ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆ ಸುಸೂತ್ರ


Team Udayavani, Jun 19, 2020, 6:10 AM IST

dwitiya-test

ರಾಮನಗರ: ಜಿಲ್ಲೆಯಲ್ಲಿ ಗುರುವಾರ ದ್ವಿತೀಯ ಪಿಯುಸಿ ಇಂಗ್ಲಿಷ್‌ ಭಾಷೆ ಪರೀಕ್ಷೆ ಯಶಸ್ವಿಯಾಗಿ ನೆರೆವೇರಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಶ್ರಮಿಸಿವೆ. ಕೋವಿಡ್‌-19 ಭೀತಿಯ ನಡುವೆ  ಸರ್ಕಾರ ಸೂಚಿಸಿದ ಎಲ್ಲ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ, ದ್ವಿತೀಯ ಪಿಯು ಇಂಗ್ಲೀಷ್‌ ಪರೀಕ್ಷೆ ನಡೆಸಿದರು. ಪರೀಕ್ಷೆ ಅಕ್ರಮಗಳಿಗೆ ಅವಕಾಶವಾಗಲಿಲ್ಲ. ಹೀಗಾಗಿ ಡಿಬಾರ್‌ ಪ್ರಕರಣಗಳು ವರದಿಯಾಗಿಲ್ಲ.

488 ವಿದ್ಯಾರ್ಥಿಗಳು ಗೈರು: ಜಿಲ್ಲಾದ್ಯಂತ ಹರಡಿ ಕೊಂಡಿದ್ದ 12 ಪರೀಕ್ಷೆ ಕೇಂದ್ರಗಳಲ್ಲಿ 8,413 ವಿದ್ಯಾರ್ಥಿಗಳು ಪೈಕಿ 7925, ಅನ್ಯ ಜಿಲ್ಲೆಗಳ 264 ವಿದ್ಯಾರ್ಥಿಗಳ ಪೈಕಿ 244, ಮತ್ತು ಅನ್ಯ ರಾಜ್ಯ ಗಳ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆ  ಬರೆದರು. 488 ವಿದ್ಯಾರ್ಥಿಗಳು ಗೈರಾಗಿದ್ದರು.

ಒಬ್ಬ ವಿದ್ಯಾರ್ಥಿನಿಗೆ ಅವಕಾಶವಿಲ್ಲ: ಜಿಲ್ಲೆಯ ಮಾಗಡಿಯಲ್ಲಿ ಒಬ್ಬ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶವಾಗಲಿಲ್ಲ ಎಂದು ಪಿಯು ಡಿಡಿ ನರಸಿಂಹಮೂರ್ತಿ ತಿಳಿಸಿದರು. ಕಾರಣ ಆಕೆ ಮನೆಯಲ್ಲಿ ಒಬ್ಬರಿಗೆ ಕೋವಿಡ್‌-19  ಸೋಂಕು ಕಾಣಿಸಿಕೊಂಡಿದ್ದರಿಂದ ಉಳಿದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಆದೇಶದನ್ವಯ ಈ ಕ್ರಮವಹಿಸ ಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಮನಗರದಲ್ಲಿ ಕಂಟೈನ್‌ಮೆಂಟ್‌ ವಲಯ ದಿಂದ ಬಂದ ವಿದ್ಯಾರ್ಥಿಯನ್ನು ಪ್ರತ್ಯೇಕ ಕೊಠಡಿ ಯಲ್ಲಿ ಪರೀಕ್ಷೆ ಬರೆಸಲಾಗಿದೆ.

ಥರ್ಮ ಲ್‌ ಸ್ಕ್ರೀನಿಂಗ್‌: ಎಲ್ಲ 12 ಪರೀಕ್ಷಾ ಕೇಂದ್ರ ಗಳಲ್ಲೂ ಆರೋಗ್ಯ ಸಹಾಯಕರು ಪ್ರತಿ ವಿದ್ಯಾ ರ್ಥಿಯನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಿ ದ ನಂತರವಷ್ಟೇ ಪರೀಕ್ಷಾ ಕೇಂದ್ರದೊಳಗೆ ಬಿಡಲಾಯಿತು. ಹ್ಯಾಂಡ್‌ ಸ್ಯಾನಿಟೈಸರ್‌  ವ್ಯವಸ್ಥೆಯಿತ್ತು. ಕಳೆದ ವರ್ಷಗಳಿಗಿಂತ ಹೆಚ್ಚಿನ ಕೊಠಡಿ ಪರೀಕ್ಷೆಗೆ ಬಳಸಿಕೊಳ್ಳಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರಿಂದ ಹೆಚ್ಚಿನ ಕೊಠಡಿಗಳ ಅವಶ್ಯಕತೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರೀಕ್ಷಾ ಅಕ್ರಮಗಳಿಗೆ  ಅವಕಾಶವಾಗದಂತೆ ಎಲ್ಲ ಪರೀಕ್ಷಾ ಕೇಂದ್ರ ಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್‌ ಜಾರಿಯಲ್ಲಿತ್ತು. ಡಿಡಿಪಿಯು ನರಸಿಂಹ ಮೂರ್ತಿಯ ಅವರು, ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಆರಂಭದಲ್ಲಿ ಸಾಮಾಜಿಕ ಅಂತರ ಮಾಯ!: ಪ್ರತಿ ಪರೀಕ್ಷೆ ಕೇಂದ್ರದಲ್ಲೂ 700ರಿಂದ 800 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ  ಎಂದು ಈ ಮೊದಲೆ ತಿಳಿವಳಿಕೆಮೂಡಿಸಿದ್ದರು. ಪರೀಕ್ಷೆ ಬರೆಯುವ ಧಾವಂತದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಮರೆತರು. ಇನ್ನೊಂದೆಡೆ ಒಂದೆರೆಡು ಪರೀಕ್ಷಾ ಕೇಂದ್ರ  ಹೊರತು ಪಡಿಸಿ ಉಳಿದ ಕೇಂದ್ರಗಳ ಸಿಬ್ಬಂದಿ ಸಹ ಈ ಬಗ್ಗೆ  ಅವರಲ್ಲಿ ಎಚ್ಚರಿಕೆ ಮೂಡಿಸಲಿಲ್ಲ. ಬೆಳಿಗ್ಗೆ 9 ಗಂಟೆಗೆ ಬಂದ ವಿದ್ಯಾರ್ಥಿಗಳು ಗುಂಪುಗುಂಪಾಗಿ ಚರ್ಚೆ ನಡೆಸಿದ್ದು, ತಾವು ಪರೀಕ್ಷೆ ಬರೆಯಬೇಕಾದ ಕೊಠಡಿ ಸಂಖ್ಯೆಯನ್ನು ಹುಡುಕುವ ಪ್ರಯತ್ನದಲ್ಲಿ ಸಾಮಾಜಿಕ ಅಂತರ ಮರೆತರು.  ಪರೀಕ್ಷೆ ನಂತರವೂ ಈ ನಿಯಮ ಗಾಳಿಗೆ ತೂರಿದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.