ಮಂಗನ ಕಾಯಿಲೆ ನಿಯಂತ್ರಣ ಆರೋಗ್ಯ ಇಲಾಖೆ ಮೇಲುಗೈ


Team Udayavani, Jun 20, 2020, 1:18 PM IST

ಮಂಗನ ಕಾಯಿಲೆ ನಿಯಂತ್ರಣ ಆರೋಗ್ಯ ಇಲಾಖೆ ಮೇಲುಗೈ

ಹೊನ್ನಾವರ: ಚಳಿಗಾಲದಿಂದ ಮಳೆಗಾಲದವರೆಗೆ ಕಾಡುವ ಮಂಗನ ಕಾಯಿಲೆ ಈ ವರ್ಷ ಜಿಲ್ಲೆಯಲ್ಲಿ 91 ಜನರಿಗೆ ತಗುಲಿರುವುದು ರಕ್ತಪರೀಕ್ಷೆಯಿಂದ ಖಚಿತಪಟ್ಟಿತ್ತು. ಇವರಲ್ಲಿ ಕೇವಲ ಒಬ್ಬರು ಮೃತಪಟ್ಟಿದ್ದಾರೆ. ಕಾಯಿಲೆ ಪೀಡಿತರಿಗೆ ಸ್ಥಳೀಯ ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದವರು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಗುಣಮುಖರಾಗಿ ಬಂದಿದ್ದಾರೆ. ಇವರ ವೆಚ್ಚವನ್ನು ಸರ್ಕಾರವೇ ವಹಿಸಿಕೊಂಡಿದೆ.

ತಾಲೂಕಿನ ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಜೋಯಿಡಾ, ಶಿರಸಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿತ್ತು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ ಇದರ ಮಾರ್ಗದರ್ಶನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಯ ವೈದ್ಯರು, ಜಿಲ್ಲಾ ಕೆಎಫ್‌ಡಿ ವೈದ್ಯಾಧಿಕಾರಿ ಡಾ| ಸತೀಶ ಶೇಟ್‌ ಇವರ ಸಂಯೋಜನೆಯಲ್ಲಿ ಕೆಲಸಮಾಡಿದ ಕಾರಣ ಮಂಗನ ಕಾಯಿಲೆ ಹೆಚ್ಚಾಗಿ ಹಬ್ಬಲಿಲ್ಲ. ಜನ ಹೆಚ್ಚಾಗಿ ಆಸಕ್ತಿವಹಿಸಿ ಲಸಿಕೆ ಪಡೆದುಕೊಂಡಿದ್ದರೆ ಇನ್ನೂ ಕಡಿಮೆ ಪ್ರಮಾಣದಲ್ಲಿ ಕಾಯಿಲೆ ಬಾಧಿಸುತ್ತಿತ್ತು. ಮೂಲ ಸೌಲಭ್ಯ ಮತ್ತು ಸಿಬ್ಬಂದಿ ಕೊರತೆ ಹೊಂದಿದ ಮಂಗನ ಕಾಯಿಲೆ ಜಿಲ್ಲಾಘಟಕವನ್ನು ಇನ್ನೂ ಬಲಪಡಿಸಬೇಕಾದ ಅಗತ್ಯವಿದೆ.

ಜಿಲ್ಲೆಯಲ್ಲಿ 145 (ಸಿದ್ದಾಪುರದಲ್ಲಿ 103) ಮಂಗಗಳು ಸತ್ತಿರುವುದನ್ನು ಗುರುತಿಸಲಾಯಿತು. 24 ಮಂಗಗಳ ಶವಪರೀಕ್ಷೆ ನಡೆಸಲಾಯಿತು. ಒಂದು ಮಂಗನಲ್ಲಿ ಪಾಸಿಟಿವ್‌ ಕಾಣಿಸಿಕೊಂಡಿತ್ತು. 29 ಉಣ್ಣಿ ಸಂಗ್ರಹಿಸಿದ್ದರೂ ಅದರಲ್ಲಿ ಪಾಸಿಟಿವ್‌ ಬಂದಿರಲಿಲ್ಲ. 764 ಜನರ ರಕ್ತದ ಮಾದರಿಯನ್ನು (ಸಿದ್ದಾಪುರ 641) ಅದರಲ್ಲಿ 91 ಪಾಸಿಟಿವ್‌ ಬಂದಿದ್ದು (ಸಿದ್ದಾಪುರ 61) ಸಿದ್ದಾಪುರದಲ್ಲಿ ಒಂದು ಸಾವು ಸಂಭವಿಸಿದೆ. 2,38,300 ಕರಪತ್ರ, 4,505 ಐಈಸಿಗಳಿಂದ ಜನಜಾಗೃತಿ ಮೂಡಿಸಲಾಯಿತು. ಎಲ್ಲ ತಾಲೂಕುಗಳಲ್ಲಿ ಶಿಕ್ಷಕರಿಗೆ ತರಬೇತಿ ನೀಡಲಾಯಿತು. ಎಲ್ಲ ತಾಲೂಕುಗಳಲ್ಲಿ ಕೆಎಫ್‌ಡಿ ವಾರ್ಡ್‌ಗಳನ್ನು ಸಜ್ಜುಗೊಳಿಸಲಾಗಿತ್ತು. 46,872 ಡಿಎಂಪಿ ತೈಲದ ಬಾಟಲ್‌ ವಿತರಿಸಲಾಗಿತ್ತು. 593 ಕೆಜಿ ಮೆಲೆಥಿಯನ್‌ ಸಂಗ್ರಹಿಸಲಾಗಿತ್ತು. 50 ಸಾವಿರ ಲಸಿಕಾ ಕಾರ್ಡ್‌ ಸಿದ್ಧಗೊಳಿಸಲಾಗಿತ್ತು. 7,138 ಕೊಟ್ಟಿಗೆಗಳ ಉಣ್ಣಿ ನಾಶಮಾಡಲಾಯಿತು. 54,457 ಜಾನುವಾರುಗಳಿಗೆ ತಗಲಿದ ಉಣ್ಣಿಗಳನ್ನು ನಿವಾರಿಸಲಾಯಿತು.

ಜೊತೆಯಲ್ಲಿ 1,17,087 ಡೋಸ್‌ ಲಸಿಕೆಗಳನ್ನು ನೀಡುವ ಗುರಿ ಹೊಂದಲಾಗಿತ್ತು, ಸಾಕಷ್ಟು ಪ್ರಚಾರ ಮಾಡಿದ್ದರೂ ಜನ ಮುಂದೆ ಬರದ ಕಾರಣ 49,140 ಡೋಸ್‌ ಲಸಿಕೆ ವಿತರಣೆಯಾಯಿತು. ಮುಂದಿನ ವರ್ಷವಾದರೂ ಮಂಗನ ಕಾಯಿಲೆ ಸಂಭವನೀಯ ಪ್ರದೇಶದ ಎಲ್ಲ ಜನ ಲಸಿಕೆ ಪಡೆಯುವಂತೆ ಮನವೊಲಿಸಬೇಕಾಗಿದೆ.

ಮುಂದಿನ ವರ್ಷಕ್ಕಾಗಿ ಈಗಲೇ ಯೋಜನೆ ರೂಪಿಸುತ್ತಿದ್ದು, ಉಣ್ಣಿ ನಿವಾರಣೆ ಕಾರ್ಯಕ್ರಮ ಆರಂಭವಾಗಲಿದೆ. ಆಗಸ್ಟ್‌ನಿಂದ ಲಸಿಕೆ ನೀಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಕಾಯಿಲೆಯ ಮೇಲೆ ಶೇ. 100ರಷ್ಟು ಗೆಲುವು ಸಾಧಿಸಬಹುದಾಗಿದೆ. – ಡಾ| ಸತೀಶ ಶೇಟ್‌

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.