12 ಮಂದಿ ಉಗ್ರರ ವಿರುದ್ಧ ಚಾರ್ಜ್‌ಶೀಟ್‌


Team Udayavani, Jun 24, 2020, 6:03 AM IST

ugra charge

ಬೆಂಗಳೂರು: ದಕ್ಷಿಣ ಭಾರತವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿಕೊಂಡು ಭಾರತದಲ್ಲಿ ಐಸಿಸ್‌ ಪ್ರಾಂತ್ಯ ಸ್ಥಾಪನೆ, ತರಬೇತಿ, ಉಗ್ರ ಚಟುವಟಿಕೆ ಜತೆಗೆ ತಮಿಳುನಾಡಿನ ಹಿಂದೂ ಮುಖಂಡನ ಹತ್ಯೆ ಹಾಗೂ ಕರ್ನಾಟಕದಲ್ಲೂ  ಹಿಂದೂನಾಯಕರ ಹತ್ಯೆಗೆ ಸಂಚು ರೂಪಿಸಲು ಸುದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ವಾಸವಗಿದ್ದ ಶಂಕಿತರು ಸೇರಿದಂತೆ 12 ಮಂದಿ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮಂಗಳವಾರ ಚೆನ್ನೈ ನ್ಯಾಯಾಲಯಕ್ಕೆ  ದೋಷಾರೋಪ ಪಟ್ಟಿ ಸಲ್ಲಿಸಿದೆ.

ಮೊಹಮ್ಮದ್‌ ಹನೀಫ್‌ ಖಾನ್‌, ಇಮ್ರಾನ್‌ ಖಾನ್‌, ಮೊಹಮ್ಮದ್‌ ಝೈದ್‌, ಇಜಾಜ್‌ ಪಾಷಾ, ಹುಸೇನ್‌ ಷರೀಫ್‌, ಕ್ವಾಜಾ ಮೊಹಿದ್ದೀನ್‌, ಮೆಹಬೂಬ್‌ ಪಾಷಾ, ಅಬ್ದುಲ್‌ ರೆಹಮಾನ್‌, ಲಿಕಾಯತ್‌ ಅಲಿ  (ಬೆಂಗಳೂರಿನಲ್ಲಿದ್ದವರು) ಮತ್ತು ಪಂಚಿಯಪ್ಪನ್‌, ಎ.ರಾಜೇಶ್‌, ಅಬ್ರಾಸನ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಶಂಕಿತರು 2019ರಲ್ಲಿ ತಮಿಳುನಾಡಿನ ಹಿಂದೂ ಮುಖಂಡ ಸುರೇಶ್‌ ಹತ್ಯೆ ಬಳಿಕ ಬೆಂಗಳೂರಿಗೆ ಬಂದು  ಸುದ್ದಗುಂಟೆಪಾಳ್ಯ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಕ್ವಾಜಾ ಮುಯಿದ್ದೀನ್‌ ಅಲಿಯಾಸ್‌ ಜಲಾಲ್‌ ತನ್ನ ಸಹಚರರ ಜತೆ ಸೇರಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಹಲವು ಬಾರಿ ಸಭೆ ನಡೆಸಿದ್ದರು. ಕೋಮು- ಗಲಭೆ ಹಾಗೂ ದೇಶ ವಿರೋಧಿ ಚಟುವಟಿಕೆ ನಡೆಸಲು ಮುಂಬೈ, ದೆಹಲಿಯಿಂದ ಅಕ್ರಮವಾಗಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ಸಂಗ್ರಹಿಸಿದ್ದರು. ಅಲ್ಲದೆ, ನಕಲಿ ದಾಖಲೆ ನೀಡಿ ಸಿಮ್‌ ಕಾರ್ಡ್‌ ಗಳನ್ನು ಬಳಸಿದ್ದರು. ಅದೇ ರೀತಿ  ಹಲವು ಸಿಮ್‌ ಗಳನ್ನು ಪಡೆದಿದ್ದರು ಎಂದು ಚಾರ್ಜ್‌ ಶೀಟ್‌ ನಲ್ಲಿ ಉಲ್ಲೇಖೀಸಿದ್ದಾರೆ.

ಅಲ್ಲದೆ, ಮೆಹಬೂಬ್‌ ಪಾಷಾ, ಕ್ವಾಜಾ ಮೊಹಿದ್ದೀನ್‌ ಹಾಗೂ ಇತರರು ನೇರವಾಗಿ ವಿದೇಶದಲ್ಲಿರುವ ಐಸಿಸ್‌ ಶಂಕಿತರ ಜತೆ ನೇರವಾಗಿ ಸಂಪರ್ಕದಲ್ಲಿದ್ದರು.  ಅವರಿಂದಲೇ ಅಕ್ರಮವಾಗಿ ಶಸಾOಉಸOಉ ತರಿಸಿಕೊಳ್ಳುತ್ತಿದ್ದರು. ಮೆಹಬೂಬ್‌ ಪಾಷಾ ದಕ್ಷಿಣ ಭಾರತದಲ್ಲಿ ಐಸಿಸ್‌ ಸಂಘಟನೆ ಕಟ್ಟಬೇಕೆಂದು ನಿರ್ಧರಿಸಿದ್ದ. ಎಲ್ಲರನ್ನೂ ಒಟ್ಟುಗೂಡಿಸಿ ಸಭೆ ನಡೆಸುತ್ತಿದ್ದ  ಎಂಬುದು ತನಿಖೆ ವೇಳೆ  ತಿಳಿದು ಬಂದಿತ್ತು.

ಜನವರಿ ತಿಂಗಳಲ್ಲಿ ದಾಳಿ: ಶಂಕಿತರು ನಗರದಲ್ಲಿ ನೆಲೆಸಿದ್ದ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಸಿಬಿ ಪೊಲೀಸರು ಮತ್ತು ತಮಿಳುನಾಡಿ ಕ್ಯೂ ಬ್ರಾಂಚ್‌ ಪೊಲೀಸರು ಸುದ್ದಗುಂಟೆ ಠಾಣಾ ವ್ಯಾಪ್ತಿಯ ಗುರಪ್ಪನ ಪಾಳ್ಯದ ಬಾಡಿಗೆ ಮನೆ ಜನವರಿ  ತಿಂಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ 12ಕ್ಕೂ ಹೆಚ್ಚು ಶಂಕಿತರನ್ನು ಬಂಧಿಸಿದ್ದರು. ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ನಂತರ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಗಿತ್ತು. ಇದೀಗ ತನಿಖೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.