ಮುಂದುವರಿದ ದೇಶಗಳಲ್ಲೇ ಹೆಚ್ಚು ಸಾವು


Team Udayavani, Jun 20, 2020, 1:10 PM IST

ಮುಂದುವರಿದ ದೇಶಗಳಲ್ಲೇ ಹೆಚ್ಚು ಸಾವು

ಅಜ್ಮಿರ್‌: ಕೋವಿಡ್‌ ಸಂತ್ರಸ್ತೆಯ ಶವವನ್ನು ದಹನ ಮಾಡಿದ ಅನಂತರ ಪುರಸಭೆಯ ಕೆಲಸಗಾರನೊಬ್ಬ ತನ್ನ ಸಹೋದ್ಯೋಗಿಗೆ ಸೋಂಕು ನಿವಾರಕವನ್ನು ಸಿಂಪಡಿಸುತ್ತಿರುವುದು.

ವಾಷಿಂಗ್ಟನ್‌: ಜಗತ್ತಿನಲ್ಲೇ ಅತಿ ಹೆಚ್ಚು ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟವರ ಸಾಲಿನಲ್ಲಿ ಮುಂದುವರಿದ ದೇಶಗಳೇ ಮುಂಚೂಣಿಯಲ್ಲಿ ಇವೆ. ಅಮೆರಿಕ, ಬ್ರಜಿಲ್‌, ಬ್ರಿಟನ್‌, ಇಟಲಿಯಲ್ಲಿ ಅತಿ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಭಾರತದಲ್ಲಿ ಈ ಸಂಖ್ಯೆ 12,573 ಆಗಿದ್ದು ಎಂಟನೇ ಸ್ಥಾನದಲ್ಲಿ ಇದೆ.

ಕೋವಿಡ್‌ ಸಾವಿನ ಸಂಖ್ಯೆಯನ್ನು ವಿಶ್ವಾದ್ಯಂತ ಲೆಕ್ಕಾಚಾರ ಹಾಕುವ ವಲ್ಡೊಮೀಟರ್‌ ದತ್ತಾಂಶದ ಪ್ರಕಾರ, ಈವರೆಗೆ ಒಟ್ಟು 4,56,291 ಮಂದಿ ಮೃತಪಟ್ಟಿದ್ದಾರೆ. 86 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, 213 ದೇಶಗಳಿಗೆ ಸೋಂಕು ವ್ಯಾಪಿಸಿದೆ. ಜತೆಗೆ ಆ ದೇಶಗಳ ವಿವಿಧ ಪ್ರಾಂತ್ಯಗಳಲ್ಲಿ ಹಬ್ಬುತ್ತಿದೆ. ಅಮೆರಿಕದಲ್ಲಿ ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ 12,0688 ಆಗಿದೆ. ಬ್ರಜಿಲ್‌ನಲ್ಲಿ 47,869 ಮಂದಿ ಮೃತಪಟ್ಟಿದ್ದು ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ಬ್ರಿಟನ್‌ನಲ್ಲಿ 42,288 ಮಂದಿ ಮೃತಪಟ್ಟಿದ್ದು ಮೂರನೇ ಸ್ಥಾನದಲ್ಲಿದೆ. ಯುರೋಪ್‌ನಲ್ಲಿ ಅತಿ ಹೆಚ್ಚು ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟ ಎರಡನೇ ದೇಶ ಇಟಲಿಯಾಗಿದ್ದು, 35,514 ಮಂದಿ ಸಾವಿಗೀಡಾಗಿದ್ದಾರೆ. ಇಟಲಿಯ ಬಳಿಕದ ಸ್ಥಾನವನ್ನು ಫ್ರಾನ್ಸ್‌ ಪಡೆದಿದ್ದು, 27,136 ಮಂದಿ ಮೃತಪಟ್ಟಿದ್ದಾರೆ. ಸ್ಪೇನ್‌ನಲ್ಲಿ 27,136 ಮಂದಿ ಸಾವಿಗೀಡಾಗಿದ್ದರೆ, ಉತ್ತರ ಅಮೆರಿಕದ ದೇಶವಾದ ಮೆಕ್ಸಿಕೋದಲ್ಲಿ 19,747 ಮಂದಿ ಮೃತಪಟ್ಟಿದ್ದಾರೆ. ಇನ್ನು ಕೆನಡಾದಲ್ಲಿ 8,300 ಮಂದಿ ಮೃತಪಟ್ಟಿದ್ದಾರೆ.

ಸಾವಿನ ಪ್ರಮಾಣ ಮುಂದುವರಿದ ದೇಶಗಳಲ್ಲೇ ಹೆಚ್ಚೇಕೆ?
ಮುಂದುವರಿದ ದೇಶಗಳಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿದ್ದು, ಇದು ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಅತ್ಯುತ್ತಮ ವೈದ್ಯಕೀಯ ವ್ಯವಸ್ಥೆಯಿದ್ದರೂ ಹೀಗೇಕೆ ಎಂಬ ಪ್ರಶ್ನೆಳಿಗಳಿವೆ. ಇದಕ್ಕೆ ಕೆಲವು ಪರಿಣತರು ಉತ್ತರಗಳನ್ನೂ ನೀಡುತ್ತಾರೆ. ಒಂದು ಸಾಮಾನ್ಯ ಉತ್ತರ ಎಂದರೆ ಅವಗಣನೆ. ಚೀನದಲ್ಲಿ ಸೋಂಕು ಹುಟ್ಟಿ ಅದು ಹರಡುತ್ತಿದ್ದಂತೆ ವಿವಿಧ ದೇಶಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಯೇ ಇರಲಿಲ್ಲ. ಇನ್ನು ಮುಂದುವರಿದ ದೇಶಗಳಲ್ಲಿ ಜನರ ಓಡಾಟ, ವಿಮಾನ ಯಾನ ಇತ್ಯಾದಿಗಳು ಹೆಚ್ಚಿದ್ದು ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಯಿತು. ಜತೆಗೆ ಜನತೆಗೆ ಮುಕ್ತ ಸ್ವಾತಂತ್ರ್ಯವಿದ್ದು, ಅವರು ಓಡಾಟವನ್ನು ಕಡಿಮೆ ಮಾಡಲಿಲ್ಲ. ಇನ್ನು ವೈದ್ಯಕೀಯ ವಿಚಾರದಲ್ಲಿ ವ್ಯವಸ್ಥೆ ಸಾಕಷ್ಟು ಮುಂದುವರಿದಿದ್ದೂ, ಇಂತಹ ಸಾಂಕ್ರಾಮಿಕ ಕಾಯಿಲೆಗಳು ಬಂದಾಗ ಅವುಗಳನ್ನು ನಿಯಂತ್ರಿಸುವ ಸುರಕ್ಷಾ ಕ್ರಮಗಳು, ಅವುಗಳಿಗೆ ಬೇಕಾದ ಪಿಪಿಇ ಕಿಟ್‌, ಗ್ಲೌಸ್‌ ಇತ್ಯಾದಿಗಳನ್ನು ಸಾಕಷ್ಟು ಪೇರಿಸಿ ಇಟ್ಟಿರಲಿಲ್ಲ. ಪರಿಸ್ಥಿತಿ ಗಂಭೀರಕ್ಕೆ ಹೋಗುತ್ತದೆ ಎಂದು ಗೊತ್ತಾದಾಗ, ಅದು ಸರಕಾರಗಳ ಕೈಯಿಂದ ಜಾರಿ ಹೋಗಿತ್ತು ಎಂದು ಸಾಂಕ್ರಾಮಿಕ ಕಾಯಿಲೆಗಳ ತಜ್ಞರು ಹೇಳುತ್ತಾರೆ.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.