ತೆಕ್ಕಟ್ಟೆ : ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಪತ್ನಿ ಮತ್ತು ಮಗಳಿಗೂ ಸೋಂಕು ದೃಢ
ಮಣೂರು -ಕೊರವಡಿ ಸೇರಿ ಒಟ್ಟು ನಾಲ್ಕು ಮನೆಗಳು ಸೀಲ್ ಡೌನ್
Team Udayavani, Jun 20, 2020, 5:56 PM IST
ತೆಕ್ಕಟ್ಟೆ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಮುಂಬಯಿನಿಂದ ಬಂದು ತೆಕ್ಕಟ್ಟೆ ಗೆ ಆಗಮಿಸಿದ ದಿನದಂದೇ ಮೃತಪಟ್ಟಿದ್ದು, ಮೃತ ವ್ಯಕ್ತಿಗೆ ಕೋವಿಡ್ ಇರುವ ದೃಢಪಟ್ಟ ಬೆನ್ನಲ್ಲಿಯೇ ಅವರ ಜತೆಯಲ್ಲಿದ್ದ ಹಾಗೂ ಅವರ ಪತ್ನಿ ಹಾಗೂ ಮಗಳು ಸಹಿತ ಕೋವಿಡ್ ಇರುವ ದೃಢಪಟ್ಟ ಹಿನ್ನೆಲೆಯಲ್ಲಿ ಜೂ.20 ರಂದು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಮಣೂರು -ಕೊರವಡಿಯ ನಾಲ್ಕು ಮನೆ ಸೀಲ್ ಡೌನ್ : ಮೃತ ವ್ಯಕ್ತಿಯ ಅಂತಿಮ ದರ್ಶನಕ್ಕಾಗಿ ಆಗಮಿಸಿದ ಅವರ ಕುಟುಂಬ ಸದಸ್ಯರು ಹಾಗೂ ಪ್ರಾಥಮಿಕ ಸಂಪರ್ಕ ಹೊಂದಿರುವ ವ್ಯಕ್ತಿಗಳ ಬಗ್ಗೆ ಆರೋಗ್ಯ ಇಲಾಖೆ ಹಾಗೂ ಕೋಟ ಮತ್ತು ಕುಂದಾಪುರದ ಪೊಲೀಸ್ ಸಿಬಂದಿಗಳು ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣೂರಿನ ಅರೆಕೆರೆ ಮನೆ ಸಮೀಪದ ಮೂರು ಮನೆ ಹಾಗೂ ಕುಂಭಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರವಡಿಯಲ್ಲಿನ ಒಂದು ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಕುಂಭಾಸಿ ಗ್ರಾಮ ಪಂಚಾಯತ್ ಪಿಡಿಒ ಜಯರಾಮ ಶೆಟ್ಟಿ, ಕುಂದಾಪುರ ಪೊಲೀಸ್ ಸಿಬಂದಿ ಆನಂದ, ಆಶಾಕಾರ್ಯಕರ್ತೆ ಉಷಾ ಮತ್ತಿತರರು ಉಪಸ್ಥಿತರಿದ್ದರು.
ಸ್ಥಳೀಯರಿಂದ ತೀವ್ರಗೊಂಡ ಆಕ್ರೋಶ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಮುಂಬಯಿನಿಂದ ಬಂದು ತೆಕ್ಕಟ್ಟೆ ತನ್ನ ನಿವಾಸದಲ್ಲಿ ಮೃತಪಟ್ಟಿದ್ದು ಅವರ ಮೃತ ದೇಹವನ್ನು ಒಂದು ದಿನಗಳ ಕಾಲ ಮನೆಯ ಒಳಗೆ ಇರಿಸಲಾಗಿದೆ ಹಾಗೂ ಮುಂಬಯಿನಿಂದ ಗ್ರಾಮಕ್ಕೆ ಆಗಮಿಸುವಾಗ ಸುಳ್ಳು ಮಾಹಿತಿ ನೀಡಿದ ಪರಿಣಾಮ ಇಂದು ಇಡೀ ಗ್ರಾಮದ ಜನತೆಯಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಪರಿಸರದ ಹಲವು ಮಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೂ.20 ರಂದು ಕೋವಿಡ್ ಸೋಂಕಿತ ಪತ್ನಿ ಹಾಗೂ ಮಗಳನ್ನು ಉಡುಪಿಯ ಕೋವಿಡ್ ಸೆಂಟರ್ಗೆ ಕರೆದೊಯ್ಯುವ ಸಂದರ್ಭದಲ್ಲಿ ಅವರ ಜತೆಗೆ ಮುಂಬಯಿನಿಂದ ಆಗಮಿಸಿದ ಒರ್ವ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆಯ ವರದಿ ನೆಗೆಟಿವ್ ಬಂದಿರುವ ಹಿನ್ನೆಲೆಯಲ್ಲಿ ಇಲಾಖೆ ಅವರನ್ನು ತೆಕ್ಕಟ್ಟೆಯ ಅವರ ನಿವಾಸದಲ್ಲಿಯೇ ಹೋಂ ಕ್ವಾರಂಟೈನ್ನಲ್ಲಿ ಇರಿಸಿದರಿಂದ ಅಸಮಾಧಾನದ ಪರಿಸರದ ಮಂದಿ ಮುಂಬಯಿನ ಆ ವ್ಯಕ್ತಿಯನ್ನು ಹೋಂ ಕ್ವಾರಂಟೈನ್ನಲ್ಲಿ ಇರಿಸುವ ಬದಲು ಬೇರೆಡೆಗೆ ಕರೆದೊಯ್ಯುವಂತೆ ಆಗ್ರಹಿಸಿದಾಗ ಕೋವಿಡ್ ವಾರಿಯರ್ಸ್ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಾಮಕಿ ನಡೆದ ಘಟನೆ ಕೂಡಾ ನಡೆಯಿತು.
ವರದಿ: ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!