ತರಗತಿ ಪ್ರಾರಂಭಿಸದಂತೆ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಪ್ರಾಥಮಿಕ ಮತ್ತು ಪೂರ್ವಪ್ರಾಥಮಿಕ ಶಾಲೆಗಳಿಗೆ ಆನ್‌ಲೈನ್‌ ಮತ್ತು ಆಫ್ಲೈನ್‌ ಕ್ಲಾಸ್‌

Team Udayavani, Jun 18, 2020, 10:24 AM IST

ತರಗತಿ ಪ್ರಾರಂಭಿಸದಂತೆ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶ

ಮುಂಬಯಿ: ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಆನ್‌ಲೈನ್‌ ಮತ್ತು ಆಫ್ಲೈನ್‌ ತರಗತಿಗಳನ್ನು ಸೆಪ್ಟಂಬರ್‌ವರೆಗೆ ಪ್ರಾರಂಭಿಸುವುದನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ (ಪಿಐಎಲ್) ಸ್ಪಂದಿಸುವಂತೆ ಬಾಂಬೆ ಹೈಕೋರ್ಟ್‌ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಅರ್ಜಿಗೆ ಪ್ರತಿಕ್ರಿಯಿಸಿದ ಸರಕಾರ, 2ನೇ ತರಗತಿಯವರೆಗಿನ ಶಾಲೆಗಳನ್ನು ಸೆಪ್ಟಂಬರ್‌ವರೆಗೆ ತೆರೆಯಲಾಗುವುದಿಲ್ಲ ಎಂದು ಸೋಮವಾರ ಅಧಿಸೂಚನೆ ಹೊರಡಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ. ಅನಂತರ, 14 ವರ್ಷದವರೆಗಿನ ಮಕ್ಕಳಿಗೆ ತರಗತಿಗಳು ಪ್ರಾರಂಭವಾಗುವ ಸ್ಥಿತಿಯ ಬಗ್ಗೆ ತಿಳಿಯಲು ನ್ಯಾಯಾಲಯವು ಕೋರಿತು.

ಮುಖ್ಯ ನ್ಯಾಯಮೂರ್ತಿ ದೀಪಂಕರ್‌ ದತ್ತ ಮತ್ತು ನ್ಯಾಯಮೂರ್ತಿ ಕೆ. ಕೆ. ಟೇಟೆಡ್‌ ಅವರ ವಿಭಾಗೀಯ ಪೀಠ, ಸರಕಾರೇತರ ಸಂಸ್ಥೆ ಎಜ್ರಾ ಫೌಂಡೇಶನ್‌ ಸಲ್ಲಿಸಿದ ಪಿಐಎಲ್‌ ವಿಚಾರಣೆ ನಡೆಸುತ್ತಿ ರುವಾಗ, ವೀಡಿಯೋ ಕಾನ್ಫರೆನ್ಸಿಂಗ್‌ ಮೂಲಕ ವಕೀಲರಾದ ಶಶಿಕಾಂತ್‌ ಚೌಧರಿ ಮತ್ತು ಮನೋಜ್‌ ಕುಮಾರ್‌ ಸಿಂಗ್‌ ಅವರು ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಹಲವಾರು ವಿಷಯಗಳ ಕುರಿತು ಪ್ರಸ್ತಾವಿಸಿದರು.

ಕೋವಿಡ್ ಸೋಂಕಿನ ಸಮಯದಲ್ಲಿ 14 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಶಾಲೆಗೆ ಬರಲು ಹೇಳಿದರೆ ಮಕ್ಕಳನ್ನು ಅಪಾಯಕ್ಕೆ ತಲ್ಲಿದಂತಾಗುತ್ತದೆ. ದೀರ್ಘಾವಧಿಯವರೆಗೆ ಆನ್‌ಲೈನ್‌ ತರಗತಿಗಳಿಗೆ ಹಾಜರಾಗುವುದರಿಂದ ಅವರ ಆರೋಗ್ಯಕ್ಕೂ ಮತ್ತಷ್ಟು ಅಪಾಯವನ್ನುಂಟು ಮಾಡುತ್ತದೆ. ಅಲ್ಲದೆ ಅನೇಕ ಪೋಷಕರು ಮಕ್ಕಳಿಗೆ ಆನ್‌ಲೈನ್‌ ತರಗತಿಗಳಿಗೆ ಹಾಜರಾಗಲು ಸೌಲಭ್ಯಗಳನ್ನು ಒದಗಿಸುವ ಸ್ಥಿತಿಯಲ್ಲಿರುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿ ಈ ವಯಸ್ಸಿನವರಿಗೆ ಶಾಲೆಗಳನ್ನು ಪ್ರಾರಂಭಿಸುವುದನ್ನು ಸೆಪ್ಟಂಬರ್‌ವರೆಗೆ ತಡೆಯುವಂತೆ ರಾಜ್ಯಕ್ಕೆ ನಿರ್ದೇಶನಗಳನ್ನು ಕೋರಿದರು.

ಶುಲ್ಕ ಭರಿಸಲು ಒತ್ತಾಯ
ಲಾಕ್‌ಡೌನ್‌ ಸಮಯದಲ್ಲಿ ಪೋಷ ಕರು ಎದುರಿಸುತ್ತಿರುವ ಹಣಕಾಸಿನ ಸಮಸ್ಯೆಗಳಿಂದಾಗಿ, 2020-21ರ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಶಾಲೆಗಳಿಗೆ ಸಾಮಾನ್ಯ ಶುಲ್ಕ ರಚನೆಗಾಗಿ ರಾಜ್ಯವು ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಅರ್ಜಿದಾರರು ತಿಳಿಸಿದರು. ಶೈಕ್ಷಣಿಕ ವರ್ಷಕ್ಕೆ ಯಾವುದೇ ತರಗತಿಗಳು ನಡೆಯದಿದ್ದರೂ ಕೆಲವು ಶಾಲೆಗಳು ಶುಲ್ಕವನ್ನು ಪಾವತಿಸಲು ಪೋಷಕರನ್ನು ಒತ್ತಾಯಿಸುವ ಅನೇಕ ಕಂಡುಬಂದಿವೆ. ಆದ್ದರಿಂದ ಶಾಲೆಗಳನ್ನು ತೆರೆಯುವ ಮಾರ್ಗಸೂಚಿಗಳನ್ನು ರೂಪಿಸಲು ನ್ಯಾಯಾಲಯದ ಮೇಲ್ವಿಚಾರಣೆ ಸಮಿತಿ ಇರಬೇಕು ಎಂದು ಅವರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.