ವ್ಯಾಪಾರೋದ್ಯಮ ರೂಪುರೇಷೆ ಬದಲು

ಆರ್ಥಿಕ ಸಂಕಷ್ಟ ಎದುರಿಸಲು ಹಲವು ಮಾರ್ಪಾಡು

Team Udayavani, Jun 19, 2020, 10:17 AM IST

ವ್ಯಾಪಾರೋದ್ಯಮ ರೂಪುರೇಷೆ ಬದಲು

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಕೊವಿಡ್‌-19 ಹಾಗೂ ಆರ್ಥಿಕ ಹಿಂಜರಿತದ ಕಾರಣದಿಂದ ಬಹುತೇಕ ಕ್ಷೇತ್ರಗಳು ಆತಂಕದಲ್ಲಿವೆ. ವ್ಯಾಪಾರೋದ್ಯಮ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ. ಆರ್ಥಿಕ ಸಂಕಷ್ಟದಿಂದ ಪಾರಾಗಲು, ವೆಚ್ಚ ತಗ್ಗಿಸುವ ಉದ್ದೇಶದಿಂದ ನಗರದ ಹಲವು ವ್ಯಾಪಾರೋದ್ಯಮ ಸಂಸ್ಥೆಗಳು ಹಲವಾರು ಮಾರ್ಪಾಡು ಮಾಡಿಕೊಳ್ಳುತ್ತಿವೆ.

ಉದ್ಯಮದ ಕಾನ್ಸೆಪ್ಟ್ಗಳು, ಮಾದರಿಗಳು ಹೊಸ ರೂಪ ಪಡೆದುಕೊಳ್ಳುತ್ತಿವೆ. ಕೆಲ ಸಂಸ್ಥೆಗಳು ಕಚೇರಿಗಳನ್ನು ಕಿರಿದಾಗಿಸುತ್ತಿದ್ದರೆ, ಇನ್ನು ಕೆಲ ಸಂಸ್ಥೆಗಳು ಕಚೇರಿಗಳನ್ನೇ ಬಂದ್‌ ಮಾಡಿ ವರ್ಕ್‌ ಪ್ರಾಮ್‌ ಹೋಮ್‌ ಸಂಸ್ಕೃತಿ ಅಳವಡಿಸಿಕೊಳ್ಳುತ್ತಿವೆ. ವರ್ಷಾರಂಭದಲ್ಲಿ ಆರ್ಥಿಕ ಹಿಂಜರಿತದ ಸಂದರ್ಭದಲ್ಲಿಯೇ ವೆಚ್ಚ ಕಡಿಮೆ ಮಾಡುವ ಬಗ್ಗೆ ಹಲವು ಉದ್ಯಮಗಳು ಯೋಜನೆ ರೂಪಿಸಿಕೊಂಡಿದ್ದವು. ಆದರೆ ಕೋವಿಡ್‌-19 ಸಂಕಷ್ಟ ಹೆಚ್ಚಿಸಿದ್ದರಿಂದ ಯೋಜನೆಯನ್ನು ತ್ವರಿತ ಗತಿಯಲ್ಲಿ ಅನುಷ್ಠಾನಗೊಳಿಸುತ್ತಿವೆ. ಕೈಗಾರಿಕಾ ವಸಾಹತುಗಳಲ್ಲಿ ಬಹು ಘಟಕಗಳನ್ನು ಹೊಂದಿದ್ದ ಉದ್ಯಮಗಳು ಕೆಲ ಘಟಕಗಳನ್ನು ಬಂದ್‌ ಮಾಡಲು ಮುಂದಾದರೆ, ಇನ್ನು ಕೆಲವು ವಿಲೀನಗೊಳಿಸಲು ಮುಂದಾಗಿವೆ.

ಉತ್ಪಾದನಾ ಕ್ಷೇತ್ರದಲ್ಲಿ “ವರ್ಕ್‌ ಫ್ರಾಮ್‌ ಹೋಮ್‌’ ಸಾಧ್ಯವಿಲ್ಲದಿದ್ದರಿಂದ ಉತ್ಪಾದನಾ ವೆಚ್ಚ ಕಡಿಮೆ ಮಾಡಲು ಹಲವು ಮಾರ್ಗೋಪಾಯ ಕೈಗೊಳ್ಳಲಾಗುತ್ತಿದೆ. ಕಚ್ಚಾ ಸಾಮಗ್ರಿ ಆವಕ, ಉತ್ಪಾದನೆ, ಸಾಗಾಣಿಕೆ, ಮಾನವ ಸಂಪನ್ಮೂಲ, ಕಚೇರಿ ನಿರ್ವಹಣೆ, ವಿದ್ಯುತ್‌ ಬಿಲ್‌, ಸಾಗಾಣಿಕೆ ಹೀಗೆ ವಿವಿಧ ಹಂತಗಳಲ್ಲಿ ಖರ್ಚು ಕಡಿಮೆ ಮಾಡಲು  ಯೋಜಿಸಲಾಗಿದೆ.

ವಿಲೀನ ಪ್ರಕ್ರಿಯೆ ಸಾಧ್ಯತೆ ಹೆಚ್ಚಾಗಿದೆ. ಸಣ್ಣ ಸಂಸ್ಥೆಗಳು ದೊಡ್ಡ ಸಂಸ್ಥೆಗಳ ತೆಕ್ಕೆಗೆ ಸೇರಬಹುದಾಗಿದೆ. ಇದರಿಂದ ಬಲಿಷ್ಠರು ಮಾತ್ರ ಸ್ಪರ್ಧೆಯಲ್ಲಿ ಉಳಿಯುವಂತಾಗುತ್ತದೆ. ಹಲವು ಸಂಸ್ಥೆಗಳು ಉದ್ಯಮ ವಿಸ್ತರಣೆಯನ್ನು ಮುಂದೂಡುತ್ತಿವೆ. ಉದ್ಯೋಗಿಗಳ ನೇಮಕಾತಿಯನ್ನು ತಾತ್ಕಾಲಿಕವಾಗಿ ತಡೆಹಿಡಿದಿವೆ. ಬಹುಸಾಮಗ್ರಿಗಳ ಉತ್ಪಾದನೆಗೆ ಹಾಗೂ ಮಾರಾಟಕ್ಕೆ ಇದು ನಾಂದಿ ಹಾಡಲಿದೆ. ಜನರ ಬೇಡಿಕೆಗನುಗುಣವಾಗಿ ಮಳಿಗೆಗಳಲ್ಲಿ ವೈವಿಧ್ಯಮಯ ಸಾಮಗ್ರಿಗಳ ಮಾರಾಟ ಹೆಚ್ಚಾಗಲಿದೆ. ವ್ಯಾಪಾರದ ಹೆಚ್ಚಳಕ್ಕಾಗಿ ಫ್ರಾಂಚೈಸಿಗಿಂತ ಎಲ್ಲ ಕಂಪನಿಗಳ ಉತ್ಪನ್ನಗಳ ಮಾರಾಟವನ್ನು ಒಂದೇ ಸೂರಿನಡಿ ನಡೆಸಲು ಮುಂದಾಗುವವರು ಹೆಚ್ಚಾಗುತ್ತಿದ್ದಾರೆ.

ಆರ್ಥಿಕ ಸಂಕಷ್ಟದಿಂದ ಕೊಳ್ಳುಬಾಕ ಸಂಸ್ಕೃತಿ ಕಡಿಮೆಯಾಗುವುದರಿಂದ ಜನರು ಅತ್ಯಗತ್ಯ ಸಾಮಗ್ರಿಗಳ ಖರೀದಿಗೆ ಒತ್ತು ನೀಡುತ್ತಾರೆ. ಗ್ರಾಹಕರ ಬೇಡಿಕೆ ಈಡೇರಿಕೆಗೆ ಆದ್ಯತೆ ನೀಡುವುದು ವ್ಯಾಪಾರಿಗಳಿಗೆ ಅನಿವಾರ್ಯವೂ ಆಗಿದೆ. ಲಾಕ್‌ಡೌನ್‌ ಕಾರಣದಿಂದ ಮನೆಯಿಂದ ಹೊರಗೆ ಬರುವವರ ಪ್ರಮಾಣ ಕಡಿಮೆಯಾಗಿರುವುದರಿಂದ ಗ್ರಾಹಕರನ್ನು ತಲುಪಲು ವ್ಯಾಪಾರಿಗಳು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿದ್ದಾರೆ. ಗ್ರಾಹಕನಿದ್ದಲ್ಲಿಯೇ ಉತ್ಪನ್ನ ಅಥವಾ ಸೇವೆ ಒದಗಿಸುವ ಪರಿಪಾಠ ಹೆಚ್ಚಲಿದೆ. ಆರ್ಥಿಕ ಸಂಕಷ್ಟ ಇನ್ನೆಷ್ಟು ಕಾಲ ಇರಲಿದೆ ಎಂಬುದನ್ನು ಈಗಲೇ ಅಂದಾಜಿಸುವುದು ಕಷ್ಟಕರ.

ಆರ್ಥಿಕ ಹಿಂಜರಿತದಿಂದ ಮೊದಲೇ ರಿಯಲ್‌ ಎಸ್ಟೇಟ್‌ ಉದ್ಯಮದ ಸ್ಥಿತಿ ನಿರಾಶಾದಾಯಕವಾಗಿತ್ತು, ಆದರೀಗ ಕೊರೊನಾ ಗಾಯದ ಮೇಲೆ ಬರೆ ಎಳೆದಿದೆ. ಬಹುಕೊಠಡಿ ಮನೆಗಳಿಗಿಂತ 1ಬಿಎಚ್‌ಕೆ ಮನೆಗಳಿಗೆ, ವಾಣಿಜ್ಯ ಸಂಕಿರ್ಣಗಳಲ್ಲಿ ಸಣ್ಣ ಅಂಗಡಿ, ಕಚೇರಿಗಳಿಗೆ ಹೆಚ್ಚು ಬೇಡಿಕೆ ಬರಬಹುದೆಂದು ನಗರದ ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರು ಅಭಿಪ್ರಾಯಪಡುತ್ತಾರೆ.

ಕೋವಿಡ್ ಸಾಮಾಜಿಕ, ಮಾನಸಿಕ ಸ್ಥಿತಿಯ ಮೇಲೆ ಪರಿಣಾಮ ಬೀರಿದಂತೆ ಔದ್ಯಮಿಕ ಕ್ಷೇತ್ರದ ಮೇಲೆ ಕೂಡ ಪರಿಣಾಮ ಉಂಟು ಮಾಡಿದೆ. ಹಲವು ವ್ಯಾಪಾರೋದ್ಯಮಗಳ ವರ್ಷನ್‌ ಬದಲಿಸಲು ಕಾರಣವಾಗಿದೆ.

ಕೋವಿಡ್ ದೊಂದಿಗೆ ನಾವು ಹೊಂದಿಕೊಂಡು ಸುರಕ್ಷತಾ ಕ್ರಮಗಳೊಂದಿಗೆ ನಮ್ಮ ವ್ಯಾಪಾರೋದ್ಯಮ ನಡೆಸುವುದು ಅನಿವಾರ್ಯ. ಆರ್ಥಿಕ ಹಿಂಜರಿತ ಉದ್ಯಮಗಳ ಮಾದರಿಗಳನ್ನು ಬದಲಿಸುವಂತೆ ಮಾಡಿದೆ ಎಂಬುದು ನಿಸ್ಸಂಶಯ. ವರ್ಕ್‌ ಪ್ರಾಮ್‌ ಹೋಮ್‌ ಎಂಬುದು ಐಟಿ ಕ್ಷೇತ್ರಕ್ಕೆ ಹೊಸದಲ್ಲ. ಆದರೆ ಈಗ ಹಲವು ಕ್ಷೇತ್ರಗಳು ಇದೇ ಮಾದರಿ ಅನುಸರಿಸುತ್ತಿವೆ. ಹಲವು ಸಂಸ್ಥೆಗಳು ಕಚೇರಿಗಳನ್ನು ಕಿರಿದಾಗಿಸಿದರೆ, ಇನ್ನು ಕೆಲ ಕಚೇರಿ ಕಾನ್ಸೆಪ್ಟ್ ಇಲ್ಲವಾಗಿಸಿವೆ. ಕಚೇರಿ ಬಾಡಿಗೆ, ಸಿಬ್ಬಂದಿ ಪ್ರಯಾಣ, ಹೌಸ್‌ಕೀಪಿಂಗ್‌, ಭದ್ರತೆ ಸೇರಿದಂತೆ ಶೇ.20ರಿಂದ ಶೇ.30 ವೆಚ್ಚ ತಗ್ಗಿಸಲು ಮುಂದಾಗಿವೆ. ಉತ್ಪಾದನಾ ಕ್ಷೇತ್ರಕ್ಕೆ ಇದು ಅಮೋಘ ಅವಕಾಶ ಕಲ್ಪಿಸಿದಂತಾಗಿದೆ. ಗುಣಮಟ್ಟದ ಉತ್ಪನ್ನಗಳಿಗೆ ಉತ್ತಮ ಮೌಲ್ಯ ದೊರೆಯಲಿದೆ. ಜಗತ್ತು ನಮ್ಮ ದೇಶದೆಡೆಗೆ ನೋಡುತ್ತಿದ್ದು, ಕೃಷಿ ಹಾಗೂ ಆಹಾರೋದ್ಯಮಗಳ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುವುದು. ಆದರೆ ಇದು ರಿಯಲ್‌ ಎಸ್ಟೇಟ್‌ ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. –ರವಿ ಗುತ್ತಲ, ನಿರ್ದೇಶಕರು, ಸೆಂಟರ್‌ ಫಾರ್‌ ಇನ್ನೊವೇಶನ್‌ ಆ್ಯಂಡ್‌ ಪ್ರಾಡಕ್ಟ್ ಡೆವಲಪ್‌ಮೆಂಟ್‌, ಕೆಎಲ್‌ಇ ವಿಶ್ವವಿದ್ಯಾಲಯ

ಆರ್ಥಿಕ ಹಿನ್ನಡೆ ಎಂದು ಪರಿಗಣಿಸದೇ ಅವಕಾಶ ಎಂದೇ ತಿಳಿದರೆ ಏಳ್ಗೆಯಾಗಲು ಸಾಧ್ಯ. ಉದ್ಯಮ ಕ್ಷೇತ್ರದಲ್ಲಿ ಯಾವುದೇ ಬದಲಾವಣೆಯಾದರೂ ಉದ್ಯೋಗಿಗಳಂತೂ ಬೇಕು. ಉದ್ಯಮಗಳ ವಿಸ್ತರಣೆ ವಿಳಂಬವಾಗಬಹುದು. ಇಲ್ಲವೇ ಉದ್ಯಮಗಳ ಮಾದರಿ ಬದಲಾಗಬಹುದು. ಆದರೆ ಸ್ಟಾರ್ಟಪ್‌ಗ್ಳಿಗೆ ಇದು ಸುಸಂದರ್ಭ. ನವೀನ ಉತ್ಪನ್ನಗಳನ್ನು ಹಾಗೂ ವಿಭಿನ್ನ ಸೇವೆಗಳನ್ನು ಒದಗಿಸುವವರಿಗೆ ಇದು ಶುಭ ಕಾಲ. ಕೌಶಲ್ಯ ಹೊಂದಿದವರಿಗೆ ಬೇಡಿಕೆ ಹೆಚ್ಚಾಗಲಿದೆ, ಅಂಥವರು ಉತ್ತಮ ಅವಕಾಶ ಪಡೆಯಲು ಸಾಧ್ಯವಿದೆ. ನಿರ್ವಹಣಾ ತಜ್ಞರು ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ತೋರಲು ಅವಕಾಶವಿದೆ. –ಡಾ|ವಿಶ್ವನಾಥ ಕೊರವಿ ನಿರ್ದೇಶಕರು, ಚೇತನ ಬ್ಯುಸಿನೆಸ್‌ ಸ್ಕೂಲ್‌

ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಎಲ್ಲ ಉದ್ಯಮಿಗಳು ವೆಚ್ಚ ಕಡಿಮೆ ಮಾಡಲು ಮುಂದಾಗುವುದು ಸಹಜ ಪ್ರಕ್ರಿಯೆ. ಕಚೇರಿಗಳನ್ನು ಕಿರಿದಾಗಿಸಿಕೊಳ್ಳಲು ನಗರದ ಅನೇಕ ವ್ಯಾಪಾರೋದ್ಯಮಿಗಳು ಮುಂದಾಗುತ್ತಿದ್ದಾರೆ. ಕಿರಿದಾದ ಜಾಗದಲ್ಲಿ ಕಚೇರಿ ಒಳಾಂಗಣ ವಿನ್ಯಾಸ ಮಾಡಿಕೊಡುವಂತೆ ಕೇಳುವವರ ಸಂಖ್ಯೆ ಹೆಚ್ಚಾಗಿದೆ. ಇನ್ನು ಕೆಲವರು ಮನೆಯಲ್ಲೇ ಕಚೇರಿ ವಿನ್ಯಾಸ ಮಾಡಿಸಿಕೊಳ್ಳುತ್ತಿದ್ದಾರೆ. ಮುಂದೆ ನಗರದ ಶೋರೂಮ್‌ಗಳ ವಿನ್ಯಾಸ ಕೂಡ ಬದಲಾಗಬಹುದು. ಒಳಾಂಗಣ ವಿನ್ಯಾಸಗಾರರಿಗೆ ಈಗ ಬೇಡಿಕೆ ಹೆಚ್ಚಾಗಿದೆ. –ಪ್ರತಿಭಾ ಪುರೋಹಿತ, ಒಳಾಂಗಣ ವಿನ್ಯಾಸಗಾರರು.

 

-ವಿಶ್ವನಾಥ ಕೋಟಿ

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.