ಬೀದರ್ ನಲ್ಲಿ ಕೋವಿಡ್ 19 ಸೋಂಕಿಗೆ 9ನೇ ಬಲಿ ; 9 ಹೊಸ ಪಾಸಿಟಿವ್ ಪ್ರಕರಣ ವರದಿ


Team Udayavani, Jun 18, 2020, 10:37 PM IST

ಬೀದರ್ ನಲ್ಲಿ ಕೋವಿಡ್ 19 ಸೋಂಕಿಗೆ 9ನೇ ಬಲಿ ; 9 ಹೊಸ ಪಾಸಿಟಿವ್ ಪ್ರಕರಣ ವರದಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಕೋವಿಡ್ 19 ಸೋಂಕಿನ ಅಟ್ಟಹಾಸ ಮುಂದುವರೆದಿದೆ.

ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಕೋವಿಡ್ 19 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪುತ್ತಿದ್ದಾರೆ.

ಇನ್ನೊಂದೆಡೆ ಜಿಲ್ಲೆಯಲ್ಲಿ ಗುರುವಾರ ಮತ್ತೆ 9 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈವರೆಗೆ ಮೃತರ ಸಂಖ್ಯೆ 9ಕ್ಕೆ ಏರಿಕೆ ಆಗಿದ್ದು, ಸೋಂಕಿತರ ಸಂಖ್ಯೆ 401ಕ್ಕೆ ತಲುಪಿದೆ.

ಮಂಗಳವಾರದಿಂದ ಸತತ ಮೂರು ದಿನ ಕೋವಿಡ್ ಮರಣ ಮೃದಂಗ ಬಾರಿಸಿರುವುದು ಜಿಲ್ಲೆಯಲ್ಲಿ ಮಹಾಮಾರಿಯ ಆತಂಕ ಹೆಚ್ಚುವಂತೆ ಮಾಡಿದೆ.

ಗುರುವಾರ ಚಿಟಗುಪ್ಪ ಪಟ್ಟಣದ ಕಂಟೈನ್ಮೆಂಟ್ ಝೋನ್ ನಿವಾಸಿಯಾಗಿರುವ 55 ವರ್ಷದ ವ್ಯಕ್ತಿ (ಪಿ-7776) ಬುಧವಾರ ಮೃತಪಟ್ಟಿದ್ದರು, ಗುರುವಾರ ವ್ಯಕ್ತಿಯ ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ.

ಈ ವ್ಯಕ್ತಿ ತೀವ್ರ ಜ್ವರ ಮತ್ತು ಶ್ವಾಸಕೋಶದಲ್ಲಿ ತೊಂದರೆ ಹಿನ್ನಲೆ ಜೂ. 8ರಂದು ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಟಗುಪ್ಪ ಪಟ್ಟಣದಲ್ಲೇ ಕೋವಿಡ್ 19 ಸೋಂಕು ಸಂಬಂಧಿಸಿ ನಾಲ್ಕನೇ ಸಾವು ಸಂಭವಿಸಿದಂತಾಗಿದೆ.

ಗುರುವಾರ ಪತ್ತೆಯಾಗಿರುವ ಸೋಂಕಿತರೆಲ್ಲರೂ ಭಾಲ್ಕಿ ತಾಲೂಕಿನವರಾಗಿದ್ದಾರೆ. ತಾಲೂಕಿನ ಶಿವಣಿ ಗ್ರಾಮದಲ್ಲಿ 2 ಪ್ರಕರಣ, ರುದನೂರ, ಕಾಕನಾಳ್ ಮತ್ತು ಲಖನಗಾಂವ್ ಗ್ರಾಮದಲ್ಲಿ ತಲಾ ಒಂದು ಕೇಸ್ ಸೇರಿ ಒಟ್ಟು 5 ಪ್ರಕರಣಗಳು ವರದಿಯಾಗಿವೆ. 60 ವರ್ಷದ ಪುರುಷ ಪಿ-7772, 69 ವರ್ಷದ ಪುರುಷ ಪಿ-7773, 19 ವರ್ಷದ ಯುವತಿ ಪಿ-7774 ಮತ್ತು 18 ವರ್ಷದ ಯುವತಿ ಪಿ-7775ಗೆ ಮಹಾರಾಷ್ಟ್ರ ಸಂಪರ್ಕ ಮತ್ತು 21 ವರ್ಷದ ಯುವತಿ ಪಿ-7771 ರೋಗಿಗೆ ಪಿ-4369 ಸಂಖ್ಯೆ ರೋಗಿಯಿಂದ ಈ ಸೋಂಕು ಹರಡಿರುವ ಮಾಹಿತಿ ಲಭ್ಯವಾಗಿದೆ.

ಜಿಲ್ಲೆಯಲ್ಲಿ ಇದೀಗ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 401 ಆದಂತಾಗಿದೆ. ಗುರುವಾರ 12 ಜನ ಸೇರಿ ಒಟ್ಟು 251 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇನ್ನೂ 141 ಪ್ರಕರಣಗಳು ಸಕ್ರೀಯವಾಗಿವೆ ಎಂದು ಆರೋಗ್ಯ ಇಲಾಖೆ ತನ್ನ ದೈನಂದಿನ ಮಾಹಿತಿಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.