ಕಾಫಿ ನಾಡಲ್ಲಿ ಹೆಚ್ಚುತ್ತಿದೆ ಕೋವಿಡ್ ಆತಂಕ
ನಾಲ್ವರು ಪೊಲೀಸ್ ಸಿಬ್ಬಂದಿ ಸೇರಿ 8 ಮಂದಿಗೆ ಕೋವಿಡ್- 19 |ಸೋಂಕಿನ ಮೂಲದ ಪತ್ತೆ ಕಾರ್ಯ
Team Udayavani, Jun 21, 2020, 12:55 PM IST
ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಕೋವಿಡ್ ಸೋಂಕು ಶನಿವಾರ ರುದ್ರನರ್ತನ ಮಾಡಿದ್ದು ಒಂದೇ ದಿನ 8 ಮಂದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ.
ತರೀಕೆರೆ ತಾಲೂಕಿನ ನಾಲ್ಕು ಪೊಲೀಸ್ ಸಿಬ್ಬಂದಿ, ಮಹಾರಾಷ್ಟ್ರದಿಂದ ಇತ್ತೀಚೆಗೆ ಎನ್.ಆರ್. ಪುರ ತಾಲೂಕಿಗೆ ಬಂದಿದ್ದ ಇಬ್ಬರು, ತಮಿಳುನಾಡಿನಿಂದ ಕೊಪ್ಪ ತಾಲೂಕಿಗೆ ಬಂದ ಒಬ್ಬರಿಗೆ ಹಾಗೂ ಕುವೈತ್ನಿಂದ ಶೃಂಗೇರಿ ತಾಲೂಕಿಗೆ ಬಂದಿದ್ದ ಒಬ್ಬರಲ್ಲಿ ಕೋವಿಡ್ ಸೋಂಕಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ತಿಳಿಸಿದ್ದಾರೆ. ಕೋವಿಡ್ ಸೋಂಕಿತ 8 ಮಂದಿಯನ್ನು ಚಿಕ್ಕಮಗಳೂರು ನಗರದಲ್ಲಿ ತೆರೆಯಲಾಗಿರುವ ಕೋವಿಡ್-19 ಚಿಕಿತ್ಸಾ ಕೇಂದ್ರದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 16 ಕೋವಿಡ್-19 ಸಕ್ರಿಯ ಪ್ರಕರಣಗಳು ಕಂಡು ಬಂದಿವೆ ಎಂದು ತಿಳಿಸಿದ್ದಾರೆ.
23 ವರ್ಷದ ಮಹಿಳೆ ಇತ್ತೀಚೆಗೆ ಕುವೈತ್ನಿಂದ ಜಿಲ್ಲೆಯ ಶೃಂಗೇರಿ ತಾಲೂಕಿಗೆ ಹಿಂದಿರುಗಿದ್ದರು. 38 ವರ್ಷದ ಪುರುಷ, 54 ವರ್ಷದ ಪುರುಷ, 31 ವರ್ಷದ ಪುರುಷ, 47 ವರ್ಷದ ಪುರುಷನಲ್ಲಿ ಸೋಂಕು ಪತ್ತೆಯಾಗಿದ್ದು ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದಿಂದ ಇತ್ತೀಚೆಗೆ ಎನ್.ಆರ್. ಪುರ ತಾಲೂಕಿಗೆ ಆಗಮಿಸಿದ್ದ 18 ವರ್ಷದ ಯುವಕ, 50 ವರ್ಷದ ಪುರುಷನಲ್ಲಿ ಸೋಂಕು ಪತ್ತೆಯಾಗಿದೆ. ತಮಿಳುನಾಡಿನಿಂದ ಕೊಪ್ಪ ತಾಲೂಕಿಗೆ ಆಗಮಿಸಿದ್ದ 25 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಕುವೈತ್ನಿಂದ ಶೃಂಗೇರಿ ಪಟ್ಟಣಕ್ಕೆ ಬಂದಿದ್ದ 23 ವರ್ಷದ ಮಹಿಳೆ ಸೇರಿದಂತೆ ನಾಲ್ವರು ಪೊಲೀಸರು ಹಾಗೂ ಹೊರ ರಾಜ್ಯದಿಂದ ಬಂದವರಲ್ಲಿ ಸೋಂಕು ಪತ್ತೆಯಾಗಿದೆ.
ಇನ್ನು ತರೀಕೆರೆ ಪಟ್ಟಣದ ಡಿವೈಎಸ್ಪಿ ಸೇರಿದಂತೆ ನಾಲ್ಕು ಜನ ಪೊಲೀಸ್ ಸಿಬ್ಬಂದಿಗೆ ಸೋಂಕು ಹೇಗೆ ತಗುಲಿದೆ ಎಂದು ಪತ್ತೆ ಹಚ್ಚಲಾಗುತ್ತಿದೆ. ತರೀಕೆರೆ ತಾಲೂಕು ಡಿವೈಎಸ್ಪಿ ಕಚೇರಿಯನ್ನೇ ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಪೊಲೀಸರ ಟ್ರಾವೆಲ್ ಹಿಸ್ಟರಿ ಭಯಾನಕವಾಗಿದೆ ಎಂದು ತಿಳಿದು ಬಂದಿದೆ. ಒಟ್ಟಾರೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಏರಿಕೆಯಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಇಷ್ಟು ದಿನಗಳ ಕಾಲ ಹೊರ ರಾಜ್ಯದಿಂದ ಜಿಲ್ಲೆಗೆ ಬಂದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿತ್ತು. ಆದರೆ, ಕಳೆದ ಮೂರ್ನಾಲ್ಕು ದಿನಗಳಿಂದ ಕಂಡು ಬರುತ್ತಿರುವ ಕೆಲವು ಸೋಂಕಿತ ಪ್ರಕರಣಗಳು ಸ್ಥಳೀಯರದ್ದಾಗಿದ್ದು ಸೋಂಕು ಸಾಮುದಾಯಿಕವಾಗಿ ಹರಡುತ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!