ತೆಕ್ಕಟ್ಟೆ: ಮೃತ ವ್ಯಕ್ತಿಯಲ್ಲಿ Covid 19 ಸೋಂಕು ದೃಢ: DC G Jagadish
Team Udayavani, Jun 19, 2020, 6:55 PM IST
ಮಹಾರಾಷ್ಟ್ರದ ಮುಂಬೈನಿಂದ ಉಡುಪಿ ಜಿಲ್ಲೆಯ ತೆಕ್ಕಟ್ಟೆ ಗ್ರಾಮಕ್ಕೆ ಗುರುವಾರ ಮಧ್ಯಾಹ್ನ 2.30ರ ಸುಮಾರಿಗೆ ನಾಲ್ವರು ಆಗಮಿಸಿದ್ದರು. ಅಧಿಕಾರಿಗಳು ಅವರ ಥರ್ಮಲ್ ಟೆಸ್ಟ್ ನಡೆಸಿ ಹೋಂ ಕ್ವಾರಂಟೈನ್ ಗೆ ಕಳುಹಿಸಿದ್ದರು. ಆದರೆ ಅದೇ ದಿನ ಸಂಜೆ ಅವರಲ್ಲಿ ಅನಾರೋಗ್ಯಪೀಡಿತರಾಗಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು. ಅವರ ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಪಾಸಿಟಿವ್ ವರದಿಯಾಗಿದೆ. ಈ ಮೂಲಕ ಕೋವಿಡ್ ಸೋಂಕಿಗೆ ಜಿಲ್ಲೆಯಲ್ಲಿ ಎರಡನೇ ಬಲಿಯಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಮಾಹಿತಿ ನೀಡಿದ್ದಾರೆ..