ಕೊಣಾಜೆ ಕ್ಯಾಂಪಸ್‌ನ ಪ್ರ.ದ. ಕಾಲೇಜು ಬಂದ್‌

ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಆರ್ಥಿಕ ಹೊರೆ

Team Udayavani, Jun 22, 2020, 6:10 AM IST

ಕೊಣಾಜೆ ಕ್ಯಾಂಪಸ್‌ನ ಪ್ರ.ದ. ಕಾಲೇಜು ಬಂದ್‌

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಕೊಣಾಜೆಯ ಕ್ಯಾಂಪಸ್‌ನಲ್ಲಿ 2017ರಲ್ಲಿ ಆರಂಭಿಸಿದ್ದ ಪ್ರಥಮ ದರ್ಜೆ ಕಾಲೇಜಿಗೆ ಸರಕಾರದ ಅನುಮೋದನೆ ಲಭಿಸದಿರುವುದು ಹಾಗೂ ಆರ್ಥಿಕ ಹೊರೆ ಕಡಿಮೆಗೊಳಿಸುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಆ ಕಾಲೇಜನ್ನೇ ಬಂದ್‌ ಮಾಡಲು ವಿ.ವಿ. ತೀರ್ಮಾನಿಸಿದೆ.

2021-22ನೇ ಅವಧಿಗೆ ಪ್ರವೇಶಾತಿ ಸ್ಥಗಿತ ಗೊಳಿಸಿರುವುದಲ್ಲದೆ, ಮೊದಲ ಹಾಗೂ ದ್ವಿತೀಯ ವರ್ಷವನ್ನು ಈಗಾಗಲೇ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳನ್ನು ಅವರು ಅಪೇಕ್ಷಿಸುವ ಹತ್ತಿರದ ಕಾಲೇಜುಗಳಿಗೆ ವರ್ಗಾವಣೆ ಮಾಡುವ ಸಂಬಂಧ ವಿ.ವಿ. ಚಿಂತನೆ ನಡೆಸಿದೆ. ಜತೆಗೆ, ಹಂಪನಕಟ್ಟೆಯಲ್ಲಿರುವ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಅವಕಾಶ ನೀಡುವ ಬಗ್ಗೆಯೂ ವಿ.ವಿ. ಮಾತುಕತೆ ನಡೆಸುತ್ತಿದೆ.

ಕರ್ನಾಟಕ ರಾಜ್ಯ ವಿ.ವಿ. ಕಾಯ್ದೆ ಪ್ರಕಾರ ಯಾವುದೇ ವಿ.ವಿ.ಗೆ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಅವಕಾಶವಿಲ್ಲ. ಆದರೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಕೈಗೆಟಕುವ ದರದಲ್ಲಿ ನೀಡಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಶಿಕ್ಷಣ ಕಲ್ಪಿಸುವ ಇರಾದೆಯೊಂದಿಗೆ 2017ರಲ್ಲಿ ಕೊಣಾಜೆಯಲ್ಲಿ ಪ್ರ.ದ. ಕಾಲೇಜು ಸ್ಥಾಪಿಸಲಾಗಿತ್ತು. ಬಿ.ಎ., ಬಿ.ಕಾಂ., ಬಿ.ಎಸ್ಸಿ. ಹಾಗೂ ಇತರ ಪದವಿ/ಡಿಪ್ಲೊಮಾ/ಸರ್ಟಿಫಿಕೆಟ್‌ ಕೋರ್ಸ್‌ ಇಲ್ಲಿ ಲಭ್ಯವಿತ್ತು.

ಡಿಗ್ರಿ ಸರ್ಟಿಫಿಕೇಟ್‌ ಹೇಗೆ?
ಕಳೆದೆರಡು ವರ್ಷಗಳಿಂದ ಇಲ್ಲಿ ಬಿಎ, ಬಿಕಾಂ ಮಾಡಿರುವವರಿಗೆ ಇದೀಗ ತೃತೀಯ ಶೈಕ್ಷಣಿಕ ವರ್ಷ ಇರುವುದರಿಂದ ಘಟಿಕೋತ್ಸವದ ವೇಳೆ ಆ ವಿದ್ಯಾರ್ಥಿಗಳಿಗೆ ವಿ.ವಿ. ಡಿಗ್ರಿ ನೀಡಬೇಕಾಗುತ್ತದೆ. ಆದರೆ ಸರಕಾರದ ಅನುಮತಿ ಇಲ್ಲದ ಕಾಲೇಜಿನ ವಿದ್ಯಾರ್ಥಿಗಳಿಗೆ ಯಾವ ಆಧಾರದಲ್ಲಿ ಡಿಗ್ರಿ ನೀಡಬೇಕು ಎಂಬ ಪ್ರಶ್ನೆ ಎದುರಾಗಿದೆ. ಸರಕಾರದಿಂದ ಅನುಮತಿ ಪಡೆಯದ ಕಾಲೇಜು ಎಂಬ ಕಾರಣದಿಂದಾಗಿ ಈ ವಿದ್ಯಾರ್ಥಿಗಳಿಗೆ “ಪೋಸ್ಟ್‌ ಮೆಟ್ರಿಕ್ಸ್‌’ ಸ್ಕಾಲರ್‌ಶಿಪ್‌ಗಾಗಿ ಆನ್‌ಲೈನ್‌ ಅರ್ಜಿ ಹಾಕಲೂ ಸಾಧ್ಯವಾಗುತ್ತಿಲ್ಲ.

ಬಂದ್‌ ಯಾಕಾಗಿ?
ಈ ಮಧ್ಯೆ ಸರಕಾರವು ವಿ.ವಿ.ಗೆ ಪತ್ರ ಬರೆದು ಕಾಲೇಜಿನ ಹುದ್ದೆಗಳ ಸೃಜನೆಗೆ ಅವಕಾಶ ನೀಡುವುದಿಲ್ಲ; ವಿ.ವಿ. ಆಂತರಿಕ ಸಂಪನ್ಮೂಲಗಳಿಂದಲೇ ಕಾಲೇಜಿನ ಖರ್ಚು ವೆಚ್ಚಗಳನ್ನು ನಡೆಸಬೇಕು ಎಂಬ ಷರತ್ತು ಹಾಕಿತ್ತು. ವಿ.ವಿ.ಯು ಪ್ರತೀ ವರ್ಷ ಸುಮಾರು 1 ಕೋ.ರೂ.ಗಳನ್ನು ಅತಿಥಿ ಉಪನ್ಯಾಸಕರ ವೇತನ ಇತ್ಯಾದಿಗಳಿಗೆ ಮೀಸಲಿಡಬೇಕಾಗುತ್ತದೆ. ಕೋವಿಡ್-19 ಕಾರಣದಿಂದ ಆರ್ಥಿಕ ಮಿತವ್ಯಯಕ್ಕೆ ಮುಂದಾಗಿರುವ ವಿ.ವಿ. ಕಾಲೇಜನ್ನು ಮುಚ್ಚುವುದೇ ಸೂಕ್ತ ಎಂದು ತೀರ್ಮಾನಿಸಿದೆ.

ಸ್ಥಳೀಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿ.ವಿ. ಕ್ಯಾಂಪಸ್‌ನಲ್ಲಿ ಪ್ರ.ದ. ಕಾಲೇಜು ಆರಂಭಿಸಿದ್ದೆವು. ಆದರೆ ಸರಕಾರದ ಅನುಮೋದನೆ ದೊರಕದಿರುವುದು ಹಾಗೂ ವಿ.ವಿ.ಯ ಆಂತರಿಕ ಸಂಪನ್ಮೂಲವನ್ನೇ ಬಳಕೆ ಮಾಡಬೇಕು ಎಂಬ ಸೂಚನೆ ಬಂದಿರುವುದರಿಂದ ಆರ್ಥಿಕ ಹೊರೆ ತಪ್ಪಿಸಲು ಅನಿವಾರ್ಯವಾಗಿ ಮುಂದಿನ ವರ್ಷದಿಂದ ಪ್ರವೇಶಾತಿ ತಡೆಹಿಡಿಯಲು ನಿರ್ಧರಿಸಲಾಗಿದೆ.
– ಪ್ರೊ| ಪಿ.ಎಸ್‌. ಯಡಪಡಿತ್ತಾಯ,
ಕುಲಪತಿಗಳು, ಮಂಗಳೂರು ವಿ.ವಿ.

ವಿ.ವಿ. ಕ್ಯಾಂಪಸ್‌ನ ಪ್ರಥಮ ದರ್ಜೆ ಕಾಲೇಜನ್ನು ಬಂದ್‌ ಮಾಡಲು ತೀರ್ಮಾನಿಸಿರುವುದು ಗ್ರಾಮೀಣ ವಿದ್ಯಾರ್ಥಿಗಳಿಗೆ ಬಹುದೊಡ್ಡ ನಷ್ಟ. ಆ ಚಿಂತನೆಯನ್ನು ಕೈಬಿಟ್ಟು ಸರಕಾರ ಕಾಲೇಜನ್ನು ಮುಂದುವರಿಸಬೇಕು.
– ರಾಜೇಶ್‌ ಶೆಟ್ಟಿ ,
ಪಜೀರುಗುತ್ತು, ಹೋರಾಟಗಾರರು

 

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.