ಶಿರಾದಲ್ಲಿ ಆತಂಕ ಹೆಚ್ಚಿಸಿದ ಸೀಲ್‌ಡೌನ್‌


Team Udayavani, Jun 19, 2020, 5:48 AM IST

ira-atanka

ಶಿರಾ: ಆಂಧ್ರದ ಹಿಂದೂಪುರಕ್ಕೆ ಭೇಟಿ ನೀಡಿ ನಗರಕ್ಕೆ ವಾಪಸ್‌ ಬಂದಿದ್ದ ಪಾತ್ರೆ ವ್ಯಾಪಾರಿಯಲ್ಲಿ ಕಾಣಿಸಿಕೊಂಡಿದ್ದ ಕೊರೊನಾ ನಗರದಲ್ಲಿ ಸದ್ದಿಲ್ಲದೇ ವ್ಯಾಪಿಸು ತ್ತಿದೆಯೇ ಎನ್ನುವ ಆತಂಕ ಜನರಲ್ಲಿ ಮೂಡಿಸಿದೆ. ಮೊದಲಿಗೆ ಆತನಲ್ಲಿ  ಕಾಣಿಸಿಕೊಂಡ ಸೋಂಕು, ಆತನ ಪ್ರಾಥಮಿಕ ಸಂಪರ್ಕಗಳಲ್ಲಿಯೂ ದೃಢಪಟ್ಟು ಒಮ್ಮೆಗೆ ಆತನ ಕುಟುಂಬ ವರ್ಗದ 6 ಮಂದಿಗೆ ಖಾತರಿಗೊಳ್ಳುವ ಮೂಲಕ ಸೋಂಕಿತರ ಸಂಖ್ಯೆ ಹೆಚ್ಚಿಸಿತ್ತು.

ನಂತರ ಆತನ ಸಂಪರ್ಕದಲ್ಲಿದ್ದ ಕಚೇರಿ ಮೊಹಲ್ಲಾ ವಾಸಿ ಸುಮಾರು 35 ವರ್ಷದ ವ್ಯಕ್ತಿಯೊಬ್ಬನಲ್ಲಿ ಸೋಂಕು ದೃಢಗೊಂಡು, ಸೋಂಕಿತರ ಸಂಖ್ಯೆಯನ್ನು ವೃದಿಸಿತ್ತು. ಸೋಂಕು ಕಂಡ ಬಂದ ಪ್ರದೇಶಗಳಲ್ಲಿ ಸೀಲ್‌ಡೌನ್‌ ಕಾರ್ಯ ನಡೆಸಲಾಗಿತ್ತು. ಇದರ ನಡುವೆ ಇಲ್ಲಿನ  ಹೊಸ ಬಸ್‌ನಿಲ್ದಾಣದ ರಸ್ತೆ ಯಲ್ಲಿ ಬಸ್‌ ನಿಲ್ದಾಣದಿಂದ ಗಣಪತಿ ದೇವಾಲಯದ ಮಾರುಕಟ್ಟೆವರೆಗೆ ಮತ್ತು ಹಳೆ ಅಂಚೆ ಕಚೇರಿ ರಸ್ತೆಯಲ್ಲಿ ರಾಘವೇಂದ್ರ ಸ್ವಾಮಿ ದೇವಾಲಯದ ಬಳಿಯಿಂದ ಮೆಕ್ಕಾ ರೈಸ್‌ಮಿಲ್‌ ರಸ್ತೆ ತಿರುವು ಸೇರಿದಂತೆ  ಗಾಂಧಿ ನಗರ ಬಡಾವಣೆ ಸೀಲ್‌ ಡೌನ್‌ ಮಾಡಲಾಗಿದೆ.

ಈ ಪ್ರದೇಶದಲ್ಲಿನ ರಸ್ತೆ ವ್ಯಾಪಾರ ವಹಿವಾಟು ಒಳಗೊಂ ಡಂತೆ ಎಲ್ಲ ಬಗೆಯ ಓಡಾಟ, ವಹಿವಾಟುಗಳನ್ನು ನಿಷೇಧಿಸಲಾಗಿದೆ ಮತ್ತು ನಿಷೇಧಿತ ಪ್ರದೇಶದಲ್ಲಿ ಸೋಂಕು ನಿವಾರಣಾ  ದ್ರಾವಣ ಸಿಂಪಡಿಸಲಾಗುತ್ತಿದೆ. ನಗರದ ಪ್ರಮುಖ ವ್ಯಾಪಾರಗಳೆಲ್ಲವೂ ಇದೇ ಪ್ರದೇಶದಲ್ಲಿ ಕೇಂದ್ರಿಕೃತವಾಗಿದ್ದು, ಬಹು ಮುಖ್ಯವಾದಪ್ರದೇಶವನ್ನು ಸೀಲ್‌ಡೌನ್‌ ಮಾಡಿದ ಹಿನ್ನೆಲೆಯಲ್ಲಿ  ನಗರವಾಸಿಗಳು ಆತಂಕಕ್ಕೆ ಈಡಾಗಿದ್ದಾರೆ.

ಇದರ ಮಧ್ಯದಲ್ಲಿ ಜನರ ನಡುವೆ ಸೋಂಕಿತರ ಸಂಖ್ಯೆ ಕುರಿತಂತೆ ಕ್ಷಣಕ್ಕೊಂದು ಗುಲ್ಲು ವ್ಯಾಪಿಸುತ್ತಿದ್ದು, ಸರಿಯಾದ ಮಾಹಿತಿ ಸಿಕ್ಕದೇ ಗೊಂದಲಕ್ಕೀಡಾಗಿದ್ದಾರೆ. ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಇಲ್ಲಿನ ತಾಲೂಕು ಕಚೇರಿಗೆ ಹೋಗಿ ಬರುವವರ  ಮೇಲೆ ತೀವ್ರ ನಿಗಾ ವಹಿಸಲಾಗಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.