ಬೀದರನಲ್ಲಿ ಕೋವಿಡ್ ಗೆ ಮತ್ತೊಂದು ಬಲಿ

ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆ ವೈದ್ಯ ಸೇರಿ 12 ಜನರಿಗೆ ಸೋಂಕು 395ಕ್ಕೆ ತಲುಪಿಸಿದ ಪಾಸಿಟಿವ್‌ ಸಂಖ್ಯೆ

Team Udayavani, Jun 18, 2020, 10:34 AM IST

18-June-08

ಬೀದರ: ಮಹಾಮಾರಿ ಕೋವಿಡ್  ನಿಂದ ಬೀದರ ಜಿಲ್ಲೆಯಲ್ಲಿ ಮರಣ ಮೃದಂಗ ಮುಂದುವರಿದಿದ್ದು, ಬುಧವಾರ ಸೋಂಕಿನಿಂದ ಬಳಲುತ್ತಿದ್ದ ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಇನ್ನೊಂದೆಡೆ ವೈದ್ಯ ಸೇರಿ 12 ಜನರಲ್ಲಿ ಪಾಸಿಟಿವ್‌ ಪತ್ತೆಯಾಗಿದ್ದು, ಈಗ ಸೋಂಕಿತರ ಸಂಖ್ಯೆ 395ಕ್ಕೆ ತಲುಪಿದೆ. ಮಂಗಳವಾರವಷ್ಟೇ ವ್ಯಕ್ತಿ ಸಾವಿಗೆ ಕಾರಣವಾಗಿರುವ ಕೋವಿಡ್  ಮತ್ತೊಂದು ಬಲಿ ಪಡೆದಿದೆ. ತಾಲೂಕಿನ ಮಲ್ಕಾಪುರದ 26 ವರ್ಷದ ಯುವಕ (ಪಿ-7695) ಜೂ. 5ರಂದು ಜ್ವರ ಮತ್ತು ಊಟ ಸೇರದ ಹಿನ್ನೆಲೆಯಲ್ಲಿ ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಕೋವಿಡ್  ಒಕ್ಕರಿಸಿದೆ.

ಜೂ. 15ರಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಬುಧವಾರ ಅವರ ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿದೆ. ಮೃತರ ಸೋಂಕಿನ ಸಂಪರ್ಕ ಇನ್ನೂ ಪತ್ತೆ ಹಚ್ಚಬೇಕಾಗಿದೆ. ರಾಜ್ಯದಲ್ಲಿ ಕೋವಿಡ್  ಗೆ ಮೃತಪಟ್ಟವರ ಸಂಖ್ಯೆಯಲ್ಲಿ ಬೀದರ ಮೂರನೇ ಸ್ಥಾನಕ್ಕೆ ತಲುಪಿದೆ. ಬೀದರನ ಓಲ್ಡ್‌ ಸಿಟಿಯ 82 ವರ್ಷದ (ಪಿ-590) ವ್ಯಕ್ತಿ ಕೊರೊನಾಗೆ ಮೊದಲ ಬಲಿ ಆಗಿದ್ದರು. ನಂತರ ಚಿಟಗುಪ್ಪಾದ 50 ವರ್ಷದ (ಪಿ-1041), ಬೀದರ ವಿದ್ಯಾನಗರದ 49 ವರ್ಷದ (ಪಿ-1712), ಫಾತ್ಮಾಪುರದ 47 ವರ್ಷದ ಮಹಿಳೆ (ಪಿ-2783), ಚಿಟಗುಪ್ಪದ 75 ವರ್ಷದ ವ್ಯಕ್ತಿ (ಪಿ-2965), ಬೀದರ ಗವಾನ್‌ ಚೌಕ್‌ನ 59 ವರ್ಷದ ಮಹಿಳೆ (ಪಿ-1950) ಹಾಗೂ ಬೀದರ ಶಹಾಗಂಜ್‌ನ 49 ವರ್ಷದ ವ್ಯಕ್ತಿ (ಪಿ-7524) ಸೋಂಕಿನಿಂದ ಮೃತಪಟ್ಟಿದ್ದು, ಈಗ 8ನೇ ಸಾವು ಸಂಭವಿಸಿದಂತಾಗಿದೆ.

ಇನ್ನೂ ಜಿಲ್ಲೆಯಲ್ಲಿ ಬುಧವಾರ ಪತ್ತೆಯಾಗಿರುವ 12 ಹೊಸ ಪಾಸಿಟಿವ್‌ ಪ್ರಕರಣಗಳಲ್ಲಿ 15 ವರ್ಷದೊಳಗಿನ 5 ಮಕ್ಕಳು ಸೇರಿರುವುದು ತೀವ್ರ ಆಘಾತವನ್ನುಂಟು ಮಾಡಿದೆ. ಅದರಲ್ಲಿ ಒಂದು ವರ್ಷದ ಮಗು ಸಹ ಸೇರಿದೆ. ಖೇಣಿ ರಂಜೋಳ್‌ ಗ್ರಾಮದ ವೈದ್ಯರಲ್ಲಿಯೂ ಕೋವಿಡ್  ಸೋಂಕು ಪತ್ತೆಯಾಗಿದೆ. ತೆಲಂಗಾಣ ಗಡಿಯ ಭಂಗೂರ ಚೆಕ್‌ ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಮತ್ತು ಇವರಲ್ಲಿ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿಯಲ್ಲಿ ಅವರ ಸಂಪರ್ಕಕ್ಕೆ ಒಳಗಾದ 33 ಜನ ಪೊಲೀಸ್‌ ಸಿಬ್ಬಂದಿ ಹಾಗೂ 13 ಹೋಂಗಾರ್ಡ್‌ಗಳನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ ಎಂಬ ಮಾಹಿತಿ ಇದೆ.

ಜಿಲ್ಲೆಯಲ್ಲಿ ಔರಾದ ತಾಲೂಕಿನಲ್ಲಿ ಅತಿ ಹೆಚ್ಚು 5 ಪ್ರಕರಣಗಳು ವರದಿಯಾಗಿವೆ. ತಾಲೂಕಿನ ಬೆಳಕುಣಿ 2, ಬಾಚೆಪಳ್ಳಿ, ಸಂತಪುರ ಮತ್ತು ಮಸ್ಕಲ್‌ನಲ್ಲಿ ತಲಾ ಒಂದು ಸೇರಿ ಒಟ್ಟು 5 ಕೇಸ್‌ ಗಳು, ಕಮಲನಗರ ತಾಲೂಕಿನ ಬಸವನಾಳ ಮತ್ತು ಗಂಗನಬೀಡ ತಾಂಡಾದಲ್ಲಿ ತಲಾ 2 ಕೇಸ್‌ ಹಾಗೂ ಬೀದರ ತಾಲೂಕಿನ ಖೇಣಿ ರಂಜೋಳ, ಬಗದಲ್‌ ತಾಂಡಾದಲ್ಲಿ ತಲಾ 1 ಕೇಸ್‌ ಸೇರಿ 2 ಕೇಸ್‌ಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 395ಕ್ಕೆ ತಲುಪಿದಂತಾಗಿದೆ. 8 ಜನ ಸಾವನ್ನಪ್ಪಿದ್ದರೆ, 239 ಮಂದಿ ಡಿಸಾcರ್ಜ್‌ ಆಗಿದ್ದು, ಇನ್ನೂ 148 ಪ್ರಕರಣಗಳು ಸಕ್ರೀಯವಾಗಿವೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.

ಟಾಪ್ ನ್ಯೂಸ್

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.