ಕಾಮಗಾರಿ ಮುಗಿಸದ್ದಿದರೆ ಕ್ರಿಮಿನಲ್ ಕೇಸ್

ಅಮೃತ ಯೋಜನೆ ವಿಳಂಬಕ್ಕೆ ಸಂಸದ ಜಿಗಜಿಣಗಿ ಕಿಡಿ

Team Udayavani, Jun 23, 2020, 8:14 AM IST

ಕಾಮಗಾರಿ ಮುಗಿಸದ್ದಿದರೆ ಕ್ರಿಮಿನಲ್ ಕೇಸ್

ವಿಜಯಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ನಗರ ಕುಡಿಯುವ ನೀರಿನ ಅಮೃತ ಯೋಜನೆಗೆ ವಿಜಯಪುರ ನರಗ ಆಯ್ಕೆಯಾಗಿದೆ. 156 ಕೋಟಿ ರೂ. ವೆಚ್ಚದ ನಗರದಲ್ಲಿ ಜಾರಿಯಲ್ಲಿರುವ ಕುಡಿಯುವ ನೀರಿನ ಈ ಮಹತ್ವದ ಯೋಜನೆ ಕಾಮಗಾರಿ ವಿಳಂಬವಾಗುತ್ತಿದೆ. ಹೀಗಾಗಿ ಸಪ್ಟೆಂಬರ್‌ ತಿಂಗಳೊಳಗೆ ಕಾಮಗಾರಿ ಮುಗಿಸುವಂತೆ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ತಾಕೀತು ಮಾಡಿದರು.

ಸೋಮವಾರ ನಗರದಲ್ಲಿ ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ 2019ರಿಂದ ಅಮೃತ ಯೋಜನೆ ಕಾಮಗಾರಿ ನಡೆದಿದ್ದರೂ ಕಾಮಗಾರಿ ಮುಗಿಸಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹರಿಹಾಯ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವ ಬಸವರಾಜು, ಸಪ್ಟೆಂಬರ್‌ ತಿಂಗಳೊಳಗೆ ಕಾಮಗಾರಿ ಮುಗಿಸಬೇಕು. ಇಲ್ಲವಾದಲ್ಲಿ ಕಾಮಗಾರಿ ಪರಿಶೀಲಿಸಿ, ಗುತ್ತಿಗೆ ಪಡೆದ ಸಂಸ್ಥೆ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಎಂದು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು. ನಗರದಲ್ಲಿ ಅಮೃತ್‌ ಯೋಜನೆ ಅನುಷ್ಠಾನದಿಂದ 6 ವಲಯಗಳಲ್ಲಿ ಸದ್ಯಕ್ಕೆ ನೀರು ಪೂರೈಕೆ ಆಗುತ್ತಿದೆ. ಇತರೆ ವಲಯಗಳಿಗೂ ನೀರು ಪೂರೈಸುವ ನಿಟ್ಟಿನಲ್ಲಿ ಕಾಮಗಾರಿ ಚುರುಕುಗೊಳಿಸಬೇಕು. ಮಾನವ ಸಂಪನ್ಮೂಲ ಹೆಚ್ಚಿಸಿಕೊಂಡು ಶೀಘ್ರ ಕಾಮಗಾರಿ ಮುಗಿಸಬೇಕು. ಬಾಕಿ ಇರುವ 13 ಸಾವಿರ ನಳ ಸಂಪರ್ಕ ಕಲ್ಪಿಸಬೇಕು ಎಂದರು.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶೇ.26ರಷ್ಟು ಮಾತ್ರ ಕರ ಸಂಗ್ರಹವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಕರ ವಸೂಲಿಗೆ ಕ್ರಮ ಕೈಗೊಳ್ಳಬೇಕು. 14ನೇ ಹಣಕಾಸು ಆಯೋಗದ ಅನುದಾನ, ಪೌರ ಕಾರ್ಮಿಕ ಗೃಹ ಭಾಗ್ಯ ಯೋಜನೆ, ವಿವಿಧ ವೃತ್ತಿ ಯೋಜನೆಯಡಿ ಸೂಕ್ತ ಪ್ರಗತಿ ಸಾಧಿಸಬೇಕು. ನಗರದಲ್ಲಿ 10 ಕೋಟಿ ರೂ. ವೆಚ್ಚದ ಸುಭಾಶ್ಚಂದ್ರ ಬೋಸ್‌ ಹೆಸರಿನ ಕ್ರೀಡಾಂಗಣ ನಿರ್ಮಾಣ ಪ್ರಸ್ತಾವನೆಗೆ ಅನುಮೋದನೆ ಕೊಡಿಸಲಾಗುತ್ತದೆ. ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಸರ್ಕಾರದ ಈಜು ಕೊಳ ಉದ್ಘಾಟನೆ, ಹೊಸ ಕ್ರೀಡಾಂಗಣ ಹಾಗೂ ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸೋಮನಗೌಡ ಪಾಟೀಲ ಸಾಸನೂರ, ಅರುಣ ಶಹಾಪೂರ, ಡಿಸಿ ವೈ.ಎಸ್‌ ಪಾಟೀಲ, ಎಡಿಸಿ ಡಾ| ಔದ್ರಾಮ, ಶ್ರೀಹರಿ ಗೊಳಸಂಗಿ, ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.