ಕೋವಿಡ್‌ 19 ಸಂಪರ್ಕಿತರ ಪತ್ತೆಗೆ ಸಿಕ್ಕಿತು ರಾಷ್ಟ್ರ ಮನ್ನಣೆ


Team Udayavani, Jun 21, 2020, 6:06 AM IST

corona-samparkitaru

ಬೆಂಗಳೂರು: ಕೋವಿಡ್‌ 19 ಸೋಂಕಿತರ ಸಂಪರ್ಕಕ್ಕೆ ಬಂದವರನ್ನು 24 ಗಂಟೆಯಲ್ಲಿ ಪತ್ತೆ ಹಚ್ಚಿ ಕೋವಿಡ್‌ 19 ಹರಡುವಿಕೆ ವೇಗ ನಿಯಂತ್ರಿಸುವಲ್ಲಿ ಶ್ರಮಿಸಿದ ರಾಜ್ಯದ ಕೋವಿಡ್‌ 19 ವಾರ್‌ ರೂಂ ತಂಡದ ಕಾರ್ಯಕ್ಕೆ ಮೆಚ್ಚುಗೆ  ವ್ಯಕ್ತವಾಗಿದೆ. ಹಿರಿಯ ಐಎಎಸ್‌ ಅಧಿಕಾರಿ ಮೌನೀಶ್‌ ಮೌದ್ಗಿಲ್‌ ನೇತೃತ್ವದಲ್ಲಿ 5 ಜನ ತಂತ್ರಜ್ಞರ ತಂಡ ಯಾವುದೇ ಖಾಸಗಿ ಐಟಿ ಸಂಸ್ಥೆ ಮೊರೆ ಹೋಗದೆ ಕೋವಿಡ್‌ 19 ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚಲು ಕಾಂಟ್ಯಾಕ್ಟ್ ಟ್ರೇಸಿಂಗ್‌ ಆ್ಯಪ್‌ ಅಭಿವೃದ್ಧಿ ಪಡಿಸಿ ಅದರ ಮೂಲಕ ಕೋವಿಡ್‌ 19 ಪಾಸಿಟಿವ್‌ ರೋಗಿಗಳ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳನ್ನು 24 ಗಂಟೆಯಲ್ಲಿ ಪತ್ತೆ ಹಚ್ಚುವ ಕೆಲಸ ಮಾಡಿದ್ದಾರೆ.

ಹೇಗೆ ಪತ್ತೆ?: ಕೋವಿಡ್‌ 19 ಸೋಂಕಿತ ವ್ಯಕ್ತಿಯಿಂದ ತಾನು ಕಳೆದ 48 ಗಂಟೆ  ಗಳಲ್ಲಿ ಯಾರೊಂದಿಗೆ ಹತ್ತಿರದಿಂದ ಮಾತನಾಡಿರುವುದು, ಒಂದು ಮೀಟರ್‌ ಅಂತರದಲ್ಲಿ ಭೇಟಿಯಾಗಿ ಮಾತನಾಡಿರುವುದು, ಕನಿಷ್ಠ 15 ನಿಮಿಷ  ಒಬ್ಬರ  ಜೊತೆಯಲ್ಲಿ ನಿಂತಿರುವುದು, ಕುಟುಂಬ ಸದಸ್ಯರ ಜೊತೆ ಕಾಲ ಕಳೆದಿರುವ ಹಾಗೂ ಮುಖಕ್ಕೆ ಮುಖ ಕೊಟ್ಟು ಮಾತನಾಡಿರುವ ಬಗ್ಗೆ ಮಾಹಿತಿ ಪಡೆದು ಅವರು ಹೇಳುವ ಮಾಹಿತಿಯನ್ನು ಕಾಂಟ್ಯಾಕ್ಟ್ ಟ್ರೇಸಿಂಗ್‌ ಆಪ್‌ನಲ್ಲಿ ಅಪ್‌ ಲೋಡ್‌ ಮಾಡಿ, ಸಂಪರ್ಕಿತರು ಎಲ್ಲಿಯೇ ಇದ್ದರೂ 24 ಗಂಟೆಯಲ್ಲಿ ಪತ್ತೆ ಹಚ್ಚಲಾಗುತ್ತಿದೆ.

ಇದಕ್ಕಾಗಿ ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಪೌರಾಡಳಿತ, ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆ ಸಿಬ್ಬಂದಿ ಸೇರಿ ಸುಮಾರು 10 ಸಾವಿರ ಕಾರ್ಯ  ಕರ್ತರು ಕಾಂಟ್ಯಾಕ್ಟ್ ಟ್ರೇಸರ್‌ ಗಳಾಗಿ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ತಂಡ ರಾಜ್ಯದ 1.05 ಕೋಟಿ ಕುಟುಂಬಗಳನ್ನು ಈ ಆ್ಯಪ್‌ ಮೂಲಕ ಸಂಪರ್ಕಿಸಿ ಸುಮಾರು 1  ಲಕ್ಷಕ್ಕೂ ಹೆಚ್ಚು ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಿದ್ದಾರೆ. ಈ ವ್ಯವಸ್ಥೆಯನ್ನು ದೇಶದಲ್ಲೆಡೆ ಅಳವಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರವೇ ಇತರ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಕೋವಿಡ್‌ 19 ಸೋಂಕಿತರಿಂದ ಮಾಹಿತಿ ಪಡೆದು ಕಾಂಟ್ಯಾಕ್ಟ್ ಟ್ರೇಸರ್‌ ಆ್ಯಪ್‌ ಮೂಲಕ ಸಂಪರ್ಕಿತರನ್ನು 24 ಗಂಟೆಯಲ್ಲಿ ಪತ್ತೆ ಹಚ್ಚಲಾಗುತ್ತಿದೆ. ದೇಶದ ಯಾವ ರಾಜ್ಯದಲ್ಲಿಯೂ ಈ ವ್ಯವಸ್ಥೆ ಜಾರಿಯಲ್ಲಿ ಇಲ್ಲ. ಇದು ನಮಗೆ  ರೋಗಿಗಳ ಸಂಪರ್ಕಿತರನ್ನು ವೇಗವಾಗಿ ಪತ್ತೆ ಹಚ್ಚಲು ಸಹಾಯವಾಗಿದೆ.
-ಮೌನಿಷ್‌ ಮೌದ್ಗಿಲ್‌, ಕೋವಿಡ್‌ 19 ವಾರ್‌ ರೂಂ ಮುಖ್ಯಸ್ಥ

ಕೋವಿಡ್‌ 19 ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಇದು ರಾಜ್ಯ ಸರ್ಕಾರ ಕೋವಿಡ್‌ 19 ನಿಯಂತ್ರಿಸಲು ತಂತ್ರಜ್ಞಾನ ಬಳಸಿಕೊಂಡು ಜಾರಿಗೊಳಿಸಿದ ನೀತಿ ಹಾಗೂ ಉತ್ತಮ  ಆಡಳಿತ ಪರಿಣಾಮ. ರಾಜ್ಯದ ಕೋವಿಡ್‌ 19 ವಾರಿಯರ್ಸ್‌ ತಂಡಕ್ಕೆ ಅಭಿನಂದನೆಗಳು.
-ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

* ಶಂಕರ ಪಾಗೋಜಿ

ಟಾಪ್ ನ್ಯೂಸ್

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.