ಗುರುವಾರ ಮಾಸ್ಕ್ ದಿನ ಅಂತರ ಮೀರಿದ್ರೆ ದಂಡ: ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ: ಸಿಎಂ
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಸರ್ಕಾರ, ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿದೆ. ಇನ್ನು ಮುಂದೆ ಸಾಮಾಜಿಕ ಅಂತರ ಪಾಲನೆ ಮಾಡದಿದ್ದರೆ ಮತ್ತು ಮಾಸ್ಕ್ ಧರಿಸದಿದ್ದರೆ 200 ರೂ. ದಂಡ ವಿಧಿಸಲಾಗುತ್ತದೆ. ಇದನ್ನು ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ಅಷ್ಟೇ ಅಲ್ಲ, ಮಾಸ್ಕ್ ಧರಿಸುವುದನ್ನು ಪ್ರೇರೇಪಿಸಲು ಇದೇ ಗುರುವಾರ ಮಾಸ್ಕ್ ದಿನ ಆಚರಿಸಲಾಗುವುದು. ಎಂದು ಸಿಎಂ ಯಡಿ ಯೂರಪ್ಪ ಹೇಳಿದ್ದಾರೆ.