ಬೀದರ್‌ನಲ್ಲಿ ನಿಲ್ಲದ ಕೋವಿಡ್‌-19 ಸೋಂಕಿನ ಸಾವಿನ ಸರಣಿ

ಇಂದು ಮತ್ತಿಬ್ಬರ ಸಾವು 5 ದಿನದಲ್ಲಿ 7 ಜನರು ಮೃತ ಒಂದೇ 73 ಪಾಸಿಟಿವ್ ಕೇಸ್

Team Udayavani, Jun 20, 2020, 8:21 PM IST

ಬೀದರ್‌ನಲ್ಲಿ ನಿಲ್ಲದ ಕೋವಿಡ್‌-19 ಸೋಂಕಿನ ಸಾವಿನ ಸರಣಿ

ಬೀದರ್‌ : ಜಿಲ್ಲೆಯಲ್ಲಿ ರಕ್ಕಸ ಕೋವಿಡ್‌-19 ಅಟ್ಟಹಾಸದಿಂದ ಸಾವಿನ ಸರಣಿ ಮುಂದುವರೆದಿದ್ದು, ಶನಿವಾರ ಮತ್ತಿಬ್ಬರು ಸೋಂಕಿತರನ್ನು ಬಲಿ ಪಡೆದಿದೆ. ಐದು ದಿನದಲ್ಲಿ 7 ಜನರ ಸಾವು ಸಂಭವಿಸಿದೆ. ಇನ್ನೊಂದೆಡೆ ಒಂದೇ ದಿನ ಹೊಸ 73 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 500ರ ಗಡಿಗೆ ತಲುಪಿದೆ.

ಮಂಗಳವಾರದಿಂದ ಸತತ ಐದು ದಿನಗಳಿಂದ ಮರಣ ಮೃದಂಗ ಬಾರಿಸಿರುವ ಕೋವಿಡ್‌-19 ನಿನ್ನೆಯಷ್ಟೇ ಇಬ್ಬರನ್ನು ಬಲಿ ಪಡೆದಿತ್ತು. ಮತ್ತೆ ಶನಿವಾರ ಮತ್ತಿಬ್ಬರ ಜೀವ ಕಳೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೋವಿಡ್-19ಕ್ಕೆ ಸಾವನ್ನಪ್ಪಿರುವ ಸಂಖ್ಯೆ ಈಗ 13ಕ್ಕೆ ಏರಿಕೆ ಆಗಿದ್ದು, ಮರಣ ಪ್ರಮಾಣದಲ್ಲಿ ರಾಜ್ಯದಲ್ಲಿ ಬೀದರ ಎರಡನೇ ಸ್ಥಾನಕ್ಕೆ ತಲುಪಿದ್ದು, ಜಿಲ್ಲೆಯಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.

ಕಲ್ಬುರ್ಗಿ ಬಸವೇಶ್ವರ ನಗರದ 51ವರ್ಷದ ಮಹಿಳೆ (ಪಿ 8423) ಜ್ವರ, ಉಸಿರಾಟದ ತೊಂದರೆ ಹಿನ್ನಲೆ ಜೂ. 15ಕ್ಕೆ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಿಸದೇ ಜೂ. 19ಕ್ಕೆ ಸಾವನ್ನಪ್ಪಿದ್ದಾರೆ. ಬೀದರ ತಾಲೂಕಿನ ಬಗದಲ್ ಗ್ರಾಮದ 65ವರ್ಷದ ವ್ಯಕ್ತಿ ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಜೂ. 15ಕ್ಕೆ ಆಸ್ಪತ್ರೆಗೆ ದಾಖಲಾಗಿ ಅದೇ ದಿನ ಮೃತಪಟ್ಟಿದ್ದಾರೆ. ಇಬ್ಬರಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿರುವ ಬಗ್ಗೆ ಆರೋಗ್ಯ ಇಲಾಖೆ ದೃಢಪಡಿಸಿದೆ.

ಇನ್ನೂ ಬೀದರ್ ಜಿಲ್ಲೆಯಲ್ಲಿ ಶನಿವಾರ ಅತಿ ಹೆಚ್ಚು 73 ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಕೋವಿಡ್-19 ಆರ್ಭಟಿಸಿದ್ದು, ಬೀದರ ತಾಲೂಕಿನಲ್ಲಿ ಹೆಚ್ಚು ಸೋಂಕು ಕೇಸ್‌ಗಳು ಒಕ್ಕರಿಸಿವೆ. ಇತ್ತಿಚೆಗೆ ಮೃತಪಟ್ಟಿರುವ ಅಂಬೇಡ್ಕರ ವೃತ್ತ ಬಳಿ ನಿವಾಸಿ (ಪಿ 7524)ಯ ಕುಟುಂಬದ 14 ಜನರಿಗೆ ವೈರಾಣಿ ತಗುಲಿದ್ದು, ಮುಖ್ಯ ಮಾರುಕಟ್ಟೆ ಕೇಂದ್ರವಾಗಿರು ವುದರಿಂದ ಈ ಪ್ರದೇಶದಲ್ಲಿ ವೈರಸ್‌ನ ಭೀತಿ ಆವರಿಸಿದೆ.

ಬೀದರ್ ನಗರದ ಅಂಬೇಡ್ಕರ ವೃತ್ತ ಪ್ರದೇಶ 16, ಸಿಎಂಸಿ ಕಾಲೋನಿ ಮತ್ತು ಮೈಲೂರ ಕಾಲೋನಿಯ ತಲಾ 3, ವಡ್ಡರ್ ಕಾಲೋನಿ, ಕೆಎಚ್‌ಬಿ ಕಾಲೋನಿ (ಪ್ರತಾಪ ನಗರ) ತಲಾ 2, ನಂದಿ ಕಾಲೋನಿ 1 ಮತ್ತು ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ 2 ಸೇರಿ ಒಟ್ಟು 32 ಕೇಸ್‌ಗಳು ಪತ್ತೆಯಾಗಿದ್ದರೆ, ಚಿಟಗುಪ್ಪ ಪಟ್ಟಣ ಒಂದರಲ್ಲೇ 28 ಪಾಸಿಟಿವ್ ವರದಿಯಾಗಿವೆ. ಹುಮನಾಬಾದ ತಾಲೂಕಿನ ಜನತಾ ನಗರ 4, ಘೋಷಡವಾಡಿ 3 ಮತ್ತು ಘಾಟಬೋರಾಳದಲ್ಲಿ 1 ಕೇಸ್ ಸೇರಿ ಒಟ್ಟು 8 ಪ್ರಕರಣಗಳು, ಬಸವಕಲ್ಯಾಣ ತಾಲೂಕಿನ ಹತ್ಯಾಳ್, ಘೋಡವಾಡಿ ಮತ್ತು ಗುಣತೀರ್ಥವಾಡಿ ಗ್ರಾಮದಲ್ಲಿ ತಲಾ 1 ಸೇರಿ ಒಟ್ಟು 3 ಕೇಸ್‌ಗಳು ವರದಿಯಾಗಿವೆ.

ಜಿಲ್ಲೆಯಲ್ಲಿ ಈವರೆಗೆ 484 ಪಾಸಿಟಿವ್ ಪ್ರಕರಣಗಳು ಆದಂತಾಗಿದ್ದು, ಶನಿವಾರ 12 ಜನ ಸೇರಿ ಒಟ್ಟು 266 ರೋಗಿಗಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 205 ಸಕ್ರೀಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.