ಕೋಲಾರ: ಒಂದೇ ದಿನ 8 ಸೋಂಕಿತರು ಪತ್ತೆ
Team Udayavani, Jun 24, 2020, 7:01 AM IST
ಕೋಲಾರ: ಜಿಲ್ಲೆಯಲ್ಲಿ ಮಂಗಳವಾರ 8 ಕೋವಿಡ್ 19 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 74 ಕ್ಕೇರಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 42 ಆಗಿದ್ದು, ಈವರೆಗೂ 32 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಮನೆಯಲ್ಲಿ ಕ್ವಾರಂಟೈನ್ನಲ್ಲಿದ್ದಾರೆ.
ನಿನ್ನೆಯವರೆಗೂ ಜಿಲ್ಲೆಯಲ್ಲಿ 66 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಂಗಳವಾರ 23 ವರ್ಷದ ಹೆಂಗಸು ಪಿ.9538, 44 ವರ್ಷದ ಮಹಿಳೆ ಪಿ.9539 ಸೋಂಕು ಪೀಡಿತರಾಗಿದ್ದು, ಇವರ ಸಂಪರ್ಕಕ್ಕೆ ಕಾರಣಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಪಿ.9541 ಸಂಪರ್ಕದಲ್ಲಿದ್ದ 33 ವರ್ಷದ ಮಹಿಳೆ ಪಿ.9540 ಆಗಿ ಸೋಂಕಿತರಾಗಿದ್ದಾರೆ. ಪಿ.9541 25 ವರ್ಷದ ಮಹಿಳೆ ಪಿ.8810 ಸಂಪರ್ಕದಿಂದ ಸೋಂಕಿತರಾಗಿದ್ದಾರೆ. ಪಿ.9542 23 ವರ್ಷದ ಮಹಿಳೆ ಪಿ.9541 ಸಂಪರ್ಕದಿಂದ ಸೋಂಕಿತರಾಗಿದ್ದಾರೆ.
ಪಿ.9542 ಸಂಖ್ಯೆಯ 35 ವರ್ಷದ ಮಹಿಳೆಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ, ಪಿ.9544 ಸಂಖ್ಯೆ 40 ವರ್ಷದ ವ್ಯಕ್ತಿಯ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಾ ಸೋಂಕಿತರಾಗಿದ್ದಾರೆ. ಪಿ.9545 ಸಂಖ್ಯೆಯ 29 ವರ್ಷದ ಪುರುಷನ ಸಂಪರ್ಕವನ್ನು ತನಿಖೆ ನಡೆಸಲಾಗುತ್ತಿದೆ. ಈ ಎಲ್ಲಾ ಎಂಟು ಮಂದಿ ಸೋಂಕಿತರನ್ನು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಕೋಲಾರ ಜಿಲ್ಲೆಯಿಂದ ಯಾವ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿಲ್ಲ ಹಾಗೂ ಯಾವುದೇ ಸೋಂಕಿತರು ಸಾವನ್ನಪ್ಪಿಲ.
ಕೋವಿಡ್ 19 ಸೋಂಕು; 2 ಗ್ರಾಮ ಸೀಲ್ಡೌನ್
ಮುಳಬಾಗಿಲು: ತಾಲೂಕಿನ ಆವಣಿ ಹೋಬಳಿ ಬಂಡಹಳ್ಳಿ ಮತ್ತು ಭಟ್ಲಭಾವನಹಳ್ಳಿ ಗ್ರಾಮಗಳಲ್ಲಿ ಮಂಗಳವಾರ ತಲಾ ಒಬ್ಬರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಕೋಲಾ ರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಡಹಳ್ಳಿ ಗ್ರಾಮದ 35 ವರ್ಷದ ಗಾರೆ ಮೇಸ್ತ್ರಿ ಇತ್ತೀಚಿಗೆ ಆಂಧ್ರದ ವಿ.ಕೋಟೆಗೆಹೋಗಿ ಬಂದ ಹಿನ್ನೆಲೆಯಲ್ಲಿ ಆತನಿಗೆ ಸೋಂಕು ದೃಢಪಟ್ಟಿದೆ.
ಅದೇ ರೀತಿ ಭಟ್ಲಭಾ ವನಹಳ್ಳಿ ಗ್ರಾಮದ 35 ವರ್ಷದ ಮಹಿಳೆ ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಕೋವಿಡ್ 19 ಪಾಸಿಟೀವ್ ಬಂದಿದೆ. ಕಂದಾಯ, ಪೊಲೀಸ್, ಆರೋಗ್ಯ ಇಲಾಖೆ ಮತ್ತು ಗ್ರಾಪಂ ಅಧಿಕಾರಿಗಳು ಕೂಡಲೇ ಎರಡು ಗ್ರಾಮಗಳಿಗೆ ತೆರಳಿ ಸೀಲ್ಡೌನ್ ಮಾಡಿ, ಸೋಂಕು ನಿವಾರಕ ಔಷಧಿ ಸಿಂಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ