ತುರುವೇಕೆರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ಧತೆ


Team Udayavani, Jun 25, 2020, 6:17 AM IST

uruvekere

ತುರುವೇಕೆರೆ: ಕೋವಿಡ್‌ 19 ಹಿನ್ನೆಲೆಯಲ್ಲಿ ಗುರುವಾರ ದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿದ್ದು ಶಿಕ್ಷಣ ಇಲಾಖೆ ಸರ್ಕಾರಗಳ ಮಾನದಂಡ ಅನ್ವಯ ಅಗತ್ಯ ಮುಂಜಾಗ್ರತೆ ಕ್ರಮದೊಂದಿಗೆ ಸಕಲ ಸಿದ್ಧತೆಗಳನ್ನು  ಕೈಗೊಂಡಿದ್ದು, ಈ ಬಗ್ಗೆ ಪೋಷಕರಾಗಲಿ, ವಿದ್ಯಾರ್ಥಿಗಳಾಗಲಿ ಆತಂಕಗೊಳ್ಳುವ ಪ್ರಮೇಯವಿಲ್ಲ. ತಾಲೂಕಾದ್ಯಂತ 17 ಸರ್ಕಾರಿ, 27 ಅನುದಾನಿತ, 11 ಅನುದಾನ ರಹಿತ ಸೇರಿದಂತೆ ಒಟ್ಟು 55 ಪ್ರೌಢಶಾಲೆಗಳಿವೆ. ಪ್ರಸ್ತುತ 2020ರ  ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 1946 ಹೊಸ, 73 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ, 2016 ಮಂದಿ ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷಾ ಕೇಂದ್ರಗಳು: ತುರುವೇಕೆರೆ ಪಟ್ಟಣದ ಜಿಜೆಸಿ ಸರಸ್ವತಿ ಪ್ರೌಢಶಾಲೆ, ಮಾಯಸಂದ್ರದ ನೆಹರು  ಬಾಲಿಕ ಪ್ರೌಢಶಾಲೆ, ಸೊರವನಹಳ್ಳಿ ವೃತ್ತದ ಎಸ್‌.ಬಿ.ಜೆ ಪ್ರೌಢಶಾಲೆ, ದಬ್ಬೇಘಟ್ಟ ಸರ್ಕಾರಿ ಶಾಲೆ, ದಂಡಿನಶಿವರ ಕೆ.ಪಿ.ಎಸ್‌.ಶಾಲೆ, ಹುಲ್ಲೇಕೆರೆಯ ಬಸವೇಶ್ವರ ಪ್ರೌಢಶಾಲೆ, ಒಳಗೊಂಡಂತೆ 8 ಕೇಂದ್ರಗಳನ್ನು ನಿಗದಿಗೊಳಿಸಿದೆ. ಎಲ್ಲಾ  ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಿದೆ.

ಕೋವಿಡ್‌ 19 ಮಂಜಾಗ್ರತೆ ಹಿನ್ನೆಲೆಯಲ್ಲಿ ಪ್ರತಿ ವಿದ್ಯಾರ್ಥಿಯಿಂದ ವಿದ್ಯಾರ್ಥಿಗೆ 1 ಮೀಟರ್‌ ಅಂತರ ಕಾಯ್ದುಕೊಳ್ಳಲು ಒಂದು ಡೆಸ್ಕ್ಗೆ  ಇಬ್ಬರು ವಿದ್ಯಾರ್ಥಿಗಳು, ಪ್ರವೇಶ  ರದಲ್ಲೇ ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ, ಸ್ಯಾನಿಟೈಸರ್‌ ವ್ಯವಸ್ಥೆ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಲ್ಲಿ ಅನಿರೀಕ್ಷಿತ ಕೆಮ್ಮು, ಜ್ವರ ಕಾಣಿಸಿಕೊಂಡರೆ ಅಂತಹ ವಿದ್ಯಾರ್ಥಿಗಳನ್ನು ಉಳಿದ ವಿದ್ಯಾರ್ಥಿಗಳಿಂದ ಬೇರ್ಪಡಿಸಲು ಎಲ್ಲಾ ಕೇಂದ್ರಗಳಲ್ಲಿ  ಪ್ರತ್ಯೇಕ ಕೊಠಡಿ ಮೀಸಲಿರಿಸಿದೆ.

ಸಿಬ್ಬಂದಿ ಹಾಗೂ ಸಿದ್ಧತೆ: 8 ಮಂದಿ ಚೀಪ್‌ ಕಸ್ಟೋಡಿಯರ್‌, 8 ಮಂದಿ ಸಂಚಾರ ಕಸ್ಟೋಡಿಯನ್‌, ಪ್ರತಿ ಕೊಠಡಿಗೆ ಒಬ್ಬ ಇನ್ವಿಜಿಲೇಟರ್‌, ಸಹಾಯಕರು, ಹೆಚ್ಚುವರಿ ಸಿಬ್ಬಂದಿ ಹಾಗೂ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಸಿಬ್ಬಂದಿ ಸೇರಿ ಅಗತ್ಯ  ಸಿಬ್ಬಂದಿಗಳನ್ನು ಈಗಾಗಲೇ ನೇಮಿಸಿಕೊಳ್ಳಲಾಗಿದೆ. ಪ್ರತಿ ವಿದ್ಯಾರ್ಥಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಶಿಕ್ಷಣ ಇಲಾಖೆ ಸಹ ಮಾಸ್ಕ್ ನೀಡಲಿದೆ.

ಕುಡಿಯುವ ನೀರಿನ ವ್ಯವಸ್ಥೆ ಪರೀಕ್ಷಾ ಕೇಂದ್ರದಲ್ಲಿ ಇದ್ದರೂ ವಿದ್ಯಾರ್ಥಿಗಳ ಆರೋಗ್ಯ  ದೃಷ್ಟಿಯಿಂದ ಸ್ವಂತ ಬಾಟಲಿಯಲ್ಲಿ ನೀರು ಹಾಗೂ ಅವರಿಗೆ ಊಟೋ ಪಚಾರದ ವ್ಯವಸ್ಥೆಯನ್ನು ಅವರ ಪೋಷಕರೇ ಪೂರೈಸಬೇಕು ಹಾಗೂ ಸಂಚಾರದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡು ಇರಬೇಕು. ಪರೀಕ್ಷಾ ಮಂಡಳಿ  ಪ್ರಮಾಣಿತ ಎಸ್‌.ಒ.ಪಿ ಯಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪೋಲಿಸ್‌, ಆರೋಗ್ಯ ಇಲಾಖೆ, ಸ್ಥಳೀಯ ಗ್ರಾಪಂ ಪಟ್ಟಣ ವ್ಯಾಪ್ತಿಯ ಪುರಸಭೆಗಳು ಸ್ವತ್ಛತೆ, ನೈರ್ಮಲ್ಯ ಆರೋಗ್ಯ, ರಕ್ಷಣಾ ವ್ಯವಸ್ಥೆ ಎಲ್ಲವನ್ನೂ ಸುಗಮವಾಗಿ ನೋಡಿಕೊಳ್ಳುವ  ವ್ಯವಸ್ಥೆ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.