ನಟ ಸುಶಾಂತ್‌ ಸಾವಿನ ಹಿಂದೆ ವೃತ್ತಿ ವೈಷಮ್ಯ?


Team Udayavani, Jun 17, 2020, 3:59 AM IST

singh dead

ಮುಂಬೈ: ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಹಿಂದೆ ವೃತ್ತಿ ವೈಷಮ್ಯದ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುವುದಾಗಿ ಮಹಾರಾಷ್ಟ್ರ ಸರ್ಕಾರ ಹೇಳಿದೆ. ಇದೇ ವೇಳೆ ಸುಶಾಂತ್‌ರನ್ನು ಬಾಲಿವುಡ್‌ ಅತ್ಯಂತ ಕೆಟ್ಟ ರೀತಿಯಲ್ಲಿ ನಡೆಸಿಕೊಂಡಿದೆ ಎಂದು ರಾಜಕಾರಣಿ, ಚಿತ್ರ ನಿರ್ದೇಶಕರು ದೂರಿದ್ದಾರೆ. ಸುಶಾಂತ್‌ ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವನಲ್ಲ. ಆತನನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು ಕುಟುಂಬ ಸದಸ್ಯರು ಅನುಮಾನ  ವ್ಯಕ್ತಪಡಿಸಿದ್ದರು.

ಜೊತೆಗೆ, ಬಾಲಿವುಡ್‌ ಹಾಗೂ ಅಭಿಮಾನಿಗಳ ವಲಯದಲ್ಲಿ ಸುಶಾಂತ್‌ರ ಅಕಾಲಿಕ ನಿಧನದ ಕುರಿತು ಬೇಸರ, ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್‌, “ಸುಶಾಂತ್‌ ವೃತ್ತಿ ವೈಷಮ್ಯದಿಂದಾಗಿ  ಖಿನ್ನತೆಗೆ ಒಳಗಾಗಿದ್ದರು ಎಂದು ವರದಿಗಳು ಹೇಳುತ್ತಿವೆ. ಈ ಅಂಶವನ್ನೇ ದೃಷ್ಟಿಯಲ್ಲಿರಿಸಿಕೊಂಡು ಪೊಲೀಸರು ತನಿಖೆ ನಡೆಸಲಿದ್ದಾರೆ,’ ಎಂದು ಹೇಳಿದ್ದಾರೆ.

ಸುಶಾಂತ್‌ ಅತ್ತಿಗೆ ಸಾವು: ಸುಶಾಂತ್‌ ಸಾವಿನ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದ ನಟನ ಅತ್ತಿಗೆ ಮಂಗಳವಾರ  ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸುಶಾಂತ್‌ರ ಸೋದರ ಸಂಬಂಧಿಯ ಪತ್ನಿ, ಪಾಟ್ನಾದಲ್ಲಿ  ವಾಸವಿದ್ದ ಸುಧಾ ದೇವಿ ಸಾವಿನ ಸುದ್ದಿ ಕೇಳಿದಾಗಿನಿಂದ ಆಘಾತಕ್ಕೊಳಗಾಗಿ, ನೀರು, ನಿದ್ರೆ, ಆಹಾರ ತ್ಯಜಿಸಿದ್ದರು.

2019ರಲ್ಲಿ ಬಿಡುಗಡೆಯಾಗಿದ್ದ ನಿತೇಶ್‌ ತಿವಾರಿ ನಿರ್ದೇಶನದ “ಚಿಚೋರೆ’ ಚಿತ್ರ ಸೂಪರ್‌ ಹಿಟ್‌ ಆದ ಬಳಿಕ ಸುಶಾಂತ್‌  ಸಿಂಗ್‌ ರಜಪೂತ್‌ 7 ಚಿತ್ರಗಳನ್ನು ಒಪ್ಪಿಕೊಂಡಿದ್ದರು. ಆದರೆ, ಆರೇ ತಿಂಗಳ ಅವಧಿಯಲ್ಲಿ ಅವುಗಳು ಸುಶಾಂತ್‌ರ ಕೈತಪ್ಪಿ ಹೋಗಿದ್ದವು. ಹೀಗೆಂದು ಕಾಂಗ್ರೆಸ್‌ ಮುಖಂಡ ಸಂಜಯ್‌ ನಿರುಪಮ್‌ ಟ್ವೀಟ್‌ ಮಾಡಿದ್ದಾರೆ.

ಮಾನಸಿಕ ಅನಾರೋಗ್ಯಕ್ಕೆ ವಿಮೆ ರಕ್ಷಣೆ ಏಕಿಲ್ಲ?
ನವದೆಹಲಿ: ಮಾನಸಿಕ ಅನಾರೋಗ್ಯಕ್ಕೆ ವಿಮೆಯ ಮೂಲಕ ಹಣಕಾಸು ಪ್ರಯೋಜನ ನೀಡಲು ಏಕೆ ಸಾಧ್ಯವಿಲ್ಲ? ಎಂದು ಸುಪ್ರೀಂ ಕೋರ್ಟ್‌ ವಿಮಾ ಕಂಪನಿಗಳನ್ನು ಪ್ರಶ್ನಿಸಿದೆ.

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಬಳಿಕ  ದೇಶಾದ್ಯಂತ ಮಾನಸಿಕ ಒತ್ತಡ ಮತ್ತು ಖಿನ್ನತೆಗೆ ಸಂಬಂಧಿಸಿದಂತೆ ಭಾರೀ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮಾನಸಿಕ ಅನಾರೋಗ್ಯಕ್ಕೆ ತುತ್ತಾದವರಿಗೂ ವಿಮೆಯ ಹಣಕಾಸು ಪ್ರಯೋಜನಗಳನ್ನು ಒದಗಿಸುವಂತೆ ಕೋರಿ ಸಲ್ಲಿಕೆಯಾಗಿದ್ದ  ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ಹಾಗೂ ಕೇಂದ್ರ ಸರ್ಕಾರಕ್ಕೆ ಮಂಗಳವಾರ ನೋಟಿಸ್‌ ನೀಡಿತು.

ಮಾನಸಿಕ ಅನಾರೋಗ್ಯವನ್ನು ಸಹ ಆರೋಗ್ಯ ವಿಮೆ ವ್ಯಾಪ್ತಿಗೆ ಸೇರಿಸಿಕೊಳ್ಳುವಂತೆ 2018ರಲ್ಲಿ ಐಆರ್‌ಡಿಎಐ, ವಿಮಾ ಕಂಪನಿಗಳಿಗೆ ಸೂಚನೆ ನೀಡಿತ್ತು.

ಟಾಪ್ ನ್ಯೂಸ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.