ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ ಸವಾಲು ದೊಡ್ಡದಿದೆ


Team Udayavani, Jun 17, 2020, 7:45 AM IST

editorial-copy

ಕೋವಿಡ್ ಸೋಂಕಿತರ ಸಂಖ್ಯೆ ಆಘಾತ ಹುಟ್ಟಿಸುವ ರೀತಿಯಲ್ಲಿ ಬೆಳೆಯುತ್ತಲೇ ಇದೆ. ಜೂನ್‌ 12ನೇ ತಾರೀಖೀನಿಂದ ಪ್ರತಿದಿನ 10 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಲಾರಂಭಿಸಿವೆ. ಟೆಸ್ಟ್‌ಗಳ ಸಂಖ್ಯೆ ಅಧಿಕವಾಗಿರುವುದರಿಂದ, ಸೋಂಕಿತರೂ ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿದ್ದಾರೆ ಎನ್ನುವ ವಾದದಲ್ಲಿ ಹುರುಳಿದೆಯಾದರೂ, ಅದೇ ಸಂಪೂರ್ಣ ಸತ್ಯವಲ್ಲ. ಲಾಕ್‌ಡೌನ್‌ ನಿಯಮ ಸಡಿಲಿಕೆಯಾದ ನಂತರದಿಂದ ದೇಶದಲ್ಲಿ ಸೋಂಕು ಪ್ರಸರಣ ಅಧಿಕವಾಗಿಬಿಟ್ಟಿದೆ.

ಈಗ ಬೇಸಿಗೆಯ ಧಗೆ ದೂರವಾಗಿ ಮಳೆ ಹನಿ ಬಂದಪ್ಪಳಿಸುತ್ತಿರುವ ವೇಳೆಯಲ್ಲೇ, ಮಳೆಗಾಲದಲ್ಲಿ ಕೋವಿಡ್ ಕಡಿಮೆಯಾಗುವುದೇ ಎನ್ನುವ ಚರ್ಚೆ ಆರಂಭವಾಗಿದೆ. ಆದರೆ, ಫೆಬ್ರವರಿ ತಿಂಗಳ ಆರಂಭದಲ್ಲಿ, ಅಂದರೆ ಕೊರೊನಾ ವೈರಸ್‌ ಭಾರತಕ್ಕೆ ಕಾಲಿಟ್ಟು ಕೆಲವೇ ದಿನಗಳಾಗಿದ್ದ ಹೊತ್ತಲ್ಲಿ, ಸುಡು ಬಿಸಿಲಿಗೆ ಕೊರೊನಾ ವೈರಸ್‌ ದುರ್ಬಲವಾಗಿಬಿಡುತ್ತದೆ ಎಂದೇ ಭಾವಿಸಲಾಗಿತ್ತು. ಹಲವು ತಜ್ಞರು ಕೂಡ ಇದೇ ಮಾತನ್ನೇ ಹೇಳಿದ್ದರು. ಆದರೆ, ಅದರಿಂದ ಕೊರೊನಾದ ವೇಗಕ್ಕೇನೂ ಪೆಟ್ಟು ಬೀಳಲಿಲ್ಲ. ಈಗ ಮಳೆಗಾಲ ಎದುರಾಗಿದ್ದು, ವೈರಸ್‌ನ ಮೇಲೆ, ಹಾಗೂ ಅದರ ಪ್ರಸರಣ ಶಕ್ತಿಯ ಮೇಲೆ ಮಳೆಯ ಪ್ರಭಾವ ಹೇಗಿರಲಿದೆ ಎನ್ನುವ ಬಗ್ಗೆ ಚರ್ಚೆಗಳು, ಭವಿಷ್ಯವಾಣಿಗಳು ಆರಂಭವಾಗಿದೆ. ಆದರೆ, ವೈರಾಣು ತಜ್ಞರು ಮತ್ತು ಸಾಂಕ್ರಾಮಿಕ ರೋಗ ತಡೆ ತಜ್ಞರು ಮಾತ್ರ ಕೋವಿಡ್‌-19 ಯಾವ ಕಾಲದಲ್ಲಿ ಹೇಗೆ ವರ್ತಿಸುತ್ತದೆ ಎನ್ನುವುದನ್ನು ತಿಳಿದುಕೊಳ್ಳಲು ಹಲವು ವರ್ಷಗಳೇ ಬೇಕು ಎನ್ನುತ್ತಾರೆ. ಬೇಸಿಗೆ, ಮಳೆಗಾಲ, ಚಳಿಗಾಲದಲ್ಲಿ ವೈರಸ್‌ನ ವರ್ತನೆಯನ್ನು ಹಲವು ವರ್ಷಗಳವರೆಗೆ ಪರೀಕ್ಷಿಸಿ, ಅದನ್ನು ಅನ್ಯ ದೇಶಗಳೊಂದಿಗೆ ಹೋಲಿಸಿ ನೋಡಿದ ಮೇಲೆಯೇ ಸ್ಪಷ್ಟವಾಗಿ ಹೇಳಲು ಸಾಧ್ಯವಾಗುತ್ತದೆ ಎನ್ನುವುದು ವೈರಾಣು ತಜ್ಞರ ಅಭಿಪ್ರಾಯ.

ಅಮೆರಿಕದ ಸೆಂಟರ್‌ ಫಾರ್‌ ಡಿಸೀಸ್‌ ಪ್ರಿವೆನ್ಶನ್‌ನ ಸದಸ್ಯ, ಹಿರಿಯ ವಿಜ್ಞಾನಿ ಡಾ| ಮಾರ್ಕ್‌ ಅಲೆನ್‌, “”ಇನ್‌ಫ್ಲ್ಯೂಯೆನಾ ಇರಲಿ ಅಥವಾ ಶ್ವಾಸಕೋಶಕ್ಕೆ ತೊಂದರೆ ಮಾಡುವ ವಿವಿಧ ವೈರಸ್‌ಗಳಿರಲಿ…ಈಗಲೂ ಅವು ಯಾವ ಕಾಲಕ್ಕೆ ಹೇಗೆ ವರ್ತಿಸುತ್ತವೆ ಎನ್ನುವುದಕ್ಕೆ ನಿಖರ ಉತ್ತರ ದೊರೆತಿಲ್ಲ” ಎನ್ನುತ್ತಾರೆ.

ಈ ಕಾರಣಕ್ಕಾಗಿಯೇ ಮಳೆಗಾಲದಲ್ಲಿ ವೈರಸ್‌ ಹಾವಳಿ ಕಡಿಮೆಯಾಗಿಬಿಡುತ್ತದೆ, ಚಳಿಗಾಲದಲ್ಲಿ ಹೊರಟುಹೋಗುತ್ತದೆ ಎಂದೆಲ್ಲ ತಪ್ಪು ಸಂದೇಶ ಹರಿದಾಡಲಾರಂಭಿಸಿದರೆ, ಜನರಿಗೆ ಕೊರೊನಾ ಬಗ್ಗೆ ಅಸಡ್ಡೆ ಮೂಡಿಬಿಡುತ್ತದೆ. ಹಾಗೆ, ಆಗುವುದು ತೀರಾ ಅಪಾಯಕಾರಿ ಎನ್ನುವುದು ನೆನಪಿರಲಿ. ಈಗಿನ್ನೂ ದೇಶದಲ್ಲಿ ಕೊರೊನಾ ಉತ್ತುಂಗಕ್ಕೇರಿಲ್ಲ. ಹೀಗಾಗಿ, ಸಾಂಕ್ರಾಮಿಕದ ಹಾವಳಿ ಅಧಿಕವಾಗಿರುವುದರಿಂದ ಈಗ ಮೊದಲಿಗಿಂತಲೂ ನಾವು ಹೆಚ್ಚು ಎಚ್ಚರಿಕೆಯಿಂದ ಇರಬೇಕಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.