಾರ ವಿದ್ಯುತ್ ಕಂಬ ವೊಂದು ಮಳೆಗೆ ಬಿದ್ದಿದೆ. ಸ್ಥಳೀಯರು ಗ್ರಾ.ಪಂ. ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅವರಿಗೆ ಮಾಹಿತಿ ನೀಡಿದ್ದು, ಅವರು ಮೆಸ್ಕಾಂ ಅಧಿಕಾರಿ ಗಳನ್ನು ಸಂಪರ್ಕಿಸಿ ತತ್ಕ್ಷಣ ವಿದ್ಯುತ್ ಕಂಬ ಬದಲಿಸಿ ವಿದ್ಯುತ್ ಮರುಸಂಪರ್ಕಕ್ಕೆ ಕ್ರಮ ಕೈಕೊಂಡಿದ್ದಾರೆ.
ಸಜೀಪನಡು ಗ್ರಾಮದ ಗೋಳಿಪಡ್ಪು ಬಳಿ ಐಸಮ್ಮ ಹುಸೈನಾರ್ ಅವರ ಮನೆಯ ಮೇಲ್ಛಾವಣಿಗೆ ಹಾನಿಯಾಗಿದ್ದು, ಸುಮಾರು 30 ಸಾವಿರ ರೂ. ಹಾನಿ ಸಂಭವಿಸಿದೆ. ವಿಟ್ಲ ಕಸ್ಬಾ ಗ್ರಾಮದಲ್ಲಿ ಸತೀಶ್ ಅವರ ಮನೆಯ ಬಳಿಯ ಆವರಣಗೋಡೆ ಕುಸಿದು ಬಿದ್ದಿದೆ. ಸಜೀಪನಡು ಗ್ರಾಮದ ಕರುಣಾಕರ ಅವರ ಮನೆಗೆ ರವಿವಾರ ರಾತ್ರಿ ಮಳೆಯಿಂದ ಹಾನಿಯಾಗಿದ್ದು, ಸುಮಾರು 1 ಲಕ್ಷ ರೂ. ನಷ್ಟ ಸಂಭವಿಸಿರುವ ಕುರಿತು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ