ಸಾಲ ಬಾಧೆ: ಇಬ್ಬರು ರೈತರು ನೇಣಿಗೆ ಶರಣು
Team Udayavani, Jun 16, 2020, 9:21 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ: ಸಾಲ ಬಾಧೆ ತಾಳದೇ ಇಬ್ಬರು ರೈತರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿವೆ.
ಭಾಲ್ಕಿ ತಾಲೂಕಿನ ಭಗವಾನ ವಾಡಿಯ ಲಕ್ಷ್ಮಣ ಬಿರಾದಾರ (45) ಮತ್ತು ಬಸವಕಲ್ಯಾಣ ತಾಲೂಕಿನ ಚಂಡಕಾಪೂರ ಗ್ರಾಮದ ಮಾಧವರಾವ ಜಾಧವ (47) ಆತ್ಮಹತ್ಯೆಗೆ ಶರಣಾಗಿರುವ ನತದೃಷ್ಟರಾಗಿದ್ದಾರೆ.
ರೈತ ಮಾಧವ ರಾವ್ ಕೃಷಿ ಚಟುವಟಿಕೆಗಾಗಿ ಸಿಂಟಿಕೇಟ್ ಬ್ಯಾಂಕ್ನಲ್ಲಿ 5 ಲಕ್ಷ ರೂ. ಸಾಲ ಪಡೆದಿದ್ದರು, ಲಕ್ಷ್ಮಣ ಸಹ ಒಕ್ಕಲುತನ ಕೆಲಸಕ್ಕಾಗಿ ಸಾಲ ಮಾಡಿದ್ದರು.
ವಿಭಿನ್ನ ಸನ್ನಿವೇಶಗಳಲ್ಲಿ ಇವರಿಬ್ಬರೂ ಸಾಲ ತಿರಿಸಲಾಗದೆ ಸೋಮವಾರ ತಮ್ಮ ಹೊಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಭಾಲ್ಕಿ ಮತ್ತು ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ