ದಾವಣಗೆರೆ: ಒಂಬತ್ತು ಜನರಿಗೆ ವಕ್ಕರಿಸಿದ ಮಹಾಮಾರಿ

ರಾಜನಹಳ್ಳಿ ಗ್ರಾಮದ ಗರ್ಭಿಣಿಯಿಂದ ಎಂಟು ಜನರಿಗೆ ಹಬ್ಬಿದ ಕೋವಿಡ್

Team Udayavani, Jun 22, 2020, 9:59 PM IST

ದಾವಣಗೆರೆ: ಒಂಬತ್ತು ಜನರಿಗೆ ವಕ್ಕರಿಸಿದ ಮಹಾಮಾರಿ

ದಾವಣಗೆರೆ: ಜಿಲ್ಲೆಯಲ್ಲಿ ಹೊಸದಾಗಿ ಸೋಮವಾರ ಒಂಬತ್ತು ಕೋವಿಡ್-19 ಪ್ರಕರಣ ದೃಢಪಟ್ಟಿವೆ.ಒಟ್ಟು 265 ಪ್ರಕರಣಗಳಲ್ಲಿ 220 ಸೋಂಕಿತರು ಬಿಡುಗಡೆಯಾಗಿದ್ದಾರೆ. 7 ಜನರು ಮೃತಪಟ್ಟಿದ್ದಾರೆ. 38 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ತಿಳಿಸಿದರು.

ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ಗರ್ಭಿಣಿಯಿಂದ ಎಂಟು ಜನರಿಗೆ ಕೋವಿಡ್-19 ಸೋಂಕು ತಗುಲಿದೆ. ಆಕೆಯ ತವರುಮನೆಯಲ್ಲಿ ಮೂವರು, ಪತಿಯ ಮನೆಯಲ್ಲಿ ಆರು ಜನರಿಗೆ ಸೋಂಕು ದೃಢಪಟ್ಟಿದೆ. ರಾಜನಹಳ್ಳಿ ಮತ್ತು ಹರಿಹರದ ಅಗಸರ ಬೀದಿ ಮನೆಯನ್ನು ಕಂಟೈನ್‌ಮೆಂಟ್‌ ವಲಯ ಎಂದು ಘೋಷಿಸಲಾಗಿದೆ.

ಆಕೆಯ ಅಜ್ಜಿ ದಾವಣಗೆರೆ ಬಾಷಾ ನಗರ, ಬೀಡಿ ಲೇಔಟ್‌ಗೆ ಬಂದು ಹೋಗುತ್ತಿದ್ದರು ಎಂಬ ಮಾಹಿತಿ ಇದೆ. ಸೋಂಕಿನ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚನ್ನಗಿರಿಯ ಗೌಡ್ರ ಬೀದಿಯ 38 ವರ್ಷದ ಬೆಲ್ಲದ ವ್ಯಾಪಾರಿಗೆ ಸೋಂಕು ತಗುಲಿದೆ. ಆತ ಶಿವಮೊಗ್ಗ ಬೇರೆ ಕಡೆ ಓಡಾಡಿರುವ ಬಗ್ಗೆ ಮಾಹಿತಿ ಇದೆ. ಸೋಂಕಿನ ಮೂಲವನ್ನ ಸರ್ವಲೈನ್‌ ತಂಡ ಪತ್ತೆ ಹಚ್ಚುತ್ತಿದೆ. ಚನ್ನಗಿರಿಯ ಗೌಡ್ರ ಬೀದಿ, ಕುಂಬಾರ ಬೀದಿಯನ್ನ ಕಂಟೈನ್‌ಮೆಂಟ್‌ ಝೋನ್‌ ಮಾಡಲಾಗಿದೆ ಎಂದರು.

ಕೋವಿಡ್-19 ಸೋಂಕಿನ ಲಕ್ಷಣ ಇದ್ದಂತಹವರು ಪ್ರಾರಂಭಿಕ ಹಂತದಲ್ಲೇ ನಮ್ಮಲ್ಲಿಗೆ ಬರುವುದರಿಂದ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಗುಣಮುಖರನ್ನಾಗಿ ಮಾಡುತ್ತೇವೆ. ಜನರನ್ನು ಉಳಿಸುವ ಎಲ್ಲಾ ಕೆಲಸ ಮಾಡುತ್ತೇವೆ. ಕೊನೆಯ ಹಂತದವರೆಗೆ ಕಾಯದೆ ಪ್ರಾರಂಭಿಕ ಹಂತದಲ್ಲೇ ಬರಬೇಕು. ಸಾಮಾಜಿಕ ಅಂತರ, ವೈಯಕ್ತಿಕ ಸ್ವತ್ಛತೆ, ಸ್ಯಾನಿಟೈಸೇಷನ್‌ಗೆ ಸದಾ ಗಮನ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ಒಟ್ಟು 45 ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿ 14 ತೆರವುಮಾಡಲಾಗಿದೆ. ಈಗ ಒಟ್ಟು 31 ಕಂಟೈನ್‌ಮೆಂಟ್‌ ಝೋನ್‌ ಇವೆ. ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿ ಐಎಲ್‌ಐ, ಸಾರಿ ಪ್ರಕರಣಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಲ್ನರಬಲ್‌ ಗ್ರೂಪಿನವರ ಸಮೀಕ್ಷೆ ನಡೆಸಲಾಗುತ್ತಿದೆ. 10-15 ದಿನಗಳ ಕಾಲ ವಿಶೇಷ ಆಂದೋಲನ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ಅಪರ ಜಿಲ್ಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್‌. ರಾಘವೇಂದ್ರ ಸ್ವಾಮಿ, ಜಿಲ್ಲಾ ಸರ್ಜನ್‌ ಡಾ| ನಾಗರಾಜ್‌, ಸರ್ವಲೈನ್‌ ಅಧಿಕಾರಿ ಡಾ| ಜಿ.ಡಿ. ರಾಘವನ್‌, ಡಾ| ರವಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಹಲವರು ಗುಣಮುಖ
ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಜಾಲಿನಗರದ 18 ವರ್ಷದ ಯುವತಿ, ಒಂದೇ ಕಿಡ್ನಿ ಹೊಂದಿರುವ 65 ವರ್ಷದ ಮಹಿಳೆ (ರೋಗಿ ನಂಬರ್‌ 1061), ಒಂದು ಕಾಲು ಗ್ಯಾಂಗ್ರಿನ್‌ಗೆ ತುತ್ತಾಗಿರುವ 69 ವರ್ಷದ ವೃದ್ಧ (ರೋಗಿ ನಂಬರ್‌ 1378), 8 ಮತ್ತು ಎರಡೂವರೆ ತಿಂಗಳ ಹಸುಗೂಸು, ಸೈಕೋನ್‌ ಸಮಸ್ಯೆ ಹೊಂದಿರುವ 26 ವರ್ಷದ ಮಹಿಳೆ, ಅಧಿಕ ರಕ್ತದೊತ್ತಡ, ನ್ಯುಮೋನಿಯಾದಿಂದ ಬಳಲುತ್ತಿದ್ದ 69 ವರ್ಷದ ಬಾಪೂಜಿ ಆಸ್ಪತ್ರೆ ಹೆಲ್ತ್‌ ವರ್ಕರ್‌ ಇತರರನ್ನು ನಮ್ಮ ವೈದ್ಯಕೀಯ ತಂಡ ಗುಣಮುಖರನ್ನಾಗಿ ಮಾಡಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ತಿಳಿಸಿದರು.

ಸೋಂಕಿತರ ಹೆರಿಗೆ
ಕೋವಿಡ್-19 ಸೋಂಕಿನ ಲಕ್ಷಣ ಕಂಡು ಬಂದಿರುವ ಒಟ್ಟು 6 ಜನ ಗರ್ಭಿಣಿಯರಲ್ಲಿ ಇಬ್ಬರಿಗೆ ನಾರ್ಮಲ್‌ಮತ್ತೊಬ್ಬರಿಗೆ ಸಿಸರೇನಿಯನ್‌ ಹೆರಿಗೆ ಮಾಡಲಾಗಿದೆ. 5 ದಿನಗಳ ನಂತರ ಕೂಸುಗಳ ಸ್ವಾಬ್‌ ತೆಗೆದು ಪರೀಕ್ಷೆಗೆ ಕಳಿಸಲಾಗುವುದು. ಐವರ ಸೋಂಕಿನ ಖಚಿತತೆಗಾಗಿ ವರದಿ ಕಾಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.