ಲಾಲೂ ನೇತೃತ್ವದ RJDಗೆ ಭಾರೀ ಹಿನ್ನಡೆ: ಐವರು ಎಂಎಲ್ ಸಿ ಜೆಡಿಯುಗೆ ಸೇರ್ಪಡೆ
ಆರ್ ಜೆಡಿ ಉಪಾಧ್ಯಕ್ಷ ಹಾಗೂ ಸ್ಥಾಪಕ ಸದಸ್ಯ ರಘುವಂಶ್ ಪ್ರಸಾದ್ ಸಿಂಗ್ ಕೂಡಾ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
Team Udayavani, Jun 23, 2020, 4:54 PM IST
ಪಾಟ್ನಾ:ಮುಂಬರುವ ವಿಧಾನ ಪರಿಷತ್ ಚುನಾವಣೆಗೂ ಮುನ್ನ ಬಿಹಾರದಲ್ಲಿ ಲಾಲೂಪ್ರಸಾದ್ ಯಾದವ್ ಸ್ಥಾಪಿಸಿದ್ದ ಆರ್ ಜೆಡಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ಐವರು ಎಂಎಲ್ ಸಿ ಮಂಗಳವಾರ ಆರ್ ಜೆಡಿ ತೊರೆದು ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಆರ್ ಜೆಡಿ ಉಪಾಧ್ಯಕ್ಷ ಹಾಗೂ ಸ್ಥಾಪಕ ಸದಸ್ಯ ರಘುವಂಶ್ ಪ್ರಸಾದ್ ಸಿಂಗ್ ಕೂಡಾ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿಂಗ್ ಅವರು ಪ್ರಸ್ತುತ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ 19 ಪಾಸಿಟಿವ್ ವರದಿ ಬಂದ ನಂತರ ರಘುವಂಶ್ ಅವರು ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವರದಿಯ ಪ್ರಕಾರ, ಆರ್ ಜೆಡಿ ಪಕ್ಷದಲ್ಲಿನ ಬೆಳವಣಿಗೆ ತಮಗೆ ಅಸಂತೋಷವನ್ನುಂಟು ಮಾಡಿದೆ. ಹೀಗಾಗಿ ತಾನು ಪಕ್ಷದ ಹುದ್ದೆಯಿಂದ ಕೆಳಗಿಳಿಯುವುದಾಗಿ ಸಿಂಗ್ ಆರ್ ಜೆಡಿ ವರಿಷ್ಠ ನಾಯಕರಿಗೆ ಪತ್ರ ಮುಖೇನ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಎಂಎಲ್ ಸಿಗಳಾದ ಸಂಜಯ್ ಪ್ರಸಾದ್, ದಿಲೀಪ್ ರಾಯ್, ಎಂಡಿ ಕುಮಾರ್ ಅಲಾಂ, ರಾಧಾ ಚರಣ್ ಶಾ ಮತ್ತು ರಣ್ ವಿಜಯ್ ಕುಮಾರ್ ಸಿಂಗ್ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಜುಲೈ 7ರಂದು ಬಿಹಾರದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯಲಿದೆ. ಐವರು ಎಂಎಲ್ ಸಿ ತಂಡವನ್ನು ಪ್ರತ್ಯೇಕ ಎಂದು ಪರಿಗಣಿಸಿದ್ದು, ಜೆಡಿಯು ಸೇರ್ಪಡೆಗೆ ಅನುಮತಿ ನೀಡಲಾಗಿದೆ ಎಂದು ವಿಧಾನಪರಿಷತ್ ಅಧ್ಯಕ್ಷ ಅವಧೇಶ್ ನರೈನ್ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ