ರಾಜಕಾರಣಿಗಳಿಗೆ ಕೋವಿಡ್‌ ಕಾಟ; ಪಾಕ್‌ ಸಚಿವರಿಗೂ ಸೋಂಕು


Team Udayavani, Jun 17, 2020, 2:44 PM IST

ರಾಜಕಾರಣಿಗಳಿಗೆ ಕೋವಿಡ್‌ ಕಾಟ; ಪಾಕ್‌ ಸಚಿವರಿಗೂ ಸೋಂಕು

ಇಸ್ಲಾಮಾಬಾದ್‌: ಇಲ್ಲಿನ ಮಾರುಕಟ್ಟೆಯೊಂದರಲ್ಲಿ ಕೋವಿಡ್‌ ಪರೀಕ್ಷೆಗಾಗಿ ಮಾದರಿ ಸಂಗ್ರಹಿಸುತ್ತಿರುವುದು.

ಕರಾಚಿ: ಪಾಕಿಸ್ಥಾನದಲ್ಲಿ ಕೋವಿಡ್‌ ಸೋಂಕು ವ್ಯಾಪಕವಾಗಿ ವಿಸ್ತರಿಸುತ್ತಿದ್ದು ಪ್ರಮುಖ ಸಚಿವರು, ಅಧಿಕಾರಿಗಳೇ ತುತ್ತಾಗುತ್ತಿದ್ದಾರೆ. ಮಂಗಳವಾರ ಪಾಕ್‌ನ ಮಾಹಿತಿ ತಂತ್ರಜ್ಞಾನ ಸಚಿವ ಸಯ್ಯದ್‌ ಅಮಿನುಲ್‌ ಅವರಿಗೆ ಕೋವಿಡ್‌ ಸೋಂಕಿರುವುದು ದೃಢಪಟ್ಟಿದೆ. ಜ್ವರದಿಂದ ಅವರು ಬಳಲುತ್ತಿದ್ದು ಟೈಫಾಯಿಡ್‌ ಇರುವುದು ದೃಢಪಟ್ಟಿತ್ತು. ಮತ್ತೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಈ ವೇಳೆ ಕೋವಿಡ್‌ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಜಿಯೋ ನ್ಯೂಸ್‌ ವರದಿ ಮಾಡಿದೆ. ಅಮಿನುಲ್‌ ಅವರು ಮುತ್ತಾಹಿದಾ ಖವಾಮಿ ಮೂವ್‌ಮೆಂಟ್‌ನ ನಾಯಕರಾಗಿದ್ದು, ಎ.6ರಂದು ಮಾಹಿತಿ ತಂತ್ರಜ್ಞಾನ ಸಚಿವರಾಗಿ ನಿಯುಕ್ತರಾಗಿದ್ದರು. ತಮಗೆ ಜ್ವರ ಇರುವುದು ಗೊತ್ತಾದ ಕೂಡಲೇ ಇವರು ಐಸೋಲೇಷನ್‌ನಲ್ಲಿದ್ದು ಬೇರೆಯವರಿಗೆ ಸೋಂಕು ಹರಡದಂತೆ ನೋಡಿಕೊಂಡಿದ್ದಾರೆ. ಇದೇ ವೇಳೆ ಪಾಕ್‌ನಲ್ಲಿ ಕೋವಿಡ್‌ನಿಂದ ಮೃತರಾದವರ ಸಂಖ್ಯೆ 2839ಕ್ಕೇರಿದೆ. ಒಟ್ಟು ಪ್ರಕರಣಗಳ ಸಂಖ್ಯೆ 1.14 ಲಕ್ಷದ ಗಡಿ ದಾಟಿದೆ.

ಇನ್ನು ರಾಜಕಾರಣಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ತುತ್ತಾಗುತ್ತಿರುವುದು ಪಾಕ್‌ನ ರಾಜಕೀಯ ವಲಯದಲ್ಲಿ ಆಘಾತ ಸೃಷ್ಟಿಸಿದೆ. ಸೋಮವಾರ ಸಿಂಧ್‌ನ ಮಹಿಳಾ ಅಭಿವೃದ್ಧಿ ಸಚಿವೆ ಶೆಹ್ಲಾ ರಾಜಾ ಅವರು ಸೋಂಕಿಗೆ ತುತ್ತಾಗಿದ್ದರು. ಕಳೆದ ವಾರ, ಮಾಜಿ ಪ್ರಧಾನಿ ಯೂಸುಫ್ ರಾಜಾ ಗಿಲಾನಿ, ಅದಕ್ಕೂ ಮೊದಲು ಪಾಕ್‌ ವಿಪಕ್ಷ ನಾಯಕ ಪಿಎಮ್‌ಎಲ್‌ಎನ್‌ನ ಶೆಹಬಾಝ್ ಶರೀಫ್, ರೈಲ್ವೇ ಸಚಿವ ಶೇಖ್‌ ರಶೀದ್‌ ಅಹ್ಮದ್‌, ಪಿಎಲ್‌ಎಮ್‌ಎನ್‌ ನಾಯಕರಾದ ಅಶಾನ್‌ ಅಕ್ಬಲ್‌, ಮರಿಯುಮ್‌ ಔರಂಗಜೇಬ್‌ ಮೊದಲಾದವರೂ ಕೋವಿಡ್‌ ಸೋಂಕಿಗೆ ತುತ್ತಾಗಿದ್ದಾರೆ. ಅಲ್ಲಿ ಕೋವಿಡ್‌ ಈ ಮೊದಲಿಗಿಂತಲೂ ಕ್ಷಿಪ್ರ ಪ್ರಮಾಣದಲ್ಲಿ ಹರಡುತ್ತಿದ್ದು, ಸಾವಿನ ಪ್ರಮಾಣವೂ ದಿನದಿಂದ ದಿನಕ್ಕೆ ಏರುತ್ತಿದೆ. ಸೋಮವಾರ 111 ಮಂದಿ ಮೃತಪಟ್ಟಿದ್ದರು.

 

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.