ಪದವಿ ಕಾಲೇಜು ಉಳಿಸಲು ಡಿಸಿಎಂಗೆ ಪತ್ರ
Team Udayavani, Jun 17, 2020, 5:25 AM IST
ಹನೂರು: ತಾಲೂಕಿನ ಏಕೈಕ ಪದವಿ ಕಾಲೇಜನ್ನು ರಾಜ್ಯದ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಸ್ಥಳಾಂತರಿಸಲು ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿರುವ ಸಂಬಂಧ ಜೂ.11ರಂದು ಉದಯವಾಣಿ ಪತ್ರಿಕೆಯಲ್ಲಿ “ಪದವಿ ಕಾಲೇಜು ಸ್ಥಳಾಂತರಕ್ಕೆ ಆದೇಶ’ ಎಂಬ ಶೀರ್ಷಿಕೆಯಡಿ ವಿಸ್ತೃತ ವರದಿ ಪ್ರಕಟಿಸಲಾಗಿತ್ತು.
ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ಕುಮಾರ್, ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರಿಗೆ ಪತ್ರ ಬರೆದಿದ್ದಾರೆ. ಕ್ಷೇತ್ರದ ಶಾಸಕರಾದ ನರೇಂದ್ರ ನೀಡಿರುವ ಮನವಿ ಪತ್ರದ ಜೊತೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಪತ್ರ ಬರೆದಿದ್ದಾರೆ.
ತಾಲೂಕಿನ ಏಕೈಕ ಪದವಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನಲ್ಲಿ 325 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಭಾಗದ ಗುಡ್ಡಗಾಡು ಪ್ರದೇಶ, ಕಾಡಂಚಿನ ಗ್ರಾಮಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಿತದೃಷ್ಟಿಯಿಂದ ಕಾಲೇಜನ್ನು ಇಲ್ಲಿಯೇ ಉಳಿಸಿಕೊಳ್ಳುವಂತೆ ಹಾಗೂ ಮುಂದುವರಿಸುವಂತೆ ಉಪಮುಖ್ಯ ಮಂತ್ರಿಗಳಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
IPL ಇಂದು ಲೀಗ್ ಪಂದ್ಯಗಳಿಗೆ ತೆರೆ: KKR vs RR ಟೇಬಲ್ ಟಾಪರ್ಗಳ ಸೆಣಸಾಟ
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ