ಯುವತಿಗೆ ಬಾಲಕಿಯಿಂದ ಜೀವದಾನ

ಬಾರಕೂರಿನ ಚೌಳಿಕೆರೆಗೆ ಉರುಳಿದ ಕಾರಿನಲ್ಲಿದ್ದ ಯುವತಿ ಚೇತರಿಕೆ

Team Udayavani, Jun 23, 2020, 9:30 AM IST

ಯುವತಿಗೆ ಬಾಲಕಿಯಿಂದ ಜೀವದಾನ

ಉಡುಪಿ: ಬಾರಕೂರಿನ ಚೌಳಿಕೆರೆಗೆ ಕಾರು ಉರುಳಿ ಉದ್ಯಮಿ ಸಂತೋಷ್‌ ಶೆಟ್ಟಿ ಅವರು ಮೃತಪಟ್ಟ ಘಟನೆ ರವಿವಾರ ನಡೆದಿತ್ತು. ಅವರ ಜತೆಗಿದ್ದ ಸಂಸ್ಥೆಯ ಉದ್ಯೋಗಿ ಶ್ವೇತಾ ತೀವ್ರವಾಗಿ ಅಸ್ವಸ್ಥರಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಲು ಬಾಲಕಿಯೊಬ್ಬಳು ಸಕಾಲಿಕವಾಗಿ ನೀಡಿರುವ ಪ್ರಥಮ ಚಿಕಿತ್ಸೆಯೇ ಕಾರಣ. ಬಾಲಕಿ ಚಿಕಿತ್ಸೆ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು, ಸಾರ್ವತ್ರಿಕ ಪ್ರಶಂಸೆ ವ್ಯಕ್ತವಾಗುತ್ತಿದೆ.
ಬ್ರಹ್ಮಾವರ ಲಿಟ್ಲರಾಕ್‌ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ನಮನಾ ಅವರು ಯುವತಿಯ ಜೀವರಕ್ಷಕಿ.  ಎನ್ನೆಸ್ಸೆಸ್‌ ಅಧಿಕಾರಿಯಾಗಿರುವ ಹಿರಿಯ
ಉಪನ್ಯಾಸಕಿ ಸವಿತಾ ಎರ್ಮಾಳು -ಕುಮಾರ್‌ ದಂಪತಿಯ ಪುತ್ರಿ ಈಕೆ. ಎನ್‌ಸಿಸಿ ಕೆಡೆಟ್‌ ಆಗಿರುವ ಬಾಲಕಿ ಕಲಿತ ಪ್ರಥಮ ಚಿಕಿತ್ಸೆಯ ಪಾಠ ಈಗ ಸದ್ಬಳಕೆಯಾಗಿದೆ.

ಇದನ್ನೂ ಓದಿ: ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು, ಇನ್ನೋರ್ವ ಮಹಿಳೆ ಗಂಭೀರ

ನಮನಾ ಮಾಡಿದ್ದಿಷ್ಟು
ಕಾರು ನೀರಿಗೆ ಬಿದ್ದ ಕೂಡಲೇ ಸ್ಥಳೀಯ ಯುವಕರು ನೀರಿಗೆ ಧುಮುಕಿ ಗಾಜು ಒಡೆಯುವ ಪ್ರಯತ್ನ ಮಾಡಿದ್ದರು. ಸೆಂಟ್ರಲ್‌ ಲಾಕ್‌ ಆಗಿದ್ದ ಕಾರಣ ಬಾಗಿಲು ತೆರೆಯಲಾಗಲಿಲ್ಲ. ಚಾಲಕ ಸಂತೋಷ್‌ ಶೆಟ್ಟಿ ಸೀಟ್‌ ಬೆಲ್ಟ್ ಧರಿಸಿದ್ದ ಕಾರಣ ಮೇಲೆತ್ತುವುದೂ ಸುಲಭಸಾಧ್ಯವಾಗಿರಲಿಲ್ಲ. ಆದ್ದರಿಂದ ಯುವತಿಯನ್ನು ಮೊದಲು ಮೇಲೆತ್ತಿದರು. ತತ್‌ಕ್ಷಣ ನಮನಾ ಅವರ ಮನಸ್ಸು ಜಾಗೃತವಾಗಿದ್ದು, ಎನ್‌ಸಿಸಿಯಲ್ಲಿ ಕಲಿತ ವಿದ್ಯೆಯನ್ನು ಪ್ರಯೋಗಿಸಿ ನೋಡೋಣ ಎಂದು ಕಾರ್ಯಾಚರಣೆಗಿಳಿದರು. ಮೊದಲಿಗೆ ಯುವತಿಯ ದೇಹ ಸೇರಿದ್ದ ನೀರನ್ನು ಹೊರತೆಗೆಯಲಾಯಿತು. ಎದೆ, ಕೈಕಾಲುಗಳನ್ನು ತಿಕ್ಕಿ ದೇಹವನ್ನು ಪುನಶ್ಚೇತನಗೊಳಿಸಲಾಯಿತು. ಸ್ಥಳೀಯರೂ ಕೈಗೂಡಿಸಿದರು. ಬಳಿಕ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಪ್ರಸ್ತುತ
ಯುವತಿ ಚೇತರಿಸಿಕೊಂಡಿದ್ದಾರೆ. ಸಂತೋಷ್‌ ಅವರನ್ನು ಕಾರಿನಿಂದ ಹೊರತಂದ ಬಳಿಕ ಅವರಿಗೂ ಇದೇ ರೀತಿಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತಾದರೂ ಉಳಿಸಿ ಕೊಳ್ಳಲಾಗಲಿಲ್ಲ ಎನ್ನುತ್ತಾರೆ ಸ್ಥಳೀಯರು.

ವೈದ್ಯರಿಂದ ಶ್ಲಾಘನೆ
ಬಾಲಕಿ ನಮನಾ ಅವರ ಸಕಾಲಿಕ ಕ್ರಮಕ್ಕೆ ಮಣಿಪಾಲ ಆಸ್ಪತ್ರೆಯ ವೈದ್ಯರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯುವತಿಗೆ ಪ್ರಥಮ ಚಿಕಿತ್ಸೆ ಲಭಿಸದಿದ್ದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇತ್ತು ಎನ್ನಲಾಗುತ್ತಿದೆ.

ಹಲವರ ಶ್ರಮ
ಅಪಘಾತ ಸಂಭವಿಸಿದ ತತ್‌ಕ್ಷಣ ಸ್ಥಳೀಯರು ಯುವತಿಯನ್ನು ಕೆರೆಯಿಂದ ಮೇಲೆತ್ತಿ ರಕ್ಷಣೆ ಮಾಡಿದರು. ನಾನು ನನ್ನಿಂದಾದ ಪ್ರಥಮ ಚಿಕಿತ್ಸೆ ನೀಡಿದೆ. ಯುವತಿಯ ಪ್ರಾಣ ಉಳಿಸುವಲ್ಲಿ ಎಲ್ಲರ  ಶ್ರಮವೂ ಇದೆ. ಎನ್‌ಸಿಸಿಯಲ್ಲಿ ತೊಡಗಿಸಿಕೊಂಡಿದ್ದ ಕಾರಣ ನಾನು ಯಾವುದೇ ಅಂಜಿಕೆ ಇಲ್ಲದೆ  ಅವರೊಂದಿಗೆ ಕೈಜೋಡಿಸಿದೆ.
– ನಮನಾ, ಪ್ರಥಮ ಚಿಕಿತ್ಸೆ ನೀಡಿದ ಬಾಲಕಿ

ಇದನ್ನೂ ಓದಿ: ಬಾರ್ಕೂರು ಚೌಳಿಕೆರೆ ಕಾರು ಅಪಘಾತ: ಅಪಾಯವನ್ನೂ ಲೆಕ್ಕಿಸದೇ ಕೆರೆಗೆ ಧುಮುಕಿದ ಅವಳಿ ವೀರರು!

ಟಾಪ್ ನ್ಯೂಸ್

Who is the prime ministerial candidate of the opposition party? Answered by Mallikarjuna Kharge

INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

2

ʼಡ್ಯಾನ್ಸ್‌ ದಿವಾನೆ -4ʼ ಟ್ರೋಫಿ ಗೆದ್ದ ಬೆಂಗಳೂರು ಮೂಲದ ನಿತಿನ್; ಸಾಥ್‌ ಕೊಟ್ಟ ಗೌರವ್

1

ದೇವರ ದರ್ಶನಕ್ಕೆ ತೆರಳುತ್ತಿದ್ದವರ ಮೇಲೆ ಹರಿದ ಟ್ರಕ್‌: 11 ಮಂದಿ ಸ್ಥಳದಲ್ಲೇ ದುರ್ಮರಣ

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

Shaheen Afridi rejected as vice-captain of Pakistan team; But PCB says otherwise

Pakistan ತಂಡದ ಉಪ ನಾಯಕತ್ವ ತಿರಸ್ಕರಿಸಿದ ಶಾಹೀನ್ ಅಫ್ರಿದಿ; ಆದರೆ ಪಿಸಿಬಿ ಹೇಳುವುದೇ ಬೇರೆ

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Udupi: ಎದೆ ನೋವಿನಿಂದ ವ್ಯಕ್ತಿ ಸಾವು

Udupi: ಎದೆ ನೋವಿನಿಂದ ವ್ಯಕ್ತಿ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Who is the prime ministerial candidate of the opposition party? Answered by Mallikarjuna Kharge

INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

4-

Hunsur: ಉತ್ತಮ ಮಳೆ; ಲಕ್ಷ್ಮಣತೀರ್ಥ ನದಿ ಒಳ ಹರಿವು ಹೆಚ್ಚಳ

2

ʼಡ್ಯಾನ್ಸ್‌ ದಿವಾನೆ -4ʼ ಟ್ರೋಫಿ ಗೆದ್ದ ಬೆಂಗಳೂರು ಮೂಲದ ನಿತಿನ್; ಸಾಥ್‌ ಕೊಟ್ಟ ಗೌರವ್

3-sakleshpura

Sakleshpura: ಕಾಡಾನೆ ದಾಳಿ; ಕೂಲಿ ಕಾರ್ಮಿಕ ವೃದ್ದೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.