ಕೋವಿಡ್ ಭೀತಿ ಹಿನ್ನಲೆ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದುಪಡಿಸಿದ ಆಂಧ್ರ ಸರ್ಕಾರ
Team Udayavani, Jun 21, 2020, 8:53 AM IST
ಆಂಧ್ರಪ್ರದೇಶ: ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿದೆ.
ಆಂಧ್ರಪ್ರದೇಶದ ಜಗನ್ ಮೋಹನ್ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚುತ್ತಿರುವ ಕಾರಣ ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಈ ಬಾರಿಯ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು ಎಂದಿದೆ.
ಮಾರ್ಚ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಕೋವಿಡ್ ಕಾರಣದಿಂದ ಮುಂದೂಡಲ್ಪಟ್ಟಿದ್ದವು. ತೆಲಂಗಾಣ, ತಮಿಳುನಾಡು ರಾಜ್ಯಗಳು ಪರೀಕ್ಷೆಯನ್ನು ರದ್ದುಗೊಳಿಸಿದ್ದವು, ಸದ್ಯ ಆಂಧ್ರಪ್ರದೇಶ ರಾಜ್ಯವೂ ಇದೇ ನಿರ್ಧಾರ ಕೈಗೊಂಡಿದೆ.
ಕರ್ನಾಟಕದಲ್ಲಿ ಮುಂದೂಡಿಕೆಯಾಗಿದ್ದ ಪರೀಕ್ಷೆಗಳು ಜೂನ್ 25ರಿಂದ ನಡೆಯಲಿದೆ. ಸುರಕ್ಷಿತವಾಗಿ ಪರೀಕ್ಷೆ ನಡೆಸಲು ಕರ್ನಾಟಕ ಸರಕಾರ ಯೋಜನೆ ರೂಪಿಸಿದೆ. ಬಾಕಿ ಉಳಿದಿದ್ದ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ಯಶಸ್ವಿಯಾಗಿ ನಡೆಸಲಾಗಿದೆ.
ಆಂಧ್ರ ಪ್ರದೇಶದಲ್ಲಿ ಈವರೆಗೆ ಒಟ್ಟು 7961 ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಘಿದ್ದು, 96 ಜನ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
MUST WATCH
ಹೊಸ ಸೇರ್ಪಡೆ
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ