ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸದಸ್ಯರು


Team Udayavani, Jun 17, 2020, 4:42 PM IST

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸದಸ್ಯರು

ಗುಳೇದಗುಡ್ಡ: ಸಭೆ ನಡೆಸುವ ಬಗ್ಗೆ ಸರಿಯಾಗಿ ಮಾಹಿತಿ ನೀಡಿಲ್ಲ. ಯಾರಿಗೆ ನೋಟಿಸ್‌ ಕೊಟ್ಟಿದ್ದೀರಿ. ಪೂರ್ವ ತಯಾರಿ ಇಲ್ಲದೇ ಸಭೆ ಆಯೋಜಿಸಿದ್ದೀರಿ ಎಂದು ತಾಪಂ ಅಧಿಕಾರಿಗಳನ್ನು ಜಿಪಂ-ತಾಪಂ ಸದಸ್ಯರು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳವಾರ ನಡೆಯಿತು.

ಗುಳೇದಗುಡ್ಡ ಪಟ್ಟಣ ತಾಲೂಕಾಗಿ ರಚನೆಯಾದ ನಂತರ ಜಿಪಂ ಉಪಕಾರ್ಯದರ್ಶಿ ಎ.ಜಿ. ತೋಟದ ಅಧ್ಯಕ್ಷತೆಯಲ್ಲಿ ಮೊದಲ ಕೆಡಿಪಿ ಸಭೆಯಲ್ಲಿ ಸದಸ್ಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸದಸ್ಯರ ಕೊರತೆಯಿಂದ ಬೆಳಗ್ಗೆ 10:30ಕ್ಕೆ ಆರಂಭವಾಗಬೇಕಿದ್ದ ಸಭೆ ಮಧ್ಯಾಹ್ನ 1 ಗಂಟೆಗೆ ಆರಂಭವಾಯಿತು. ಈ ಹಿಂದಿನ ಸಭೆಯ ವಿಷಯಗಳ ಬಗ್ಗೆ ತಿಳಿಸಿ ಎಂದು ಜಿಪಂ ಸದಸ್ಯ ನಕ್ಕರಗುಂದಿ ಅವರು ಕೇಳಿದಾಗ ಆ ವಿಷಯಗಳ ಠರಾವು ಈ ಸಭೆಗೆ ತಂದಿಲ್ಲ ಎಂದು ಅಧಿಕಾರಿಗಳು ಉತ್ತರಿಸಿದರು.

ಇದಕ್ಕೆ ಹಿಂದಿನ ಸಭೆಯಲ್ಲಿನ ವಿಷಯಗಳು ಏನು ಆಗಿದೆ? ಎಂಬುದನ್ನು ತಿಳಿದುಕೊಳ್ಳದೇ ಎಲ್ಲವನ್ನು ಹಾಗೇ ಬಿಡೋಣವೇ. ಹಾಗಿದ್ದರೇ ಸಭೆ ಏಕೆ ನಡೆಸಬೇಕು ಎಂದು ಪ್ರಶ್ನಿಸಿದರು. ಕೃಷಿ ಇಲಾಖೆ ಅಧಿಕಾರಿ ಮಾತನಾಡಿ, ಗೊಬ್ಬರ-ಬೀಜದ ಸಮಸ್ಯೆಯಿಲ್ಲ. 2 ವಿತರಣಾ ಕೇಂದ್ರ ತೆರೆದಿದ್ದೇವೆ ಎಂದು ಮಾಹಿತಿ ನೀಡಿದಾಗ, ಎಸ್‌.ಸಿ.,ಎಸ್‌.ಟಿ. ಹಾಗೂ ರೈತರಿಗೆ ನೀಡಬೇಕಾದ ಅಗತ್ಯ ಸೌಲಭ್ಯ ಒದಗಿಸುತ್ತಿಲ್ಲ. ಜನಪ್ರತಿನಿಧಿಗಳಿಗೆ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡುತ್ತಿಲ್ಲ ಎಂದು ಜಿಪಂ-ತಾಪಂ ಸದಸ್ಯರು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಅಂಗನವಾಡಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಕ್ಕಳಿಗೆ ನೀಡುವ ದಿನಸಿ ಸೋರಿಕೆಯಾಗುತ್ತಿರುವ ಬಗ್ಗೆ ದೂರುಗಳಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸಬೇಕೆಂದು ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಅನ್ನಪೂರ್ಣ ಕುಬಕಡ್ಡಿ ಅವರಿಗೆ ಸೂಚಿಸಿದರು.

ಕ್ವಾರಂಟೈನ್‌ನಲ್ಲಿರುವವರಿಗೆ ಸರಿಯಾದ ಊಟದ ವ್ಯವಸ್ಥೆ ಮಾಡಬೇಕು. ಹುಚ್ಚು ನಾಯಿ, ನರಿ ಮನುಷ್ಯರಿಗೆ ಕಚ್ಚಿದರೆ ಅದಕ್ಕೆ ಅಗತ್ಯ ಔಷಧ ಇಲ್ಲ. ಜೀವಕ್ಕೆ ತೊಂದರೆಯಾದರೆ ಯಾರು ಜವಾಬ್ದಾರರು ಎಂದು ಟಿಎಚ್‌ಒ ಎಂ.ಬಿ. ಪಾಟೀಲ ಅವರನ್ನು ಪ್ರಶ್ನಿಸಿದ ಸದಸ್ಯರು, ಹಳ್ಳಿಗಳಲ್ಲಿ ಜನರಿಗೆ ಪ್ರಾಣಿಗಳು ಕಚ್ಚಿದರೆ ಅದಕ್ಕೆ ಅಧಿಕಾರಿಗಳೇ ಖುದ್ದಾಗಿ ಭೇಟಿ ನೀಡಬೇಕೆಂದು ತಾಕೀತು ಮಾಡಿದರು.

ಅರಣ್ಯ, ಸಾರಿಗೆ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಪಶು ಸಂಗೋಪಣಾ ಇಲಾಖೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಮಾಹಿತಿ ಪಡೆದರು. ಜಿಪಂ ಉಪಕಾರ್ಯದರ್ಶಿ ಹಾಗೂ ಗುಳೇದಗುಡ್ಡ ತಾಪಂ ಆಡಳಿತಾಧಿಕಾರಿ ತೋಟದ ಅಧ್ಯಕ್ಷತೆ ವಹಿಸಿ, ನೂತನ ತಾಪಂ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಜಾಗ ಹುಡಕಿ ವರದಿಯನ್ನು ಜಿಪಂಗೆ ಸಲ್ಲಿಸುವಂತೆ ತಾಪಂ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸದಸ್ಯೆ ಸರಸ್ವತಿ ಮೇಟಿ, ಆಸಂಗೆಪ್ಪ ನಕ್ಕರಗುಂದಿ, ತಾಪಂ ಸದಸ್ಯರಾದ ಕನಕಪ್ಪ ಬಂದಕೇರಿ, ಕೈಲಾಸ ಕುಂಬಾರ, ದೇವಿಕಾ ಪಾದನಕಟ್ಟಿ, ರೇಣುಕಾ ಗಾಜಿ, ತಾಪಂ ಇಒ ಡಾ.ಪುನಿತ್‌ ಆರ್‌., ತಹಶೀಲ್ದಾರ್‌ ಜಿ.ಎಂ. ಕುಲಕರ್ಣಿ, ಲೋಕೋಪಯೋಗಿ ಇಲಾಖೆಯ ಶಿವಾನಂದ ಜಾಡರ, ಸಹಕಾರಿ ಇಲಾಖೆಯ ರಮೇಶ ಬೂದಿ, ಕೆ.ಡಿ. ಕರಮಳ್ಳಿ, ಸಂಜಯ ಮಬ್ರುಮಕರ, ಆರ್‌.ಎಂ. ಅರಳಿಮಟ್ಟಿ, ಆರ್‌. ಎಸ್‌. ಮುದಿಗೌಡರ ಇದ್ದರು.

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.