ಯೋಗದಿಂದ ರೋಗ ದೂರ
Team Udayavani, Jun 22, 2020, 7:41 AM IST
ಶಹಾಪುರ: ನಿತ್ಯ ಯೋಗಾಭ್ಯಾಸ ಮಾಡುವುದರಿಂದ ಮನುಷ್ಯ ರೋಗದಿಂದ ದೂರವಿರಲು ಸಾಧ್ಯ. ಮಾನಸಿಕ, ದೈಹಿಕ ಸದೃಢತೆಗೆ ನಿತ್ಯ ಯೋಗಾಭ್ಯಾಸ ಅಗತ್ಯ ಎಂದು ಬಿಎಸ್ಎಫ್ ಯೋಧ ದುರ್ಗಪ್ಪ ನಾಯಕ ಹೇಳಿದರು.
ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಅಂಗವಾಗಿ ರವಿವಾರ ಇಲ್ಲಿನ ಗೆಳೆಯರ ಬಳಗದಿಂದ ನಡೆದ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಸ್ತುತ ಒತ್ತಡದ ಬದುಕಿನಲ್ಲಿಮನುಷ್ಯ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾನೆ. ಒತ್ತಡ ನಿವಾರಣೆಗೆ ಯೋಗವೇ ಮದ್ದು. ನಿತ್ಯ ಬೆಳಗ್ಗೆ ಕೆಲ ಸಮಯವಾದರೂ ಯೋಗ ಮಾಡುವ ರೂಢಿ ಬೆಳೆಸಿಕೊಳ್ಳಬೇಕು. ಇದರಿಂದ ಆರೋಗ್ಯಕರ ಮತ್ತು ಉತ್ಸಾಹಭರಿತ ಜೀವನ ನಡೆಸಲು ಸಾಧ್ಯ ಎಂದರು.
ಯೋಗಪಟು ಜಗಧೀಶ ಹೊನ್ಕಲ್ ಮಾತನಾಡಿದರು. ನಂತರ ಯೋಗಾಭ್ಯಾಸ ನಡೆಸಿಕೊಟ್ಟರು. ಸ್ವಕುಳ ಸಾಳಿ ಸಮಾಜ ಅಧ್ಯಕ್ಷ ರಾಜಕುಮಾರ ಚಿಲ್ಲಾಳ, ಪತ್ರಕರ್ತ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ