ಪತಂಜಲಿ ಕೋವಿಡ್ ಔಷಧಿಗೆ ಆಯುಷ್ ಸಚಿವಾಲಯದಿಂದ ತಡೆ: ವಿವರ ನೀಡಲು ಸೂಚನೆ


Team Udayavani, Jun 24, 2020, 8:10 AM IST

pathanjali-coronil

ನವದೆಹಲಿ: ಕೋವಿಡ್ 19 ವೈರಸ್ ಹೊಡೆದೋಡಿಸಲು ಪತಂಜಲಿ ಬಿಡುಗಡೆ ಮಾಡಿದ ಔಷಧಿಗೆ ಕೇಂದ್ರ ಸರ್ಕಾರ ತಡೆಯೊಡ್ಡಿದೆ. ಏಳು ದಿನಗಳಲ್ಲಿ ಸೋಂಕಿತ ವ್ಯಕ್ತಿಯನ್ನು  ಗುಣಪಡಿಸುವ ಸಾಮರ್ಥ್ಯ ಈ ಔಷಧಿಗಿದೆಯೆಂದು ಹೇಳಿದ್ದ ಯೋಗ ಗುರು ಬಾಬಾ ರಾಮ್ ದೇವ್ ಅವರಿಗೆ ಈಗ ತೀವ್ರ ಹಿನ್ನಡೆಯಾಗಿದ್ದು, ಆಯಷ್ ಸಚಿವಾಲಯ ಔಷಧಿ ಸಂಶೊಧನೆ ಕುರಿತು ವಿವರ ಸಲ್ಲಿಸುವಂತೆ ಸೂಚನೆ ನೀಡಿದೆ.

ಮಾತ್ರವಲ್ಲದೆ ಪತಂಜಲಿ ಸಂಸ್ಥೆ ನಡೆಸಿದ ಸಂಶೋಧನೆಯನ್ನು ಸರಕಾರ ಪರಿಶೀಲನೆ ಮತ್ತು, ಅಧ್ಯಯನ ನಡೆಸಿದ ನಂತರೆವೇ ಅದನ್ನು ಮಾರುಕಟ್ಟೆಗೆ ಬಿಡಿಗಡೆ ಮಾಡಬೇಕು. ಅದರ ಜೊತೆಗೆ  ಔಷಧಿ ಕುರಿತು ಜಾಹೀರಾತು ನೀಡುವುದನ್ನು ನಿಲ್ಲಿಸಬೇಕು ಎಂದು ಆಯುಷ್ ಸಚಿವಾಲಯ ಆದೇಶಿಸಿದೆ.

ಕೊರೊನಿಲ್ ಔಷಧಿಗಳನ್ನು ದೇಶಾದ್ಯಂತ 280 ರೋಗಿಗಳ ಸಂಶೋಧನೆ ಮತ್ತು ಪ್ರಯೋಗಗಳ ಆಧಾರದ ಮೇಲೆ ಅಭಿವೃದ್ಧಿಪಡಿಸಲಾಗಿದೆ. ಈ ಔಷಧದ ಬೆಲೆ 545 ರೂ. ಗಳು. ಇದನ್ನು ಒಂದು ವಾರದೊಳಗೆ ಭಾರತದಾದ್ಯಂತ ಮಾರಾಟ ಮಾಡಲಾಗುವುದು ಎಂದು ಬಾಬಾ ರಾಮ್ ದೇವ್ ತಿಳಿಸಿದ್ದರು.

ಈ ಬಗ್ಗೆ ಸ್ಪಷ್ಟನೆ ಕೇಳಿದ ಆಯುಷ್ ಸಚಿವಾಲಯವು, ಕೊರೋನಿಲ್ ಔಷಧ  ಸಂಶೋಧನೆಯ ಫಲಿತಾಂಶಗಳು, ಕ್ಲಿನಿಕಲ್ ಪ್ರಯೋಗಗಳು, ಸಂಶೋಧನೆ ನಡೆಸಿದ ಆಸ್ಪತ್ರೆಗಳು, ಪತಂಜಲಿ ಕಂಪನಿಯು  ಔಷಧಿ ಸಿದ್ದಪಡಿಸಲು ಅನುಮತಿ ಪಡೆದಿದೆಯೇ ಮತ್ತು ನೋಂದಾಯಿಸಿಕೊಂಡಿದೆಯೇ ಎಂಬ ವಿವರಗಳನ್ನು ನೀಡುವಂತೆ ಕೇಳಿದೆ.

ಇದರ ಜೊತೆಗೆ ಉತ್ತರಾಖಂಡದ ಹರಿದ್ವಾರದಲ್ಲಿ ತಯಾರಿಸಿದ ಆಯುರ್ವೇದ ಔಷಧಿಗಳ ಪರವಾನಗಿ ಮತ್ತು ಉತ್ಪನ್ನ ಅನುಮೋದನೆ ವಿವರಗಳನ್ನು ನೀಡುವಂತೆ ಅಲ್ಲಿನ ಸರಕಾರಕ್ಕೆ ಆಯುಷ್ ಸಚಿವಾಲಯ ಮನವಿ ಮಾಡಿದೆ.

ಈ ಕುರಿತು ಮಾತನಾಡಿದ ಪತಂಜಲಿ ಸಿಇಒ ಆಚಾರ್ಯ ಬಾಲಕೃಷ್ಣ, ಎಲ್ಲಾ ಮಾದರಿಯ ಪರೀಕ್ಷೆಗಳನ್ನು ಶೇಕಡಾ 100 ರಷ್ಟು ಪೂರೈಸಲಾಗಿದೆ. ಈ ಕುರಿತ ಮಾಹಿತಿಯನ್ನು ಆಯುಷ್ ಸಚಿವಾಲಯಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರನ್ನು ದಾರಿ ತಪ್ಪಿಸಲಾಗಿದೆ ಎಂದು ಪತಂಜಲಿ ವಿರುದ್ಧ ರಾಜಸ್ಥಾನ ಮತ್ತು ಹರ್ಯಾಣದಲ್ಲಿ ಎರಡು ಪೊಲೀಸ್ ದೂರುಗಳು ದಾಖಲಾಗಿವೆ. ಜೊತೆಗೆ ಐಸಿಎಂಆರ್ ಕೂಡ ಯೋಗ ಗುರು ಸಂಸ್ಥೆಯ ಔಷಧದ ಬಗ್ಗೆ ದೂರ ಉಳಿಯಲು ನಿರ್ಧರಿಸಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.