ಕಾಳಗಿಗೆ ಗ್ರಾಮಗಳ ಸೇರ್ಪಡೆಗೆ ವಿರೋಧ
Team Udayavani, Jun 24, 2020, 8:09 AM IST
ಕಲಬುರಗಿ: ಚಿತ್ತಾಪುರ ತಾಲೂಕಿನ ಇಂಗನಕಲ್, ತೋನಸನಹಳ್ಳಿ (ಟಿ), ಮಲಕೂಡ, ಮಾಡಬೂಳ, ಮುಗುಟಾ, ಮತ್ತಿಮೂಡ ಗ್ರಾಮಗಳನ್ನು ಕಾಳಗಿ ತಾಲೂಕಿಗೆ ಸೇರ್ಪಡೆ ಮಾಡುವುದನ್ನು ಕೈಬಿಟ್ಟು ಚಿತ್ತಾಪುರ ತಾಲೂಕಿನಲ್ಲಿಯೇ ಮುಂದುವರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮಸ್ಥರ ನಿಯೋಗ ಮಂಗಳವಾರ ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿ, ಚಿತ್ತಾಪುರ ತಾಲೂಕಿನ 12 ಗ್ರಾಮಗಳನ್ನು ಕಾಳಗಿ ತಾಲೂಕಿಗೆ ಸೇರ್ಪಡೆ ಮಾಡಲಾಗಿದೆ. ಇದರಿಂದಾಗಿ ಈ ಗ್ರಾಮಸ್ಥರಿಗೆ ತೊಂದರೆಯಾಗಲಿದೆ ಎಂದು ತಾಲೂಕಾಡಳಿದ ಗಮನ ತರಲಾಯಿತು. ಸರ್ಕಾರ ತಾಲೂಕು ವಿಂಗಡಣೆ ಮಾಡಬೇಕಾದರೆ ಒಂದು ಸಮಿತಿ ರಚಿಸಿ, ಗ್ರಾಮಸ್ಥರ ಅಭಿಪ್ರಾಯ ಸಂಗ್ರಹ ಮಾಡಿ ತಾಲೂಕನ್ನು ವಿಭಜನೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಕೆಲ ರಾಜಕಾರಣಿಗಳು ಸ್ವಾರ್ಥ ರಾಜಕಾರಣಕ್ಕಾಗಿ ಈ ಹಳ್ಳಿಗಳನ್ನು ಮಾರ್ಪಾಡು ಮಾಡಿ ಕಾಳಗಿ ತಾಲೂಕಿಗೆ ಸೇರ್ಪಡೆ ಮಾಡಿರುವುದು ತಮ್ಮ ವಿರೋಧವಿದೆ ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್ ತಿಳಿಸಿದರು.
ತಹಶೀಲ್ದಾರ್ ಉಮಾಕಾಂತ ಹಳ್ಳೆ ಮನವಿ ಪತ್ರ ಸ್ವೀಕರಿಸಿದರು. ಜಿ.ಪಂ ಸದಸ್ಯ ಶಿವರುದ್ರ ಭೀಣಿ, ಗ್ರಾ.ಪಂ ಮಾಜಿ ಅಧ್ಯಕ್ಷ ಸುನೀಲ ದೊಡ್ಮನಿ, ತಾ.ಪಂ ಸದಸ್ಯ ಬಸವರಾಜ ಹೊಸಳ್ಳಿ, ಪ್ರಮುಖರಾದ, ರಾಜಶೇಖರ ತಿಮ್ಮನಾಯಕ್, ಶರಣಗೌಡ ಪಾಟೀಲ, ಶಂಕರ ಐನಾಪುರ, ನಾಗರಾಜ ಬಾಳಿ, ಸಿದ್ಧುಗೌಡ, ಮಲ್ಲಿಕಾರ್ಜುನ, ಬೀರಪ್ಪ, ಕಾಂತಪ್ಪ ಅಂಕಲಗಿ, ಕಾಲೇಶಸಾಬ ಮುತ್ಯಾ, ಶಿವು ಕೋಳಕುರ, ಸಿದ್ಧಪ್ಪ ಹಲಚೇರಿ, ಷರೀಫ ಕೋಡ್ಲಿ, ಖಲೀಲಮಿಯ್ನಾ, ಸಿದ್ಧಣ್ಣ ಮಗಿ, ರುಕುಮಷಾ ದುಕಾನದಾರ, ಶಿವುಕುಮಾರ, ವಿಠಲ್ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
Kamalapur: ಜಾತಿ ನಿಂದನೆ ಕೇಸ್ಗೆ ಹೆದರಿ ಯುವಕ ಆತ್ಮಹತ್ಯೆ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
MUST WATCH
ಹೊಸ ಸೇರ್ಪಡೆ
ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ
ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ
BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
ಅಮಿತಾಭ್ ಟು ಶಾರುಖ್: ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ