ಐಟಿಐಗಳಿಗೆ ಕೈಗಾರಿಕೋದ್ಯಮಿಗಳನ್ನು ಒಳಗೊಂಡ ಸಲಹಾ ಸಮಿತಿ ರಚನೆ: ಮುಖ್ಯಮಂತ್ರಿ ಸೂಚನೆ


Team Udayavani, Jun 17, 2020, 2:06 PM IST

ಐಟಿಐಗಳಿಗೆ ಕೈಗಾರಿಕೋದ್ಯಮಿಗಳನ್ನು ಒಳಗೊಂಡ ಸಲಹಾ ಸಮಿತಿ ರಚನೆ: ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಸಲಹಾ ಸಮಿತಿ ರಚಿಸಿ, ಕೈಗಾರಿಕಾ ವಲಯದ ತಜ್ಞರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

ಇದರಿಂದ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತಿ ಗುಣಮಟ್ಟ ಹೆಚ್ಚುವುದಲ್ಲದೆ, ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಸಹ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಪ್ರಸ್ತುತ 112 ಐಟಿಐಗಳು ಕೈಗಾರಿಕೆಗಳೊಂದಿಗೆ ಕೈಜೋಡಿಸಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಸ್ಥೆಗಳು ಕೈಗಾರಿಕಾ ಸಂಸ್ಥೆಗಳ ಸಹಯೋಗದೊಂದಿಗೆ ಕೈಗಾರಿಕಾ ವಲಯಗಳಲ್ಲಿ ಬೇಡಿಕೆ ಇರುವ ವಿಷಯಗಳ ಕುರಿತು ತರಬೇತಿ ನೀಡಲು ಆದ್ಯತೆ ನೀಡುವಂತೆ ಸಲಹೆ ನೀಡಿದರು.

ಇಲಾಖೆಯ ಕಾರ್ಯಕ್ರಮಗಳಡಿ ಪ್ರಸಕ್ತ ವರ್ಷದಲ್ಲಿ ಕೈಗಾರಿಕೆಗಳ ಬೇಡಿಕೆಗೆ ಅನುಗುಣವಾದ ತರಬೇತಿಯನ್ನು ನೀಡುವ ಮೂಲಕ ಉದ್ಯೋಗಾವಕಾಶ ದೊರೆಯುವ ಸಾಧ್ಯತೆಗಳನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಕೋವಿಡ್ ನಂತರ ಹೊರದೇಶ ಹಾಗೂ ಹೊರರಾಜ್ಯಗಳಿಂದ ಹಿಂತಿರುಗಿರುವ ರಾಜ್ಯದ ಜನರ ನಿರುದ್ಯೋಗ ನಿವಾರಣೆ ನಿಟ್ಟಿನಲ್ಲಿ ಅವರ ವಿವರಗಳನ್ನುಇಲಾಖೆಯು ನೋಂದಣಿ ಮಾಡಿಕೊಳ್ಳುತ್ತಿದ್ದು, ಈ ವರೆಗೆ ಸುಮಾರು 41 ಸಾವಿರ ಜನ ನೋಂದಣಿ ಮಾಡಿಕೊಂಡಿದ್ದಾರೆ. ಕೃಷಿ, ಪ್ರವಾಸೋದ್ಯಮ ಮತ್ತು ನಿರ್ಮಾಣ ಚಟುವಟಿಕೆ ವಲಯಗಳಲ್ಲಿ ತರಬೇತಿಗೆ ಹಾಗೂ ಉದ್ಯೋಗಾವಕಾಶಕ್ಕೆ ಹೆಚ್ಚಿನ ಬೇಡಿಕೆ ಸಲ್ಲಿಸಿದ್ದಾರೆ.

ಕೋವಿಡ್ 19 ನಿರ್ವಹಣೆ

ಕೋವಿಡ್ 19ರ ವಿರುದ್ಧದ ಹೋರಾಟದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಮುಖ ಪಾತ್ರ ವಹಿಸಿದ್ದು, ಇದರಿಂದ ಸ್ವಸಹಾಯ ಸಂಘಗಳ ಸದಸ್ಯರಿಗೆ ಆದಾಯ ಉತ್ಪನ್ನವೂ ಆಗಿದೆ.

ಸ್ವಸಹಾಯ ಗುಂಪುಗಳು ಮಾಸ್ಕ್, ಸ್ಯಾನಿಟೈಸರ್, ಫೆನಾಯಿಲ್, ಪ್ರೊಟೆಕ್ಟಿವ್ ಗೌನ್ಸ್, ಹೆಡ್ ಗೇರ್ಸ್, ಮೊದಲಾದವುಗಳನ್ನು ತಯಾರಿಸಿ, ಒದಗಿಸಿದ್ದಾರೆ. ಇದರಿಂದ ಪ್ರತಿದಿನ ಸದಸ್ಯರಿಗೆ 500 ರೂ. ನಷ್ಟು ಆದಾಯ ದೊರೆತಿದೆ.

ಜಿಟಿಟಿಸಿ ಸಂಸ್ಥೆಯ ವತಿಯಿಂದ ಮೆಡಿಕಲ್ ವೆಂಟಿಲೇಟರ್ ಗೆ ಅಗತ್ಯವಿರುವ ಬಿಡಿಭಾಗಗಳನ್ನು ತಯಾರಿಸಲಾಗುತ್ತಿದೆ.

ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ 987 ನಗರ ವಸತಿ ರಹಿತರಿಗೆ ಲಾಕ್ ಡೌನ್ ಸಂದರ್ಭದಲ್ಲಿ ಊಟ, ಉಪಾಹಾರ ಒದಗಿಸಲಾಗಿದೆ. ಅಲ್ಲದೆ, 98 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.. ವಿಜಯಭಾಸ್ಕರ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.