ಸಿರಿಗೇರಿಯಲ್ಲಿ ಅತಿಹೆಚ್ಚು ಮಳೆ
Team Udayavani, Jun 24, 2020, 4:25 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಿರುಗುಪ್ಪ: ತಾಲೂಕಿನ ವಿವಿಧ ಕಡೆಗಳಲ್ಲಿ ಸೋಮವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಈಗಾಗಲೇ ಬಿತ್ತನೆ ಮಾಡಿದ ಹತ್ತಿ, ಸೂರ್ಯಕಾಂತಿ, ನವಣೆ ಮತ್ತು ಭತ್ತದ ಸಸಿ ಮಡಿಗಳು ಬೆಳೆಯಲು ಈ ಮಳೆ ಸಹಕಾರಿಯಾಗಿದ್ದು, ತಾಲೂಕಿನ ಕೆಲ ಭಾಗಗಳಲ್ಲಿ ಹತ್ತಿ ಬೀಜ ನಾಟಿ ಮಾಡುವ ಕಾರ್ಯದಲ್ಲಿ ರೈತರು ತೊಡಗಿರುವುದು ಕಂಡುಬಂತು.
ಸಿರಿಗೇರಿಯಲ್ಲಿ 40.1 ಮಿಮೀ ಅತಿಹೆಚ್ಚು, ಕೆ.ಬೆಳಗಲ್ನಲ್ಲಿ ಅತಿಕಡಿಮೆ 6.8 ಮಿಮೀ ಮಳೆಯಾಗಿದ್ದು, ತೆಕ್ಕಲಕೋಟೆ 9.2, ಸಿರಿಗೇರಿ 40.1, ಎಂ.ಸೂಗೂರು 14.6, ರಾವಿಹಾಳ್ 7.2, ಕರೂರು 32.6, ಕೆ.ಬೆಳಗಲ್ 6.8 ಮಿಮೀ ಮಳೆಯಾಗಿದೆ ಎಂದು ತಾಲೂಕು ಸಾಂಖ್ಯಿಕ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೋಮವಾರ ರಾತ್ರಿ ಸುರಿದ ಮಳೆಯಿಂದ ಈಗಾಗಲೆ ಬಿತ್ತನೆ ಮಾಡಿದ ಬೆಳೆಗಳಿಗೆ ಅನುಕೂಲವಾಗಿದೆ. ಅಲ್ಲದೆ ಕೆಲವು ಕಡೆ ಸೋಮವಾರವು ಬಿತ್ತನೆ ಕಾರ್ಯ ಆರಂಭವಾಗಿದೆ ಎಂದು ಕೃಷಿ ಇಲಾಖೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮ್ಮದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!