ಕೋವಿಡ್ ತಡೆಗೆ ಮುಂಜಾಗ್ರತೆ ವಹಿಸಿ: ಒಡೆಯರ್ ಸಲಹೆ
Team Udayavani, Jun 24, 2020, 12:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಹಾಪುರ: ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೋವಿಡ್ ವೈರಸ್ ಅಪಾಯಕಾರಿಯಾಗಿದೆ. ಇದರ ತಡೆಗೆ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಸೇರಿಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಗೋಗಿ ಪೊಲೀಸ್ ಠಾಣೆ ಪಿಎಸ್ಐ ಸೋಮಲಿಂಗ ಒಡೆಯರ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ತಾಲೂಕಿನ ಗೋಗಿ ಗ್ರಾಮದಲ್ಲಿ ಹಮ್ಮಿಕೊಂಡ ಬಡ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಮತ್ತು ಮಾಸ್ಕ್ ವಿತರಣೆ ಮತ್ತು ಕೋವಿಡ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜನರು ಮನೆಯಿಂದ ಹೊರಗಡೆ ಹೋದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಪಾಲಿಸಬೇಕು. ಮತ್ತು ಯಾವುದಾದರೂ ವಸ್ತುಗಳನ್ನು ಮುಟ್ಟಿದರೆ ಸ್ಯಾನಿಟೈಸರ್ನಿಂದ ಕೈ ತೊಳೆದುಕೊಳ್ಳಬೇಕು. ಮನೆಗೆ ತೆಗೆದುಕೊಂಡು ಬಂದ ವಸ್ತುಗಳನ್ನು ತೊಳೆಯಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ| ಚನ್ನಾರಡ್ಡಿ ಎಂ. ತಂಗಡಗಿ ಮಾತನಾಡಿದರು. ಎನ್ನೆಸ್ಸೆಸ್ ಘಟಕ ಅಧಿಕಾರಿ ಡಾ| ರಾಜು ಶಾಮರಾವ್ ಪ್ರಾಸ್ತಾವಿಕ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ