ಕೋಲಾರ: ಕೋವಿಡ್‌ 19 ಸೋಂಕಿತರ ಸಂಖ್ಯೆ 56ಕ್ಕೆ ಏರಿಕೆ


Team Udayavani, Jun 21, 2020, 7:19 AM IST

akka-tamma

ಕೋಲಾರ: ಜಿಲ್ಲೆಯಲ್ಲಿ ಶನಿವಾರ ನಾಲ್ಕು ಕೋವಿಡ್‌ 19 ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 56 ತಲುಪಿದೆ. ಮೂವರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 32 ಆಗಿದೆ. ಕೋಲಾರ ತಾಲೂಕಿನ  ಪಿ.4863, ಪಿ.6170 ಮತ್ತು ಬಂಗಾರ ಪೇಟೆಯ ಪಿ.6175 ರೋಗಿಗಳು ಕೋವಿಡ್‌ 19ದಿಂದ ಗುಣಮುಖರಾಗಿ ಕೋವಿಡ್‌ ಆಸ್ಪತ್ರೆಯಿಂದ ಮನೆಯಲ್ಲಿ ಕ್ವಾರಂಟೈನ್‌ಗೆ ಬಿಡುಗಡೆ ಹೊಂದಿದ್ದಾರೆ.

ದೆಹಲಿಯಿಂದ ಕೆಜಿಎಫ್ಗೆ ಆಗಮಿಸಿರುವ 43  ವರ್ಷದ ಮಹಿಳೆಗೆ ಸೋಂಕು ಕಂಡು ಬಂದಿದ್ದು, ಆರ್‌.ಎಲ್‌.ಜಾಲಪ್ಪ ಕೋವಿಡ್‌-19 ಆಸ್ಪತ್ರೆಗೆ ಸೇರಿ ಸಲಾಗಿದೆ. ಕೋಲಾರದಲ್ಲಿ ಪಿ.8060 ಸಂಪರ್ಕ ದಿಂದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಯಲ್ಲಿಯೇ 27 ಮತ್ತು 29ವರ್ಷದ ಪುರುಷರು  ಹಾಗೂ 26 ವರ್ಷದ ಯುವತಿಗೆ ಕೋವಿಡ್‌ 19 ಸೋಂಕು ಪತ್ತೆ ಯಾಗಿದೆ. ಶನಿವಾರ ಸಂಜೆ ಬಿಡುಗಡೆಯಾದ ಆರೋಗ್ಯ ಬುಲೆಟಿನ್‌ನಲ್ಲಿ ಕೋಲಾರ ಜಿಲ್ಲೆಯ ಸೋಂಕಿತರ ಸಂಖ್ಯೆ 56 ಆಗಿದ್ದು, ಇದರ ಜೊತೆಗೆ ಕೋಲಾರ ಗಲ್‌ಪೇಟೆಯ 31  ವರ್ಷದ ಪುರುಷರಿಗೆ ಕೋವಿಡ್‌ 19 ಪತ್ತೆಯಾಗಿದೆ.

ಇದೇ ರೀತಿ ಬಂಗಾರಪೇಟೆ ಪಟ್ಟಣಕ್ಕೆ ಬೆಂಗಳೂರಿನಿಂದ ಬಂದಿರುವ 19 ವರ್ಷದ ಯುವಕ ಹಾಗೂ 26 ವರ್ಷದ ಯುವತಿಯಲ್ಲಿ ಕೋವಿಡ್‌ 19 ಪತ್ತೆಯಾಗಿದೆ. ಈ ಮೂವರು  ಸೇರಿದಂತೆ  ಜಿಲ್ಲೆಯ ಸೋಂಕಿತರ ಪಟ್ಟಿ 59ಕ್ಕೇರಿದಂತಾಗಿದ್ದು, ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ. ಈ ಪಟ್ಟಿಗೆ ಮತ್ತಷ್ಟು ಸೋಂಕಿತರು ಸೇರುವ ಸಾಧ್ಯತೆಗಳಿದ್ದು, ಭಾನುವಾರದ ವೇಳೆಗೆ ಸೋಂಕಿತರ ಸಂಖ್ಯೆ 60 ದಾಟುವ ಸಾಧ್ಯತೆಗಳಿವೆ.

ಅಕ್ಕ-ತಮ್ಮನಿಗೆ ಕೋವಿಡ್‌ 19 ಪಾಸಿಟಿವ್‌
ಬಂಗಾರಪೇಟೆ: ಬೆಂಗಳೂರಿನ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಯುವಕ, ಯುವತಿಯಲ್ಲಿ ಕೋವಿಡ್‌ 19 ಪಾಸಿಟಿವ್‌ ಬಂದಿದ್ದು, ಪಟ್ಟಣದಲ್ಲಿ ಸದ್ಯಕ್ಕೆ ನಾಲ್ಕು ಕೇಸುಗಳು ಸಕ್ರಿಯವಾದಂತಾಗಿದೆ. ಪಟ್ಟಣದ  ವಿವೇಕಾನಂದರ ನಗರದಲ್ಲಿ ಮೂರು ವಾರಗಳ ಹಿಂದೆ ಮಲೇಷ್ಯಾದಿಂದ ಬಂದ ವ್ಯಕ್ತಿಯೊಬ್ಬ ರಿಗೆ ಕೋವಿಡ್‌ 19 ಪಾಸಿ ಟಿವ್‌ ಬಂದಿತ್ತು. ಹೀಗಾಗಿ ನಗರವನ್ನು ಸೀಲ್‌ ಡೌನ್‌ ಮಾಡಲಾಗಿತ್ತು.

ಈ ವ್ಯಕ್ತಿಯ ಪರೀಕ್ಷಾ ವರದಿಯು ಪ್ರಸ್ತುತ  ನೆಗೆಟಿವ್‌ ಬಂದಿರುವು ದರಿಂದ ಶನಿವಾರ ಬೆಳಗ್ಗೆ ತಾಲೂಕು ಆಡಳಿತವು ಆ ಪ್ರದೇಶವನ್ನು ಮುಕ್ತ ಮಾಡಿತ್ತು. ಇದರ ಬೆನ್ನಲ್ಲೆ ಸಂಜೆ ಮತ್ತೆರೆಡು ಕೋವಿಡ್‌ 19 ಪಾಸಿಟಿವ್‌ ಇದೇ ವಾರ್ಡ್‌ನಲ್ಲಿ ಬಂದಿರುವುದರಿಂದ ಮತ್ತೆ ಸೀಲ್‌ಡೌನ್‌ ಮಾಡಲಾಗಿದೆ. ವಿವೇಕಾನಂದನಗರದ ಬಾಲಾಜಿಸಿಂಗ್‌ ಲೇಔಟ್‌ನಲ್ಲಿ ವಾಸವಾಗಿ ರುವ 25 ವರ್ಷ ಯುವತಿ ಹಾಗೂ ಈಕೆಯ ತಮ್ಮ 22 ವರ್ಷದ ಯುವಕನಿಗೆ ಸೋಂಕು ಬಂದಿದೆ.

ಬೆಂಗಳೂರಿನ ಯಲ ಹಂಕದಲ್ಲಿ ವಾಸವಾಗಿ ರುವ ತಮ್ಮ  ದೊಡ್ಡ ಪ್ಪನ ಮಗ ಎಲ್‌ಐಸಿ ಏಜೆಂಟ್‌ ಆಗಿರುವ 30 ವರ್ಷದ ಯುವಕನಿಗೆ ಶುಕ್ರವಾರ ಬೆಳಗ್ಗೆ ಕೋವಿಡ್‌ 19 ಪಾಸಿಟಿವ್‌ ಬಂದಿತ್ತು. ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆಯು ಅಕ್ಕ, ತಮ್ಮನನ್ನು ಪತ್ತೆಹಚ್ಚಿ ಕೋವಿಡ್‌ 19 ಪರೀಕ್ಷೆಗೆ ಒಳಪಡಿಸಿತ್ತು. ವರದಿಯಲ್ಲಿ ಕೋವಿಡ್‌ 19 ಪಾಸಿಟಿವ್‌ ದೃಢಪಟ್ಟಿದೆ.

ಶುಕ್ರವಾರದಿಂದ ಹೋಮ್‌ ಕ್ವಾರಂಟೈನ್‌ ನಲ್ಲಿದ್ದ ಇವರಿಬ್ಬರನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಕೋಲಾರದ ಎಸ್‌ಎನ್‌ಆರ್‌ ಆಸ್ಪತ್ರೆಗೆ ಸಾಗಿಸಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್‌ ಕೆ.ಬಿ.ಚಂದ್ರಮೌಳೇಶ್ವರ್‌, ತಾಲೂಕು ಆರೋಗ್ಯಾಧಿಕಾರಿ ಡಾ. ಸುನೀಲ್‌, ಆರೋಗ್ಯ ನಿರೀಕ್ಷಕ ಆರ್‌. ರವಿ, ಆದರ್ಶ, ಪುರಸಭೆ ಮುಖ್ಯಾಧಿಕಾರಿ ವಿ.ಶ್ರೀಧರ್‌, ಆರೋಗ್ಯಾಧಿಕಾರಿ ಗೋವಿಂದರಾಜ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.