ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿರೋಧ
Team Udayavani, Jun 17, 2020, 8:52 AM IST
ಬಳ್ಳಾರಿ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಎಸ್ ಯುಸಿಐ(ಕಮ್ಯುನಿಸ್ಟ್), ಆರ್ಕೆಎಸ್ ಜಿಲ್ಲಾ ಸಮಿತಿಗಳ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ರೈತರು ತತ್ತರಿಸುತ್ತಿರುವಾಗ, ಅವರ ನೆರವಿಗೆ ಬರಬೇಕಾದ ರಾಜ್ಯ ಸರ್ಕಾರ ರೈತರ ಭೂಮಿಯನ್ನೇ ಕಾರ್ಪೋರೇಟ್ ಕಂಪನಿಗಳ ಕಪಿಮುಷ್ಠಿಗೆ ಹಾಕುವಂಥ ಭೂ ಸುಧಾರಣೆ ಕಾಯ್ದೆಯ 79 ಎ, ಬಿ ಮತ್ತು ಸಿ, 80ನೇ ಕಲಮುಗಳನ್ನು ಪೂರ್ವನ್ವಯವಾಗುವಂತೆ ರದ್ದುಗೊಳಿಸಿರುವುದು ಅತ್ಯಂತ ಖಂಡನೀಯ. ರೈತ ವಿರೋಧಿ ನಡೆ. ಕೃಷಿಯೇತರ ಆದಾಯದಿಂದ ಕೃಷಿ ಭೂಮಿ ಕೊಳ್ಳಲು ನಿರ್ಬಂಧ ಹೇರಿದ್ದ ಮೇಲಿನ ಕಲಮುಗಳನ್ನು ರದ್ದುಗೊಳಿಸಿ, ಕಾರ್ಪೋರೇಟ್ ಕಂಪನಿಗಳಿಂದ ಶ್ರೀಮಂತರವರೆಗೆ ಯಾರೂ ಬೇಕಾದರೂ ಭೂಮಿಯನ್ನು ಕೊಳ್ಳಲು ಮುಕ್ತ ಪರವಾನಗಿ ನೀಡಿ, ರೈತರ ಹೆಸರಿನಲ್ಲಿ ಅಧಿಕಾರದ ಗದ್ದುಗೆಯೇರಿದ ರಾಜ್ಯ ಸರ್ಕಾರವು ರೈತರ ಬೆನ್ನಿಗೆ ಚೂರಿ ಹಾಕಿದೆ ಎಂದರು.
ಆರ್ಕೆಎಸ್ ಜಿಲ್ಲಾ ಕಾರ್ಯದರ್ಶಿ ಹನುಮಂತಪ್ಪ ಮಾತನಾಡಿ, ಕಾನೂನು ತಿದ್ದುಪಡಿಯಿಂದ ಮುಂದೆ ಬರುವ ದಿನಗಳಲ್ಲಿ ಕೋಟ್ಯಾಂತರ ರೈತರು ಬೀದಿ ಪಾಲಾಗುತ್ತಾರೆ. ಕೃಷಿ ಫಲವತ್ತಾದ ಭೂಮಿಯನ್ನು ಅನ್ಯ ಉದ್ಯಮಗಳಿಗೆ ನೀಡುತ್ತ ಹೋದಂತೆ ಕೃಷಿ ಉತ್ಪನ್ನಗಳನ್ನು ಬೆಳೆಯುವುದು ಕಡಿಮೆಯಾಗುತ್ತದೆ ಎಂದರು.
ಪ್ರತಿಭಟನೆಯಲ್ಲಿ ಎಸ್ ಯುಸಿಐ(ಸಿ) ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಕೆ. ಸೋಮಶೇಖರ್, ರಾಧಾಕೃಷ್ಣ, ಮಂಜುಳಾ, ದೇವದಾಸ್, ನಾಗಲಕ್ಷ್ಮೀ, ಡಾ| ಪ್ರಮೋದ್, ಶಾಂತಾ, ಗೋವಿಂದ್, ರೈತರಾದ ಪಂಪಾಪತಿ, ಬಸಣ್ಣ ಪ್ರತಿಭಟನೆ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ
Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು
ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್
MUST WATCH
ಹೊಸ ಸೇರ್ಪಡೆ
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ