ಕೋವಿಡ್ ತಡೆಗೆ ಸ್ವರಕ್ಷಣೆ ಅಗತ್ಯ
Team Udayavani, Jun 20, 2020, 5:10 AM IST
ಚಾಮರಾಜನಗರ: ಕೋವಿಡ್-19 ತಡೆಗಾಗಿ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾಡಳಿತ ನಗರದಲ್ಲಿ ಆಚರಿಸಿದ ಮಾಸ್ಕ್ ದಿನ ಗಮನ ಸೆಳೆಯಿತು. ನಗರದ ಚಾಮರಾಜೆಶ್ವರ ದೇವಾಲಯದ ಮುಂದೆ ಆಯೋಜಿಸಿದ್ದ ಆರೋಗ್ಯ ಜಾಗೃತಿ ಪಾದಯಾತ್ರೆಗೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಚಾಲನೆ ನೀಡಿದರು.
ಬಳಿಕ ಆರೋಗ್ಯ ಜಾಗೃತಿ ಪಾದಯಾತ್ರೆಯಲ್ಲಿ ಕೋವಿಡ್-19ರ ಮುಂಜಾಗ್ರತಾ ಕ್ರಮಗಳ ಪಾಲನೆ ಕುರಿತು ಭಿತ್ತಿಪತ್ರ ಹಿಡಿದು ಅಧಿಕಾರಿಗಳು ಪಾಲ್ಗೊಂಡಿದ್ದರು. ಶಾಸಕ ನಿರಂಜನಕುಮಾರ್, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಪಂ ಸಿಇಒ ನಾರಾಯಣರಾವ್, ಎಸ್ಪಿ ಆನಂದಕುಮಾರ್ ಇತರ ಹಿರಿಯ ಅಧಿಕಾರಿಗಳು ಕಾಲ್ನಡಿಗೆಯಲ್ಲಿ ನಗರದ ಮುಖ್ಯರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನ ತಲುಪಿದರು.
ಕೋವಿಡ್ ನಿಯಂತ್ರಣಕ್ಕಾಗಿ ಜನರು ಮಾಸ್ಕ್ ಧರಿಸುವುದು, ಆಗಿಂದಾಗ್ಗೆ ಸೋಪಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಸುವ ಬಗ್ಗೆ ಜಾಗೃತಿ ಮೂಡಿಸಲಾಯಿತು. ಎಎಸ್ಪಿ ಅನಿತಾ, ಡಿಎಚ್ಒ ಡಾ.ಎಂ.ಸಿ ರವಿ, ತಹಶೀಲ್ದಾರ್ ಮಹೇಶ್, ಇತರೆ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!