ಭಾರತೀಯ ಸೇನೆ ಪ್ರತೀಕಾರಕ್ಕೆ ಎಷ್ಟು ಮಂದಿ ಚೀನಾ ಸೈನಿಕರು ಸಾವನ್ನಪ್ಪಿದ್ದಾರೆ ಗೊತ್ತಾ?
ಗಾಲ್ವಾನ್ ಕಣಿವೆ ಪ್ರದೇಶದಲ್ಲಿನ ಸಂಘರ್ಷ ಸ್ಥಿತಿಯನ್ನು ತಿಳಿಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸೇನಾ ಪ್ರಕಟಣೆಯಲ್ಲಿ ತಿಳಿಸಿದೆ.
Team Udayavani, Jun 16, 2020, 4:18 PM IST
ಬೀಜಿಂಗ್/ನವದೆಹಲಿ: ಲಡಾಖ್ ನ ಗಾಲ್ವಾನ್ ಕಣಿವೆ ಪ್ರದೇಶದ ಎಲ್ ಎಸಿ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ಭಾರತೀಯ ಸೈನಿಕರು ಹುತಾತ್ಮರಾಗಿರುವ ವರದಿ ಬಂದಿದೆ. ಏತನ್ಮಧ್ಯೆ ಭಾರತದ ಸೈನಿಕರ ದಿಟ್ಟ ಪ್ರತ್ಯುತ್ತರಕ್ಕೆ ಚೀನಾ ಸೈನಿಕರು ಕೂಡಾ ಸಾವನ್ನಪ್ಪಿರುವುದಾಗಿ ಚೀನಾದ ಗ್ಲೋಬಲ್ ಟೈಮ್ಸ್ ದೈನಿಕ ವರದಿ ಮಾಡಿದೆ.
ಗಾಲ್ವಾನ್ ಕಣಿವೆ ಪ್ರದೇಶದಲ್ಲಿನ ಸಂಘರ್ಷ ಸ್ಥಿತಿಯನ್ನು ತಿಳಿಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸೇನಾ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೇ ನಿನ್ನೆ ನಡೆದ ಸಂಘರ್ಷದಲ್ಲಿ ಉಭಯ ದೇಶಗಳ ಸೈನಿಕರು ಸಾವನ್ನಪ್ಪಿರುವುದಾಗಿ ತಿಳಿಸಿದೆ. ಒಬ್ಬರು ಅಧಿಕಾರಿ ಹಾಗೂ ಇಬ್ಬರು ಸೈನಿಕರು ಸೇರಿ ಮೂವರು ಭಾರತೀಯರು ಹುತಾತ್ಮರಾಗಿದ್ದು, ಪ್ರತಿದಾಳಿಯಲ್ಲಿ ಚೀನಾ ಸೈನಿಕರು ಕೂಡಾ ಸಾವನ್ನಪ್ಪಿರುವುದಾಗಿ ತಿಳಿಸಿದೆ. ಉದ್ವಿಗ್ನ ಸ್ಥಿತಿ ಬಗೆಹರಿಸಲು ಪ್ರಸ್ತುತ ಸೇನೆಯ ಹಿರಿಯ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಭಾರತದ ಪ್ರತಿದಾಳಿಗೆ ಐವರು ಚೀನಾ ಸೈನಿಕರು ಬಲಿ:
ಭಾರತೀಯ ಸೇನೆಯ ಪ್ರತಿದಾಳಿಗೆ ಲಡಾಖ್ ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯ ಐವರು ಸೈನಿಕರು ಸಾವಿಗೀಡಾಗಿದ್ದು, 11 ಸೈನಿಕರು ಗಾಯಗೊಂಡಿರುವುದಾಗಿ ಗ್ಲೋಬಲ್ ಟೈಮ್ಸ್ ವರದಿಗಾರ ವಾಂಗ್ ವೆನ್ ವೆನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ನನಗೆ ತಿಳಿದು ಬಂದಿರುವ ಮಾಹಿತಿ ಪ್ರಕಾರ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಕಾಳಗದಲ್ಲಿ ಚೀನಾ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಗ್ಲೋಬಲ್ ಟೈಮ್ಸ್ ನ ಹೂ ಕ್ಸಿಜಿನ್ ತಿಳಿಸಿದ್ದು, ಈ ಬಗ್ಗೆ ಹೆಚ್ಚಿನ ವಿವರ ಬಿಟ್ಟುಕೊಟ್ಟಿಲ್ಲ.
ಚೀನಾ ಆಕ್ರೋಶ ವ್ಯಕ್ತಪಡಿಸಿ ಪ್ರಕಟಣೆ ನೀಡಿದ್ದು, ಭಾರತೀಯ ಸೈನಿಕರು ಗಡಿ ದಾಟಿ ಬಂದು ಚೀನಾ ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ ಎಂದು ಎಎಫ್ ಪಿ ವರದಿ ಮಾಡಿದೆ. ಭಾರತ ದಿಢೀರ್ ಆಗಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಬಾರದು ಅಥವಾ ಪ್ರಚೋದನೆಯಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ ಎಂದು ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Brahmavara-ಉಡುಪಿ ಟ್ರಾಫಿಕ್ ಜಾಮ್ ಸಮಸ್ಯೆ: ಸವಾರರು ಸುಸ್ತೋ ಸುಸ್ತು
Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್