ಬೀದರನಲ್ಲಿ ಮತ್ತೆ ಕೋವಿಡ್ ಆರ್ಭಟ

ನಿನ್ನೆ 22 ಪಾಸಿಟಿವ್‌  524ಕ್ಕೇರಿದ ಸೋಂಕಿತರ ಸಂಖ್ಯೆ 42 ಜನ ಗುಣಮುಖ ಹಳ್ಳಿ ಹಳ್ಳಿಗೂ ವ್ಯಾಪಿಸಿದ ಹೆಮ್ಮಾರಿ

Team Udayavani, Jun 24, 2020, 12:06 PM IST

24-June-05

ಬೀದರ: ಗಡಿ ನಾಡು ಬೀದರನಲ್ಲಿ ಸೋಮವಾರವಷ್ಟೇ ಕೊಂಚ ತಗ್ಗಿದ್ದ ಕೋವಿಡ್ ವೈರಸ್‌ ಮಂಗಳವಾರ ಮತ್ತೆ ಆರ್ಭಟಿಸಿದ್ದು, ಮೂರು ವರ್ಷದ ಮಗು ಸೇರಿ 22 ಹೊಸ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 524ಕ್ಕೆ ಏರಿಕೆ ಆಗಿದೆ. ಇನ್ನೊಂದೆಡೆ 42 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ.

ಒಂದು ವಾರ ಕಾಲ ಕೋವಿಡ್ ನಿಂದ ಸರಣಿ ಸಾವಿನಿಂದ ಕಂಗೆಟ್ಟಿದ್ದ ಬೀದರ ಜನತೆ ಸೋಮವಾರ ಸ್ವಲ್ಪ ಮಟ್ಟಿಗೆ ನಿಟ್ಟಿಸಿರುವ ಬಿಟ್ಟಿದ್ದರು. ಆದರೆ, ಮಂಗಳವಾರ 22 ಸೋಂಕಿತರು ಪತ್ತೆಯಾಗಿದ್ದು, ಬಹುತೇಕರು ಜಿಲ್ಲೆಯ ಗ್ರಾಮೀಣ ಭಾಗಕ್ಕೆ ಸೇರಿದವರಾಗಿದ್ದಾರೆ. 6 ಸೋಂಕಿತರು ಪಿ-7090 ರೋಗಿಯ ಸಂಪರ್ಕದಿಂದ, 11 ಕೇಸ್‌ ಮಹಾರಾಷ್ಟ್ರ ಮತ್ತು 2 ಕೇಸ್‌ ಗಳು ತೆಲಂಗಾಣಾ ಸಂಪರ್ಕದಿಂದ ವೈರಸ್‌ ವಕ್ಕರಿಸಿದೆ.

ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ ಅತಿ ಹೆಚ್ಚು ಕೋವಿಡ್ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಕಮಲನಗರ ತಾಲೂಕಿನ ಹಾರೋಹಳ್ಳಿ ಗ್ರಾಮದ 4, ಕೊಟಗ್ಯಾಳ್‌, ಹಕ್ಯಾಳ್‌, ಹೊಳಸಮುದ್ರ, ಮುರ್ಕಿ ಮತ್ತು ಹಾಲಹಳ್ಳಿ ಗ್ರಾಮದ ತಲಾ 2, ಹೊಕ್ರಾಣಾ, ಬಳತ (ಕೆ) ಮತ್ತು ಕಮಲನಗರ ಪಟ್ಟಣದಲ್ಲಿ ತಲಾ 1 ಕೇಸ್‌ಗಳು ಪತ್ತೆಯಾಗಿದ್ದರೆ, ಬೀದರ ನಗರದಲ್ಲಿ 3 ಹಾಗೂ ಔರಾದ ಪಟ್ಟಣದಲ್ಲಿ 2 ಪ್ರಕರಣಗಳು ವರದಿಯಾಗಿವೆ.

22 ವರ್ಷದ ಪುರುಷ (ಪಿ-9611), 48 ವರ್ಷದ ಮಹಿಳೆ (ಪಿ-9612), 39 ವರ್ಷದ ಮಹಿಳೆ (ಪಿ-9613), 17 ವರ್ಷದ ಯುವಕ (ಪಿ-9614), 56 ವರ್ಷದ ಮಹಿಳೆ (ಪಿ-9615), 51 ವರ್ಷದ ಮಹಿಳೆ (ಪಿ-9616), 54 ವರ್ಷದ ಪುರುಷ (ಪಿ-9617), 40 ವರ್ಷದ ಪುರುಷ (ಪಿ-9618), 34 ವರ್ಷದ ಮಹಿಳೆ (ಪಿ-9619), 35 ವರ್ಷದ ಮಹಿಳೆ (ಪಿ-9620), 10 ವರ್ಷದ ಬಾಲಕಿ (ಪಿ-9621), 40 ವರ್ಷದ ಮಹಿಳೆ (ಪಿ-9622), 65 ವರ್ಷದ ವೃದ್ಧೆ (ಪಿ-9623), 3 ವರ್ಷದ ಹೆಣ್ಣುಮಗು (ಪಿ-9624), 49 ವರ್ಷದ ಪುರುಷ (ಪಿ-9625), 19 ವರ್ಷದ ಯುವಕ (ಪಿ-9626), 20 ವರ್ಷದ ಮಹಿಳೆ (ಪಿ-9627), 49 ವರ್ಷದ ಪುರುಷ (ಪಿ-9628), 23 ವರ್ಷದ ಪುರುಷ (ಪಿ-9629), 19 ವರ್ಷದ ಯುವತಿ (ಪಿ-9630), 30 ವರ್ಷದ ಮಹಿಳೆ (ಪಿ-9631) ಮತ್ತು 23 ವರ್ಷದ ಮಹಿಳೆ (ಪಿ-9632) ರೋಗಿಗಳಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಈವರೆಗೆ 524 ಪಾಸಿಟಿವ್‌ ಪ್ರಕರಣಗಳು ವರದಿಯಾದಂತಾಗಿದೆ. ಅದರಲ್ಲಿ 15 ಜನ ಸಾವನ್ನಪ್ಪಿದ್ದರೆ 366 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇನ್ನೂ 143 ಸಕ್ರೀಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.