ಉಳ್ಳಾಲದಲ್ಲಿ ಕಡಲ್ಕೊರೆತ: ಸಮುದ್ರಪಾಲಾದ ಮನೆ
Team Udayavani, Jun 17, 2020, 6:15 AM IST
ಮೀನುಗಾರ ಮೋಹನ್ ಅವರಿಗೆ ಸೇರಿದ ಮನೆ ಕುಸಿದಿರುವುದು.
ಉಳ್ಳಾಲ: ಉಳ್ಳಾಲದಲ್ಲಿ ಸಮುದ್ರ ಬಿರುಸುಗೊಂಡಿದ್ದು, ಭಾರೀ ಗಾತ್ರದ ಅಲೆಗಳು ಮನೆಗಳಿಗೆ ಅಪ್ಪಳಿಸುತ್ತಿದ್ದು, ಸೋಮೇಶ್ವರದಲ್ಲಿ ಮೋಹನ್ ಅವರಿಗೆ ಸೇರಿದ ಮನೆ ಸಮುದ್ರ ಪಾಲಾಗಿದೆ.
ಸೋಮೇಶ್ವರ ರುದ್ರಪಾದೆ ಸನಿಹದ ಮೀನುಗಾರ ಮೋಹನ್ ಅವರಿಗೆ ಸೇರಿದ ಮನೆ ಕಳೆದ ಬಾರಿ ಕಡಲ್ಕೊರೆತಕ್ಕೆ ಭಾಗಶಃ ಹಾನಿಯಾಗಿತ್ತು.
ಕಳೆದ ಕೆಲವು ದಿನಗಳಿಂದ ಸಮುದ್ರದ ಅಲೆಗಳಿಗೆ ತತ್ತರಿಸಿದ್ದ ಮನೆ ಬಿರುಕು ಬಿಟ್ಟಿದ್ದು ಮಂಗಳವಾರ ಮಾಲಕರ ಕಣ್ಣೆದುರೇ ಸಮುದ್ರ ಪಾಲಾಗಿದೆ.
ಸೋಮೇಶ್ವರ ಉಚ್ಚಿಲ, ಉಳ್ಳಾಲದ ಕಿಲೇರಿಯಾ ನಗರ, ಕೈಕೋ, ಸೀಗ್ರೌಂಡ್ ಮುಂತಾದ ಕಡೆ ಭಾರೀ ಗಾತ್ರದ ಅಲೆಗಳು ಮನೆಗಪ್ಪಳಿಸುತ್ತಿದ್ದು 20ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ.
ಕಾಮಗಾರಿ ವಿಳಂಬದಿಂದ ಹಾನಿ: ಉಳ್ಳಾಲದಲ್ಲಿ ಎಡಿಬಿ ವತಿಯಿಂದ ನಡೆದ ಶಾಶ್ವತ ಕಾಮಗಾರಿ ಉಳ್ಳಾಲ ಮೊಗವೀರಪಟ್ಣವರೆಗೆ ಮಾತ್ರ ನಡೆದಿದ್ದು, ಸಮ್ಮರ್ ಸ್ಯಾಂಡ್ ಬಳಿಯಿಂದ ಸೀ ಗ್ರೌಂಡ್ವರೆಗೆ ಇನ್ನೊಂದು ಯೋಜನೆಯಡಿ ಶಾಶ್ವತ ಕಾಮಗಾರಿ ಅರ್ಧದಲ್ಲಿ ಇರುವುದರಿಂದ ಸಮಸ್ಯೆಯಾಗಿದೆ.
ಸೋಮೇಶ್ವರ ಉಚ್ಚಿಲದಲ್ಲಿ ನಡೆಯುತ್ತಿರುವ ಶಾಶ್ವತ ಕಾಮಗಾರಿ ವಿಳಂಬದಿಂದ ನ್ಯೂ ಉಚ್ಚಿಲ, ಬಟ್ಟಪ್ಪಾಡಿ ಸೇರಿದಂತೆ ವಿವಿಧೆಡೆ ಕಡಲ್ಕೊರೆತದ ಸಮಸ್ಯೆ ಉಂಟಾಗಿದೆ. ಕಳೆದೆರಡು ದಿನಗಳಿಂದ ಸಮುದ್ರ ಬಿರುಸುಗೊಂಡಿದ್ದು ಕೊರೆತ ಮುಂದುವರಿಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
MUST WATCH
ಹೊಸ ಸೇರ್ಪಡೆ
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ