ಗಂಗಾವತಿ: ಕೋವಿಡ್-19 ಸೋಂಕು ಪೀಡಿತ ನರ್ಸ್ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ
Team Udayavani, Jun 22, 2020, 1:11 PM IST
ಗಂಗಾವತಿ: ಕೋವಿಡ್-19 ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇಲ್ಲಿಯ ಸರಕಾರಿ ಆಸ್ಪತ್ರೆಯ ಸ್ಟಾಫ್ ನರ್ಸ್ ಸೋಂಕಿನಿಂದ ಗುಣಮುಖರಾಗಿ ಸೋಮವಾರ ಬಿಡುಗಡೆಯಾಗಿ ಮನೆಗೆ ತೆರಳಿದರು.
ಕೋವಿಡ್ ಸೋಂಕಿನಿಂದ ಗುಣಮುಖರಾದ ಸ್ಟಾಪ್ ನರ್ಸ್ ಇವರಿಗೆ ಶಾಸಕ ಪರಣ್ಣ ಮುನವಳ್ಳಿ ಹಾಗೂ ಸರಕಾರಿ ಆಸ್ಪತ್ರೆಯ ವೈದ್ಯರು ಸಿಬ್ಬಂದಿ ವರ್ಗದವರು ಹೂಗುಚ್ಛ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಕೋವಿಡ್ ರೋಗ ಕಾಣಿಸಿಕೊಂಡಿದ್ದ ನರ್ಸ್ ಗುಣಮುಖರಾಗಿದ್ದಾರೆ. ಅವರ 8 ತಿಂಗಳ ಮಗುವಿನ ಗಂಟಲು ದ್ರವ ಪಡೆದು ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ಬಂದಿದೆ. ತಾಯಿ ಮಗುವನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದರು.
ಭೌತಿಕ ಅಂತರ, ಸ್ಯಾನಿಟೈಜರ್ ಬಳಕೆ ಮತ್ತು ಜಾಗೃತಿಯಿಂದ ಇದ್ದರೆ ಕೋವಿಡ್-19 ರೋಗದಿಂದ ದೂರ ಇರಲು ಸಾಧ್ಯ. ಜನರು ಭಯಪಡಬಾರದು ಜಾಗೃತಿಯಿಂದ ಜೀವನ ನಡೆಸಬೇಕೆಂದರು.
ಡಾ.ಲಿಂಗರಾಜು, ಡಾ.ಸವಡಿ, ಡಾ.ಗೌರಿಶಂಕರ, ಡಾ.ಮಲ್ಲಿಕಾರ್ಜುನ ಸೇರಿ ಆಸ್ಪತ್ರೆಯ ವೈದ್ಯರು ಸಿಬ್ಬಂದಿಗಳು ಉಪಸ್ಥಿತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ