ಬಾಕಿ ವೇತನಕ್ಕೆ ಗ್ರಾಪಂ ನೌಕರರ ಆಗ್ರಹ
Team Udayavani, Jun 21, 2020, 6:40 AM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಗ್ರಾಪಂ ನೌಕರರಿಗೆ ಬಾಕಿ ಇರುವ ವೇತನವನ್ನು ಕೂಡಲೇ ಪಾವತಿ ಮಾಡಿ ಜೊತೆಗೆ ಪ್ರತಿ ತಿಂಗಳು ನಿಗದಿಪಡಿಸಿ ತುಟ್ಟಿ ಭತ್ಯೆಯೊಂದಿಗೆ ಇಎಫ್ ಎಂಎಸ್ ಮುಖಾಂತರ ನೀಡುವಂತೆ ಒತ್ತಾಯಿಸಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶನಿವಾರ ಜಿಲ್ಲೆಯ ಗ್ರಾಪಂ ನೌಕರರು ಜಿಪಂ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಎದುರು ಧರಣಿ ನಡೆಸಿದ ಜಿಲ್ಲೆಯ ಗ್ರಾಪಂ ನೌಕರರ ಸಂಘ (ಸಿಐಟಿಯು) ಸದಸ್ಯರು ಕೊರೊನಾ ಸಂಕಷ್ಟದಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಸಮರ್ಪಕವಾಗಿ ವೇತನ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಬಾಕಿ ವೇತನ ಶೀಘ್ರ ವಿತರಿಸ ಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದರು. ನಿವೃತ್ತಿ ಹಾಗೂ ಮರಣ ಹೊಂದಿದ ನೌಕರರಿಗೆ ಬಾಕಿ ಇರುವ ಉಪಧನ ನೀಡಬೇಕು,
ಗ್ರಾಪಂ ನೌಕರರ ವೇತ ನಕ್ಕೆ 14, 15ನೇ ಹಣಕಾಸು ಯೋಜನೆಯ ಶೇ.10 ರಷ್ಟು ಹಾಗೂ ಕರವಸೂಲಿಯ ಶೇ.40 ರಷ್ಟು ಹಣ ಮೀಸಲಿಡ ಬೇಕೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಗ್ರಾಪಂ ನೌಕ ರರ ಸಂಘ ಜಿಲ್ಲಾಧ್ಯಕ್ಷ ಜಿ.ಸಿದ್ದಗಂಗಪ್ಪ ಆಗ್ರಹಿಸಿದರು. 2009 ರಿಂದ ಕರವಸೂಲಿ ಹಾಗೂ ಗುಮಾಸ್ತರಿಗೆ ಗ್ರೇಡ್-2 ಕಾರ್ಯದರ್ಶಿ ಹುದ್ದೆಗೆ ಭರ್ತಿ ನೀಡಬೇಕು, ಈಗಾಗಲೇ ಗುರುತಿಸಲಾಗಿರುವ ಜಿಲ್ಲೆಯ 61 ಗ್ರಾಪಂ ಗಳನ್ನು ಗ್ರೇಡ್-1 ಗ್ರಾಪಂಗಳಾಗಿ ಮೇಲ್ದಜೇìಗೇರಿಸ ಬೇಕೆಂದು ಆಗ್ರಹಿಸಿದರು.
ಸಮಸ್ಯೆಗೆ ಸ್ಪಂದಿಸುವ ಭರವಸೆ: ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್, ಮನವಿ ಪತ್ರ ಸ್ವೀಕರಿಸಿ ತಮ್ಮ ಹಂತದಲ್ಲಿ ಬಗೆಹರಿ ಯುವ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಕಾಯಾ ಧ್ಯಕ್ಷ ಮುನಿಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್, ಸುದರ್ಶನ್, ಗೋವಿಂದರೆಡ್ಡಿ, ಆಂಜ ನೇಯರೆಡ್ಡಿ, ನಾರಾಯಣಸ್ವಾಮಿ, ರಾಮಾಂಜಿ, ಕೃಷ್ಣಪ್ಪ ಸೇರಿದಂತೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು